ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಎಚ್. ಡಿ. ದೇವೇಗೌಡ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ರಾಜ್ಯಸಭೆ ಸದಸ್ಯರಾಗಿರುವ ದೇವೇಗೌಡ ಅವರು ಕಳೆದ ಕೆಲ ದಿನಗಳಿಂದ ಕಾಲು ನೋವಿನ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿಯವರು ತಮ್ಮ ಸಂಪುಟದ ಸಹೋದ್ಯೋಗಿಗಳ ಜೊತೆಗೆ ದೇವೇಗೌಡರ ಪದ್ಮನಾಭ ನಗರದ ನಿವಾಸದಕ್ಕೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು ಶೀಘ್ರ ಗುಣಮುಖರಾಗುವಂತೆ ಆಶಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ, ಬೈರತಿ ಬಸವರಾಜ್, ಮುನಿರತ್ನ, ಗೋಪಾಲಯ್ಯ ಜೆ.ಸಿ. ಮಾಧುಸ್ವಾಮಿಯವರು ಹಾಜರಿದ್ದರು.
► ಇದನ್ನೂ ಓದಿ: ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಬಿ.ಎಸ್. ಯಡಿಯೂರಪ್ಪ
► ಇದನ್ನೂ ಓದಿ: ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಸಿದ್ದರಾಮಯ್ಯ
ಇಂದು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ, ಹಿರಿಯರಾದ ಶ್ರೀ ಹೆಚ್. ಡಿ. ದೇವೇಗೌಡರ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದೆನು.
— Basavaraj S Bommai (@BSBommai) September 21, 2022
ಅವರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಿ, ಸಾರ್ವಜನಿಕ ಸೇವೆಯಲ್ಲಿ ಮುಂದುವರೆಯಲಿ ಎಂದು ಹಾರೈಸುತ್ತೇನೆ.@H_D_Devegowda pic.twitter.com/WPa6M2RBM7