ಏಶ್ಯಕಪ್ ಸೂಪರ್-4 ಪಂದ್ಯ: ಭಾರತದ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಆಯ್ಕೆ
ದುಬೈ, ಸೆ.6: ಏಶ್ಯಕಪ್ ಸೂಪರ್-4 ಪಂದ್ಯದಲ್ಲಿ ಭಾರತ ವಿರುದ್ಧ ಮಂಗಳವಾರ ಟಾಸ್ ಜಯಿಸಿದ ಶ್ರೀಲಂಕಾ ತಂಡ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಪಾಕಿಸ್ತಾನದ ವಿರುದ್ಧ ರವಿವಾರ ನಡೆದ ಸೂಪರ್-4 ಪಂದ್ಯದಲ್ಲಿ ಸೋತಿರುವ ಭಾರತಕ್ಕೆ ಈ ಪಂದ್ಯವನ್ನು ಗೆಲ್ಲಲೇಬೇಕಾಗಿದೆ.
ಶ್ರೀಲಂಕಾ ಆಡುವ 11ರ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಭಾರತವು ರವಿ ಬಿಷ್ಣೋಯಿ ಬದಲಿಗೆ ಆರ್.ಅಶ್ವಿನ್ಗೆ ಆಡುವ ಅವಕಾಶ ನೀಡಿದೆ. ರೋಹಿತ್ ಶರ್ಮಾ ಹಾಗೂ ಕೆ.ಎಲ್.ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ.
Next Story