ರಾಷ್ಟ್ರಪತಿ ಹುದ್ದೆಗೆ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಿದ ಮಾಯಾವತಿ
ಹೊಸದಿಲ್ಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವುದಾಗಿ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಶನಿವಾರ ಹೇಳಿದ್ದಾರೆ. ಪ್ರತಿಪಕ್ಷಗಳು ತನ್ನನ್ನು ಸಂಪರ್ಕಿಸಿಲ್ಲ ಎಂದು ಉತ್ತರಪ್ರದೇಶದ ಮಾಜಿ ಸಿಎಂ ಹೇಳಿದ್ದಾರೆ ಎಂದು NDTV ವರದಿ ಮಾಡಿದೆ. ಬಿಎಸ್ಪಿ ಉತ್ತರಪ್ರದೇಶದಲ್ಲಿ ಓರ್ವ ಶಾಸಕನನ್ನು ಹೊಂದಿದೆ. ಲೋಕಸಭೆಯಲ್ಲಿ 10 ಹಾಗೂ ರಾಜ್ಯಸಭೆಯಲ್ಲಿ 3 ಸಂಸದರನ್ನು ಹೊಂದಿದೆ. ರಾಜಸ್ಥಾನದಲ್ಲಿ 6 ಶಾಸಕರಿದ್ದರೂ ಅವರೆಲ್ಲರೂ 2019ರಲ್ಲಿ ಕಾಂಗ್ರೆಸ್ ನೊಂದಿಗೆ ವಿಲೀನರಾಗಿದ್ದಾರೆ.
Next Story