ಸಾಹಿತಿ, ವಿಮರ್ಶಕ ಎಸ್.ದಿವಾಕರ್ಗೆ ‘ಕಲಾಪ್ರವೀಣ’ ಪ್ರಶಸ್ತಿ
ಉಡುಪಿ : ಕನ್ನಡದ ಹಿರಿಯ ವಿಮರ್ಶಕ, ಸಾಹಿತಿ ಬೆಂಗಳೂರಿನ ಎಸ್.ದಿವಾಕರ್ ಇವರನ್ನು ಉಡುಪಿಯ ರಾಗಧನ ಸಂಸ್ಥೆ, ಕಲಾಲಾವಿಹಾರಿ ಎ.ಈಶ್ವರಯ್ಯ ಸ್ಮರಣಾರ್ಥ ಅವರ ಕುಟುಂಬದವರು ಕೊಡಮಾಡುವ ಈ ವರ್ಷದ ‘ಕಲಾಪ್ರವೀಣ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ಹತ್ತು ಸಾವಿರ ರೂ. ನಗದನ್ನು ಒಳಗೊಂಡಿದೆ. ಮೇ ೧೫ರ ರವಿವಾರ ಅಪರಾಹ್ನ ಮೂರು ಗಂಟೆಗೆ ಪರ್ಕಳದ ಸರಿಗಮ ಭಾರತಿ ಸಂಗೀತ ವಿದ್ಯಾಲಯ ಸಭಾಂಗಣದಲ್ಲಿ ಖ್ಯಾತ ಅಂಕಣಕಾರ, ಸಾಹಿತಿ ಪ್ರೊ. ಮುರಲೀಧರ ಉಪಾಧ್ಯ ಹಿರಿಯಡ್ಕ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಶಿಕ್ಷಣ ತಜ್ಞ ಹಾಗೂ ಸಾಹಿತಿ ಡಾ.ಮಹಾಬಲೇಶ್ವರ ರಾವ್ ಅಭಿನಂದನಾ ಭಾಷಣ ಮಾಡಲಿದ್ದಾರೆ. ಅನಂತರ ಬೆಂಗಳೂರಿನ ಅದಿತಿ ಪ್ರಹ್ಲಾದ್ ಅವರ ಸಂಗೀತ ಕಚೇರಿ ನಡೆಯಲಿದೆ. ಪಿಟೀಲಿನಲ್ಲಿ ತನ್ಮಯಿ ಉಪ್ಪಂಗಳ, ಮೃದಂಗದಲ್ಲಿ ಡಾ. ಬಾಲಚಂದ್ರ ಆಚಾರ್ ಸಹಕರಿಸಲಿದ್ದಾರೆ ಎಂದು ರಾಗಧನದ ಕಾರ್ಯದರ್ಶಿ ಉಮಾಶಂಕರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story