ಸಿಎಂ ಬದಲಾವಣೆ ವಿಚಾರ; ಕಾಂಗ್ರೆಸ್ ಡಬಲ್ ಸ್ಟೇರಿಂಗ್ ಪಕ್ಷ ಎಂದ ಬಿಜೆಪಿ
ಬೆಂಗಳೂರು, ಆ. 11: ‘ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವೀಟರ್ ಖಾತೆ ಮೂಲಕ ಸುಳ್ಳು ಆರೋಪ ಮಾಡಲಾಗಿತ್ತು. ಆದರೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಇದನ್ನು ನಿರಾಕರಿಸಿದ್ದಾರೆ. ಕಾಂಗ್ರೆಸ್ ಪಕ್ಷ ಒಂದು ಡಬಲ್ ಸ್ಟೇರಿಂಗ್ ಪಕ್ಷ ಎಂದು ಕರೆಯಲು ಇದಕ್ಕಿಂತ ಬೇರೆ ಉದಾಹರಣೆ ಬೇಕೇ?' ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಗುರುವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರೆಸ್ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿ ಸಿಂಕ್ ಆಗದೇ ಒದ್ದಾಡುತ್ತಿದ್ದಾಗ ‘ಬಿದ್ದು ಹೋಗುವುದಕ್ಕೆ ಇದೇನು ಒಣ ಮರವಲ್ಲ' ಎಂದು ಡಿ.ಕೆ.ಶಿವಕುಮಾರ್ ಅಬ್ಬರಿಸುತ್ತಿದ್ದರು. ಆದರೆ, ಈಗ ಸಿದ್ದರಾಮಯ್ಯ ಜೊತೆ ಹೊಂದಾಣಿಕೆ ಸಾಧ್ಯವಾಗದೇ ಈಗ ಡಿ.ಕೆ.ಶಿವಕುಮಾರ್ ಅವರು ಬಿದ್ದು ಹೋಗುವ ಒಣ ಮರದಂತಾಗಿದ್ದಾರೆ' ಎಂದು ಟೀಕಿಸಿದೆ.
‘ಸಿದ್ದರಾಮೋತ್ಸವಕ್ಕೆ ರಾಹುಲ್ ಗಾಂಧಿ ಬಂದರು ಎಂಬ ಕಾರಣಕ್ಕೆ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಡಿ.ಕೆ.ಶಿವಕುಮಾರ್ ಆಹ್ವಾನಿಸಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ನಾನಾ, ನೀನಾ ಎಂಬ ಹಗ್ಗಜಗ್ಗಾಟ ಆರಂಭಗೊಂಡಿದೆ. ಡಬಲ್ ಸ್ಟೇರಿಂಗ್ ಪಕ್ಷ ಎಂಬುದಕ್ಕೆ ಇದು ಸ್ಪಷ್ಟ ನಿದರ್ಶನ!' ಎಂದು ಬಿಜೆಪಿ ಇದೇ ಸಂದರ್ಭದಲ್ಲಿ ಲೇವಡಿ ಮಾಡಿದೆ.
ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವೀಟರ್ ಖಾತೆ ಮೂಲಕ ಸುಳ್ಳು ಆರೋಪ ಮಾಡಲಾಗಿತ್ತು.
— BJP Karnataka (@BJP4Karnataka) August 11, 2022
ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಇದನ್ನು ನಿರಾಕರಿಸಿದ್ದಾರೆ.
ಕಾಂಗ್ರೆಸ್ ಒಂದು ಡಬಲ್ ಸ್ಟೇರಿಂಗ್ ಪಕ್ಷ ಎಂದು ಕರೆಯಲು ಇದಕ್ಕಿಂತ ಬೇರೆ ಉದಾಹರಣೆ ಬೇಕೇ?#DoubleSteeringCongress pic.twitter.com/hCTdutJUer