ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ 50ನೇ ವರ್ಷಾಚರಣೆ; ಸಿಎಂ ಬೊಮ್ಮಯಿ ಚಾಲನೆ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಇಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ 50 ನೇ ವರ್ಷಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿದರು.
ಈ ಸಂದರ್ಭ ಅರಣ್ಯ ಸಚಿವರಾದ ಉಮೇಶ ಕತ್ತಿ, ಕಂದಾಯ ಸಚಿವರಾದ ಆರ್ ಅಶೋಕ, ಸಂಸದ ಪಿಸಿ ಮೋಹನ್, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನೂರಾಧಾ ಮತ್ತು ಇತರರು ಉಪಸ್ಥಿತರಿದ್ದರು.