ತೆಕ್ಕಟ್ಟೆ: ಚಿರತೆ ಸೆರೆಗೆ ಬೋನಿಟ್ಟ ಅರಣ್ಯ ಇಲಾಖೆ
ಕುಂದಾಪುರ : ತೆಕ್ಕಟ್ಟೆ ಸಮೀಪದ ಮಾಲಾಡಿ ಎಂಬಲ್ಲಿನ ತೋಟದಲ್ಲಿ ಎರಡು ದಿನಗಳ ಹಿಂದೆ ಅರಣ್ಯ ಇಲಾಖೆಯು ಹೆಣ್ಣು ಚಿರತೆಯನ್ನು ಸೆರೆ ಹಿಡಿದ ಬೆನ್ನಲ್ಲೇ ಮತ್ತೊಂದು ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಶನಿವಾರ ಈ ಜಾಗದಲ್ಲಿ ಚಿರತೆಯ ಸೆರೆಗಾಗಿ ಬೋನು ಇಡಲಾಗಿದೆ.
ಮಾಲಾಡಿ ಶ್ರೀನಂದಿಕೇಶ್ವರ ದೇವಸ್ಥಾನ ಬಳಿಯ ತೋಟದಲ್ಲಿ ಚಿರತೆ ನಿರಂತರ ಓಡಾಟದ ಹಿನ್ನೆಲೆ ಅರಣ್ಯ ಇಲಾಖೆ ಬೋನು ಇಟ್ಟಿದ್ದುೆ ಸ್ಥಳೀಯ ನಿವಾಸಿ ಸತೀಶ್ ದೇವಾಡಿಗ, ಸುರೇಶ್ ದೇವಾಡಿಗ ಮನೆಯವರು ಬೋನಿನ ಮತ್ತೊಂದು ಭಾಗಕ್ಕೆ ನಾಯಿ ಕಟ್ಟಿದ್ದಾರೆ ಎಂದು ತಿಳಿದುಬಂದಿದೆ.
Next Story