ಶಿವಮೊಗ್ಗ: ವಿಚಾರಣಾಧೀನ ಕೈದಿ ಹೃದಯಾಘಾತದಿಂದ ಮೃತ್ಯು
ಶಿವಮೊಗ್ಗ, ಡಿ.13: ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿರುವುದು ವರದಿಯಾಗಿದೆ.
ಸೋಮಿನಕೊಪ್ಪ ನಿವಾಸಿ ಸೈಯದ್ ಅಬು ಸಲೇಹ್ (35) ಮೃತಪಟ್ಟ ಕೈದಿ.
ಸೋಮವಾರ ಕೇಂದ್ರ ಕಾರಾಗೃಹದಲ್ಲಿ ಸೈಯದ್ ಅಬು ಸಲೇಹ್ ಗೆ ಎದೆ ನೋವು ಕಾಣಿಸಿಕೊಂಡಿತೆನ್ನಲಾಗಿದೆ. ಕೂಡಲೇ ಆತನಿಗೆ ಇಸಿಜಿ ಮಾಡಿಸಿ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಗೆ ದಾಖಲಿಸಿದ ಕೆಲವೇ ಹೊತ್ತಿನಲ್ಲಿ ಆತ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಈತ ಬಂಧಿತನಾಗಿದ್ದು, 2020ರಿಂದ ವಿಚಾರಣಾಧೀನ ಕೈದಿಯಾಗಿ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದ ಎಂದು ತಿಳಿದುಬಂದಿದೆ.
Next Story