ಸ್ಕೂಟರ್ಗೆ ಬಸ್ ಢಿಕ್ಕಿ: ಸವಾರ ಮೃತ್ಯು
ಕಾರ್ಕಳ : ಬಸ್ಸೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಮೇ 5ರಂದು ಸಂಜೆ ಜಾರ್ಕಳ ಜಂಕ್ಷನ್ ಬಳಿ ನಡೆದಿದೆ.
ಮೃತರನ್ನು ಮಹಾಲಿಂಗ ಎಂದು ಗುರುತಿಸಲಾಗಿದೆ. ಸಹಸಾವರೆ ಶಾರದಾ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರ್ಲಪ್ಪಾಡಿ ರಸ್ತೆ ಕಡೆಯಿಂದ ಜಾರ್ಕಳ ರಸ್ತೆ ಕಡೆಗೆ ಹೋಗುತ್ತಿದ್ದ ಸ್ಕೂಟರ್ಗೆ ಕಾರ್ಕಳ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬಸ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸ್ಕೂಟರ್ ಸವಾರರಿಬ್ಬರು ರಸ್ತೆಗೆ ಬಿದ್ದು ಗಾಯಗೊಂಡರು.
ಇದರಲ್ಲಿ ಗಂಭೀರವಾಗಿ ಗಾಯಗೊಂಡ ಮಹಾಲಿಂಗ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಮಹಾಲಿಂಗ ಹೆಲ್ಮೆಟ್ ಧರಿಸಿದ್ದು, ಹೆಲ್ಮೆಟ್ ಜಖಂಗೊಂಡಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story