ವರದಕ್ಷಿಣೆ ಕಿರುಕುಳ ಆರೋಪ; ಗೃಹಿಣಿ ಆತ್ಮಹತ್ಯೆ
ಸಹನ - ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಕೆ.ಆರ್.ಪೇಟೆ, ಜೂ.24: ಗೃಹಿಣಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕಾರಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಧು ಎಂಬುವರ ಪತ್ನಿ ಸಹನ(35) ಆತ್ಮಹತ್ಯೆ ಮಾಡಿಕೊಂಡ ಗೃಹಣಿಯಾಗಿದ್ದು, ವರದಕ್ಷಿಣೆ ಕಿರುಕುಳದಿಂದ ಸಹನ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆಕೆಯ ಪೋಷಕರು ಆರೋಪಿಸಿದ್ದಾರೆ.
ಸಹನ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ರೊಚ್ಚಿಗೆದ್ದ ಆಕೆಯ ಪೋಷಕರ ಕಡೆಯವರು ಮಧು ಅವರ ಮನೆಯ ಮುಂದೆ ನಿಂತಿದ್ದ ಕಾರನ್ನು ಜಜ್ಜಿ ಜಖಂಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಪೋಷಕರು ನೀಡಿದ ದೂರನ್ನು ದಾಖಲಿಸಿಕೊಂಡಿರುವ ಕಿಕ್ಕೇರಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಗಳಾದ ಮಧು ಮತ್ತು ಆತನ ಮನೆಯವರು ಪರಾರಿಯಾಗಿದ್ದಾರೆಂದು ವರದಿಯಾಗಿದೆ.
Next Story