Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ರಿಯಾದ್: ಮಲೆನಾಡು ಗಲ್ಫ್ ಎಜುಕೇಶನಲ್...

ರಿಯಾದ್: ಮಲೆನಾಡು ಗಲ್ಫ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ "ಮಲೆನಾಡ ಸಂಗಮ" ಕಾರ್ಯಕ್ರಮ

10 Dec 2022 1:54 PM IST
share
ರಿಯಾದ್: ಮಲೆನಾಡು ಗಲ್ಫ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಲೆನಾಡ ಸಂಗಮ ಕಾರ್ಯಕ್ರಮ

ರಿಯಾದ್: ಮಲೆನಾಡು ಗಲ್ಫ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್, ಸೌದಿ ಅರೇಬಿಯಾದ ರಿಯಾದ್ ಘಟಕದ ವತಿಯಿಂದ "ಮಲೆನಾಡ ಸಂಗಮ" ಕಾರ್ಯಕ್ರಮವು ನಝೀರ್ ಜಯಪುರ ಅವರ ಅಧ್ಯಕ್ಷತೆಯಲ್ಲಿ ಬಹಳ ವಿಜೃಂಭಣೆಯಿಂದ ಇತ್ತೀಚೆಗೆ ನಡೆಯಿತು.

ಇಲ್ಯಾಸ್ ಲತೀಫಿ ಅವರ ಪ್ರಾರ್ಥನೆ (ದುಆ)ಯೊಂದಿಗೆ ಸಭಾ ಕಾರ್ಯಕ್ರಮವನ್ನು ಪ್ರಾರಂಭಗೊಳಿಸಲಾಯಿತು. ಸಿರಾಜ್ ಚಕ್ಕಮಕ್ಕಿ ಸ್ವಾಗತಿಸಿದರು.

ಮುಖ್ಯ ಅತಿಥಿಯಾಗಿ ಭಾರತದಿಂದ ಆಗಮಿಸಿದ ಎಂಜಿಟಿ ರಾಷ್ಟ್ರೀಯ ಸಮಿತಿ ಗೌರವಾಧ್ಯಕ್ಷರಾದ ಯೂಸುಫ್ ಹಾಜಿ ಉಪ್ಪಳ್ಳಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಸಂಘಟನೆಯ ಮಹತ್ವ ಮತ್ತು ತಾಯ್ನಾಡಿನಲ್ಲಿ ರಾಷ್ಟ್ರೀಯ ಸಮಿತಿಯ ಮುಂದಿನ ಜವಾಬ್ದಾರಿಗಳ ಬಗ್ಗೆ ವಿವರಿಸಿದರು.

ತಾಯ್ನಾಡಿನಿಂದ ಆಗಮಿಸಿದ ಮತ್ತೋರ್ವ ಅತಿಥಿ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಅಕ್ರಂ ಹಾಜಿ ಮೂಡಿಗೆರೆ ಸಭೆಯನ್ನೂ, ಸಮಿತಿಯ ಕಾರ್ಯವೈಖರಿಯನ್ನೂ ಪ್ರಶಂಸಿಸಿ ಮುಂದಿನ ದಿನಗಳಲ್ಲಿ ತಾಯ್ನಾಡಿನಲ್ಲಿ ಸಂಘಟನೆಯ ಕಾರ್ಯ ಯೋಜನೆಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಸ್ಥಾಪಕ ಅಧ್ಯಕ್ಷರಾದ ಬಶೀರ್ ಬಾಳುಪೇಟೆ ಅವರು ಸಮಿತಿ ನಡೆದು ಬಂದ ಹಾದಿಯನ್ನು ವಿವರಿಸಿದರು.

ಕೇಂದ್ರ ಸಮಿತಿ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ ಜಯಪುರ (ಕ್ಲೌಡ್ ಸೆವೆನ್ ಕಂಪೆನಿ ಮಾಲಕರು) ಸಮಿತಿಯ ಮುಂದಿನ ಕನಸಿನ ಯೋಜನೆಯ 3D ವೀಡಿಯೊವನ್ನು ಅನಾವರಣಗೊಳಿಸಿ, ಕಾರ್ಯವೈಖರಿಯನ್ನು ವಿವರಿಸಿದರು.

ಸಂಘಟನೆಯ ಪ್ರಮುಖ ಉದ್ದೇಶವಾದ ಶೈಕ್ಷಣಿಕ ವಿದ್ಯಾರ್ಥಿವೇತನ, ವೃತ್ತಿಪರ ತರಬೇತಿ ಕೋರ್ಸ್‌ಗಳನ್ನು ನೀಡುವ ಬಗ್ಗೆ, ನಾಗರಿಕ ಸೇವಾ ಪರೀಕ್ಷೆಗಳ ತರಬೇತಿ ನೀಡುತ್ತಿರುವ ಬಗ್ಗೆ ವಿವರಣೆ ನೀಡಿ ವಿಷನ್ -2027 ಇದನ್ನು ಕಾರ್ಯರೂಪಕ್ಕೆ ತರಲು ಎಲ್ಲರ ಸಹಕಾರ ಕೋರಿದರು.

ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಇರ್ಶಾದ್ ಚಕ್ಕಮಕ್ಕಿ ಮತ್ತು ಕೇಂದ್ರ ಸಮಿತಿಯ ಅಂತರರಾಷ್ಟ್ರೀಯ ಸಂಯೋಜಕರಾದ ಇಕ್ಬಾಲ್ ಗಬ್ಗಲ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

ಸುಮಾರು ಸಾವಿರದ ಇನ್ನೂರಕ್ಕೂ ಮೀರಿದ ಜನರು ಸಂಘಟನೆಯ ಯೋಜನೆಯನ್ನೂ, ಸಮಿತಿಯ ಬೆಳವಣಿಗೆಯನ್ನೂ ಶ್ಲಾಘಿಸಿದರು.

ವೇದಿಕೆಯಲ್ಲಿ ಸಮಿತಿಯ ಉಪದೇಶಕರಾದ ಫಾರೂಖ್ (ಅರಬ್ ಎನರ್ಜಿ ಕಂಪೆನಿ ಮಾಲಕರು), ಎಂಜಿಟಿ ಜಿದ್ದಾ ಘಟಕದ ಅಧ್ಯಕ್ಷರಾದ ಮುಷ್ತಾಕ್ ಗಬ್ಗಲ್, ಜುಬೈಲ್ ಘಟಕದ ಅಧ್ಯಕ್ಷರಾದ ಅಬೂಬಕರ್ ಹಂಡುಗುಳಿ ಮತ್ತು ಸಂಪನ್ಮೂಲ ವ್ಯಕ್ತಿಯೂ, ಹಿತೈಷಿಯೂ, ಮಲೆನಾಡ ಹೆಮ್ಮೆಯ ವೈದ್ಯ, ಕೋವಿಡ್ ಸಮಯದಲ್ಲಿ ಹಲವಾರು ರೋಗಿಗಳ ಆಶಾಕಿರಣವಾಗಿ "ಕೋವಿಡ್ ವಾರಿಯರ್" ಬಿರುದು ಪಡೆದ  ಡಾ. ಮೋಯಿನ್ ಬ್ಯಾರಿ ಕೊಪ್ಪ ಅವರು ಉಪಸ್ಥಿತರಿದ್ದರು.

ತುರ್ತು ರಜೆಯ ನಿಮಿತ್ತ ತಾಯ್ನಾಡಿನಲ್ಲಿದ್ದ ಗೌರವಾಧ್ಯಕ್ಷರಾದ ಶರೀಫ್ ಸ್ಯಾಂಕಾನ್ ಕಳಸ ಅವರು ಭಾರತದಿಂದಲೇ ಶುಭ ಹಾರೈಸಿದರು. ಝುಬೈರ್ ಬಾಳೇಹೊನ್ನೂರು ವಂದಿಸಿದರು.

ಈ ಸಂದರ್ಭ ಹಲವಾರು ಆಟೋಟ ಸ್ಪರ್ಧೆಗಳು ನಡೆದು ಜನಮನವನ್ನು ರಂಜಿಸಲಾಗಿತ್ತು. ಅದರಲ್ಲಿ ಪ್ರಮುಖವಾಗಿ ಮಡಿಕೆ ಒಡೆಯುವುದು, ಹಗ್ಗ ಜಗ್ಗಾಟ ನಡೆಯಿತು.

ಇಬ್ರಾಹಿಂ ತೆಂಗಿನಮನೆ ಮತ್ತು ಕೇಂದ್ರ ಸಮಿತಿಯ ಎಜುಕೇಷನ್ ವಿಭಾಗದ ಮುಖ್ಯಸ್ಥರಾದ ಮುಹಮ್ಮದ್ ರಫಿ, ಜುಬೈಲ್ ಅವರು ನಡೆಸಿಕೊಟ್ಟ ರಸಪ್ರಶ್ನೆಗಳು ತುಂಬಾ ವ್ಯತಿರಿಕ್ತವಾಗಿತ್ತು. ಇವಕ್ಕೆಲ್ಲಾ ಆಕರ್ಷಕ ಬಹುಮಾನವನ್ನು ಕೂಡಾ ನೀಡಲಾಗಿತ್ತು. ಈ ಎಲ್ಲಾ ಕಾರ್ಯಕ್ರಮಗಳೂ ತುಂಬಾ ಅಚ್ಚುಕಟ್ಟಾಗಿ ನೆರೆವೇರಿತು.

ರಿಯಾದ್ ಘಟಕದ ಅಧ್ಯಕ್ಷರಾದ ನಝೀರ್ ಮತ್ತು ಕಾರ್ಯದರ್ಶಿ ಅನ್ಸಾರ್ ಚಕ್ಕಮಕ್ಕಿ ಅವರು ಈ ಕಾರ್ಯಕ್ರಮಕ್ಕೆ ತನು, ಮನ, ಧನ ಸಹಾಯ ಮಾಡಿದ ಎಲ್ಲಾ ದಾನಿಗಳಿಗೂ, ಕಾರ್ಯಕ್ರಮದ ವಿಜಯಕ್ಕೆ ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೂ ಧನ್ಯವಾದ ಅರ್ಪಿಸಿದರು.

share
Next Story
X