ಉಡುಪಿ: ಸಾಮಾಜಿಕ ಕಾರ್ಯಕರ್ತ ಉಚ್ಚಿಲ ಭಾಸ್ಕರ ನಗರದ ನಿವಾಸಿ ಅಬ್ಬಾಸ್ ಅದ್ದು (35) ಅನಾರೋಗ್ಯದಿಂದ ಶುಕ್ರವಾರ ನಿಧನರಾದರು.
ಎಸ್ಡಿಪಿಐ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ ಇವರು, ಭಾಸ್ಕರನಗರ ಸೈಯ್ಯದ್ ಅರಬೀ ಜುಮಾ ಮಸೀದಿ ಅಭಿವೃದ್ಧಿ ಸಮಿತಿ ಹಾಗೂ ಆಡಳಿತ ಕಮಿಟಿ ಸದಸ್ಯರಾಗಿದ್ದರು.
ಮೃತರು ಪತ್ನಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.