ಭಾರತ್ ಜೋಡೊ ಯಾತ್ರೆ: ರಾಹುಲ್ ಭದ್ರತೆ ಬಗ್ಗೆ ಅಮಿತ್ ಶಾಗೆ ಮತ್ತೊಮ್ಮೆ ಪತ್ರ ಬರೆದ ಕಾಂಗ್ರೆಸ್
ಹೊಸದಿಲ್ಲಿ, ಜ. 1: ‘ಭಾರತ್ ಜೋಡೊ ಯಾತ್ರೆ’ಯಲ್ಲಿ ರಾಹುಲ್ ಗಾಂಧಿಯ ಭದ್ರತಾ ವ್ಯವಸ್ಥೆಯ ಬಗ್ಗೆ ಕಾಂಗ್ರೆಸ್ ಶನಿವಾರ ಮತ್ತೊಮ್ಮೆ ಕಳವಳ ವ್ಯಕ್ತಪಡಿಸಿದೆ.
‘ಭಾರತ್ ಜೋಡೊ ಯಾತ್ರೆ’ಯಲ್ಲಿ ರಾಹುಲ್ ಗಾಂಧಿ ಅವರು ಹಲವು ಬಾರಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಹೇಳಿದ ಎರಡು ದಿನಗಳ ಬಳಿಕ ಕಾಂಗ್ರೆಸ್ ಈ ಆತಂಕ ವ್ಯಕ್ತಪಡಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮತ್ತೊಮ್ಮೆ ಪತ್ರ ಬರೆದಿರುವ ಕಾಂಗ್ರೆಸ್, ಸಿಆರ್ಪಿಎಫ್ ನ ಉತ್ತರಕ್ಕೆ ಪ್ರತಿಕ್ರಿಯೆಯಾಗಿ ಈ ಪತ್ರ ಬರೆದಿರುವುದಾಗಿ ಹೇಳಿದೆ.
ಸಿಆರ್ಪಿಎಫ್ ಸಮಸ್ಯೆಯನ್ನು ಬಗೆಹರಿಸುವ ಬದಲು ಜಟಿಲಗೊಳಿಸಿರುವುದು ಸ್ವೀಕಾರಾರ್ಹವಲ್ಲ ಎಂದು ಕಾಂಗ್ರೆಸ್ ಹೇಳಿದೆ.
ಈ ಹಿಂದಿನ ಪತ್ರದಲ್ಲಿ ಕಾಂಗ್ರೆಸ್ ಸೆಪ್ಟಂಬರ್ ನಲ್ಲಿ ಆರಂಭಿಸಲಾದ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗಿನ ‘ಭಾರತ್ ಜೋಡೊ ಯಾತ್ರೆ’ ದಿಲ್ಲಿಗೆ ಪ್ರವೇಶಿಸಿದ ಸಂದರ್ಭ ಭದ್ರತಾ ಉಲ್ಲಂಘನೆ ನಡೆದಿದೆ ಎಂದು ಆರೋಪಿಸಿತ್ತು.
Next Story