ಸಮಾಜದೊಳಗಿನ ಕಂದಕ ಸರಿಪಡಿಸುವ ಕಾರ್ಯ ಅಗತ್ಯ: ವಿನಯ ಕುಮಾರ್ ಸೊರಕೆ
ನೇರಳಕಟ್ಟೆ- ತಲ್ಲೂರುವರೆಗೆ ಕಾಂಗ್ರೆಸ್ ಪಾದಯಾತ್ರೆ
ಬೈಂದೂರು, ಆ.10: ಗಾಂಧಿ ತತ್ವದಲ್ಲಿ ಶಾಂತಿ, ಸಹಬಾಳ್ವೆ, ಸೌಹಾರ್ಧಕ್ಕಾಗಿ ಈ ಪಾದಯಾತ್ರೆ ಮಾಡುತ್ತಿದ್ದು ವಿವಿಧತೆಯಲ್ಲಿ ಏಕತೆಯ ನಡುವೆ ಎಲ್ಲರೂ ಸಮಾನರು ಎಂಬುದನ್ನು ಮನಗಾಣಬೇಕು. ದ್ವೇಷದ ಮನೋಭಾವನೆ ಬಿಟ್ಟು ಪ್ರೀತಿಯ ಮನೋಭಾವನೆಯೊಂದಿಗೆ ಸಮಾಜದೊಳಗಿನ ಕಂದಕ ಸರಿಪಡಿಸುವ ಕಾರ್ಯ ಆಗಬೇಕು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ನೇರಳಕಟ್ಟೆಯಿಂದ ತಲ್ಲೂರು ವರೆಗಿನ ಪಾದಯಾತ್ರೆ ಬಳಿಕ ತಲ್ಲೂರಿನ ಮೂರ್ತೇದಾರರ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ದೇಶದಲ್ಲಿ ವಿವಿಧ ಧರ್ಮ, ಜಾತಿ, ಭಾಷೆಯಿದ್ದರೂ ಕೂಡ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಕೊಟ್ಟ ಸಂವಿಧಾನದ ಆಶಯದಂತೆ ನಡುವಿನ ಗೋಡೆ ಒಡೆದು ಸಾಮಾಜಿಕ ನ್ಯಾಯದ ಕಡೆಗೆ ಮುಖಮಾಡಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಕ್ರಾಂತಿಕಾರಿ ಹೆಜ್ಜೆಯಿಟ್ಟಿದ್ದು ಬದುಕು ಕಟ್ಟಿಕೊಡುವ ಕಾರ್ಯಕ್ರಮ ರೂಪಿಸಿದೆ. ಆದರೆ ಬಿಜೆಪಿ ಭಾವನಾತ್ಮಕ ವಿಚಾರಗಳನ್ನು ಮುಂದಿರಿಸಿಕೊಂಡು ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದರು.
ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿದರು. ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ಮಾಜಿ ಜಿಪಂ ಅಧ್ಯಕ್ಷ ರಾಜು ಪೂಜಾರಿ, ಜಿಲ್ಲಾ ಎಸ್ಸಿ ಘಟಕದ ಜಯರಾಮ ನಾಯ್ಕ್, ಮುಖಂಡರುಗಳಾದ ಸಂಪಿಗೇಡಿ ಸಂಜೀವ ಶೆಟ್ಟಿ, ವಾಸುದೇವ ಯಡಿಯಾಳ, ರಘುರಾಮ ಶೆಟ್ಟಿ, ದೇವಾನಂದ ಶೆಟ್ಟಿ, ನಾಗಪ್ಪ ಕೊಠಾರಿ, ಆನಂದ ಬಿಲ್ಲವ, ಮಾಜಿ ಜಿ.ಪಂ ಸದಸ್ಯೆ ಜ್ಯೋತಿ ಕಾವ್ರಾಡಿ, ಮಾಜಿ ತಾಪಂ ಸದಸ್ಯ ಸತೀಶ್ ಪೂಜಾರಿ, ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ, ಉದಯ್ ಪೂಜಾರಿ ಚಿತ್ತೂರು, ಉದಯ್ ಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಗುಲ್ವಾಡಿ ಗ್ರಾ.ಪಂ ಅಧ್ಯಕ್ಷ ಸುಧೇಶ್ ಕುಮಾರ್ ಶೆಟ್ಟಿ, ಗುಲ್ವಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಪೂಜಾರಿ ಕರ್ಕಿ, ಹಟ್ಟಿಯಂಗಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ಶೆಟ್ಟಿ, ಕರ್ಕುಂಜೆ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಗೋಪಾಲಕೃಷ್ಣ ಮಂಜ, ವಂಡ್ಸೆ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಹರ್ಷ ಶೆಟ್ಟಿ, ಪ್ರಧಾನ್ಕಾರ್ಯದರ್ಶಿಗಳಾದ ಶ್ರವಣ್ ಶೆಟ್ಟಿ ಸಂಪಿಗೇಡಿ, ಸದಾಶಿವ ಶೆಟ್ಟಿ ಶಂಕರನಾರಾಯಣ, ಹಿಂದುಳಿದ ಘಟಕದ ಉಮೇಶ್ ಕೊಠಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ದೇವಾಡಿಗ, ಅಲ್ಪಸಂಖ್ಯಾತ ಘಟಕದ ದಸ್ತಗಿರಿ ಸಾಹೇಬ್, ಎಸ್ಸಿ ಸೆಲ್ ಅರುಣ್ ಕುಮಾರ್, ಆರ್.ಜಿ.ಪಿ.ಆರ್ ಘಟಕದ ಮಂಜುನಾಥ್ ಕುಲಾಲ್, ಎನ್.ಎಸ್.ಯು.ಐ ಅಧ್ಯಕ್ಷ ಮಹೇಂದ್ರ ಕುಲಾಲ್, ಸೋಶಿಯಲ್ ಮೀಡಿಯಾ ಘಟಕದ ಗಣೇಶ್ ಪ್ರಸಾದ ಶೆಟ್ಟಿ ಉಪಸ್ಥಿತರಿದ್ದರು.
ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಡು ಸ್ವಾಗತಿಸಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಕುಮಾರ್ ಶೆಟ್ಟಿ ಕೆರಾಡಿ ವಂದಿಸಿದರು. ನೇರಳಕಟ್ಟೆ-ಕರ್ಕುಂಜೆ ಮೂಲಕ ಮಾವಿನಕಟ್ಟೆ, ಕರ್ಕಿ, ಹಟ್ಟಿಯಂಗಡಿ ಮೂಲಕ ತಲ್ಲೂರಿನತ್ತ ಪಾದಯಾತ್ರೆ ಸಾಗಿಬಂತು.