ಅಲ್ಪಸಂಖ್ಯಾತರ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಉಡುಪಿ, ಮೇ ೧೭: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ -ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ - https://ssp.postmatric.karnataka.gov.in-ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ ೩೧ರವರೆಗೆ ವಿಸ್ತರಿಸಲಾಗಿದೆ.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ -https://dom.karnataka.gov.in/udupi/public-, ಸಹಾಯವಾಣಿ ಸಂಖ್ಯೆ: ೮೨೭೭೭೯೯೯೯೦ ಅಥವಾ ಉಡುಪಿ ದೂ.ಸಂಖ್ಯೆ: ೦೮೨೦-೨೫೭೪೫೯೬, ಕಾರ್ಕಳ ದೂ.ಸಂಖ್ಯೆ : ೦೮೨೫೮-೨೩೧೧೦೧ ಹಾಗೂ ಕುಂದಾಪುರ ದೂ.ಸಂಖ್ಯೆ: ೦೮೨೫೪-೨೩೦೩೭೦ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story