ಉಡುಪಿಯನ್ನು ನೆರೆಪೀಡಿತ ಜಿಲ್ಲೆಯೆಂದು ಘೋಷಿಸಲು ಜಿಲ್ಲಾ ಕಾಂಗ್ರೆಸ್ ಮನವಿ
ಉಡುಪಿ, ಜು.12: ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿದ ಪರಿಣಾಮˌ ಗಾಳಿ ಮಳೆಗೆ ಹಲವು ಮನೆಗಳು ಹಾನಿಗೊಂಡಿವೆ. ಕೃಷಿ ಭೂಮಿಗಳು ಜಲಾವೃತ ಗೊಂಡಿವೆˌ ಈ ಹಿನ್ನೆಲೆಯಲ್ಲಿ ಉಡುಪಿಯನ್ನು ನೆರೆಪೀಡಿತ ಜಿಲ್ಲೆಯೆಂದು ಘೋಷಿಸಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೇತೃತ್ವದಲ್ಲಿ ಮುಖ್ಯಮಂತ್ರಿಗೆ ಮನವಿಯ ಮೂಲಕ ಆಗ್ರಹಿಲಾಯಿತು.
ಈ ಸಂಬಂಧ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ವೀಣಾ ಅವರ ಮೂಲಕ ಮಂಗಳವಾರ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆˌ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ..ಎ.ಗಪೂರ್ˌ ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೊˌ ವಕ್ತಾರರಾದ ಭಾಸ್ಕರ ರಾವ್ ಕಿದಿಯೂರುˌ ಮುಖಂಡರಾದ ಗಣೇಶ್ ಕೋಟ್ಯಾನ್ˌ ಅಶೋಕ್ ನ್ಯಾಯರಿˌ ಸುಧೀರ್ ಪಡುಬಿದ್ರೆ ಉಪಸ್ಥಿತರಿದ್ದರು.
Next Story