ಬಂಟ್ವಾಳ: ಚೂರಿಯಿಂದ ಇರಿದು ಮಹಿಳೆಯ ಕೊಲೆ
ಆಟೋದಲ್ಲಿ ಬಂದ ತಂಡದಿಂದ ಕೃತ್ಯ
ಬಂಟ್ವಾಳ: ಆಟೋದಲ್ಲಿ ಬಂದ ತಂಡವೊಂದು ಮಹಿಳೆಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ವಿಟ್ಲ ಸಮೀಪದ ಮಾಣಿ ನೇರಳಕಟ್ಟೆ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.
ಮಾಣಿಯ ಕಾಪಿಕಾಡು ನಿವಾಸಿ ದಿ. ತ್ಯಾಂಪ ಪೂಜಾರಿ ಎಂಬವರ ಪುತ್ರಿ, ಪ್ರಸಕ್ತ ಅನಂತಾಡಿಯ ದೇವಿ ನಗರ ನಿವಾಸಿ ಶಕುಂತಾಳ (35) ಮೃತರು ಎಂದು ಗುರುತಿಸಲಾಗಿದೆ.
ಅವರು ಪುತ್ತೂರು ಕಡೆಯಿಂದ ಮಾಣಿ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾದಲ್ಲಿ ಬಂದ ತಂಡ ಚೂರಿಯಿಂದ ದಾಳಿ ನಡೆಸಿದೆ. ಗಂಭೀರ ಗಾಯಗೊಂಡಿದ್ದ ಶಕುಂತಾಳ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು, ಈ ವೇಳೆ ಅವರು ಮೃತಪಟ್ಟಿದ್ದರು ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
Next Story