ಜೀವ ಬಿಟ್ಟರೂ ಜಗ್ಗದ ಬಿಜೆಪಿ, ರಕ್ತಪತ್ರಕ್ಕೆಲ್ಲ ಬಗ್ಗುವುದೇ?: ಮಾಜಿ ಸಚಿವ ಪ್ರಿಯಾಂಕ್ ಖರ್ಗೆ
PSI ನೇಮಕಾತಿಯಲ್ಲಿ ಅಕ್ರಮ ಪ್ರಕರಣ
ಬೆಂಗಳೂರು, ಮೇ 16: ‘ಗುತ್ತಿಗೆದಾರರು ಪತ್ರಗಳನ್ನು ಬರೆದರು, ಸಂತೋಷ್ ಪಾಟೀಲ್ ಪತ್ರ ಬರೆದರು, ಈಗ ಪಿಎಸ್ಸೈ ಅಕ್ರಮದಿಂದ ನೊಂದವರು ಪತ್ರ ಬರೆದಿದ್ದಾರೆ' ಎಂದು ಕಾಂಗ್ರೆಸ್ ವಕ್ತಾರ ಹಾಗೂ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸೋಮವಾರ ಟ್ವೀಟ್ ಮಾಡಿರುವ ಅವರು, ‘ಸಂತೋಷ್ ಪಾಟೀಲ್ ಜೀವ ಬಿಟ್ಟರೂ ಜಗ್ಗದ ಬಿಜೆಪಿ, ರಕ್ತಪತ್ರಕ್ಕೆಲ್ಲ ಬಗ್ಗುವುದೇ? ಬಿಜೆಪಿ ಆಳ್ವಿಕೆಯಿಂದಾಗಿ ಯುವಕರು ಬದುಕಿನ ಭರವಸೆ ಕಳೆದುಕೊಳ್ಳುತ್ತಿರುವುದಕ್ಕೆ ಇದಕ್ಕಿಂತ ಬೇರೆ ಪುರಾವೆ ಬೇಕಿಲ್ಲ' ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ... ಪಿಎಸ್ಸೈ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ: ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ಅಭ್ಯರ್ಥಿಗಳು
ಗುತ್ತಿಗೆದಾರರು ಪತ್ರಗಳನ್ನು ಬರೆದರು,
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) May 16, 2022
ಸಂತೋಷ್ ಪಾಟೀಲ್ ಪತ್ರ ಬರೆದರು,
ಈಗ ಪಿಎಸ್ಐ ಅಕ್ರಮದಿಂದ ನೊಂದವರು ಪತ್ರ ಬರೆದಿದ್ದಾರೆ.
ಸಂತೋಷ್ ಪಾಟೀಲ್ ಜೀವ ಬಿಟ್ಟರೂ ಜಗ್ಗದ ಬಿಜೆಪಿ, ರಕ್ತಪತ್ರಕ್ಕೆಲ್ಲ ಬಗ್ಗುವುದೇ?
ಬಿಜೆಪಿ ಆಳ್ವಿಕೆಯಿಂದಾಗಿ ಯುವಕರು ಬದುಕಿನ ಭರವಸೆ ಕಳೆದುಕೊಳ್ಳುತ್ತಿರುವುದಕ್ಕೆ ಇದಕ್ಕಿಂತ ಬೇರೆ ಪುರಾವೆ ಬೇಕಿಲ್ಲ. pic.twitter.com/r9n07gvQiK