Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮದುವೆ ಸಂದರ್ಭ ಮಾಡಿದ ಪ್ರಮಾಣವೇ...

ಮದುವೆ ಸಂದರ್ಭ ಮಾಡಿದ ಪ್ರಮಾಣವೇ ಸ್ಫೂರ್ತಿ: ಡಾ. ರೊನಾಲ್ಡ್ ಕೊಲಾಸೊ

6 Jan 2023 6:39 PM IST
share
ಮದುವೆ ಸಂದರ್ಭ ಮಾಡಿದ ಪ್ರಮಾಣವೇ ಸ್ಫೂರ್ತಿ: ಡಾ. ರೊನಾಲ್ಡ್ ಕೊಲಾಸೊ

ರೊನಾಲ್ಡ್ ಕೊಲಾಸೊ ಅವರು ತಮ್ಮ ಬದುಕಿನ ಸಾರ್ಥಕತೆಯ ಗುಟ್ಟನ್ನು ಮತ್ತೊಮ್ಮೆ ರಟ್ಟು ಮಾಡಿದರು. ಅದು ಅವರ ಮದುವೆ ಸಂದರ್ಭ. ಧರ್ಮ ಗುರುಗಳ ಸಮ್ಮುಖದಲ್ಲಿ ದಾಂಪತ್ಯದ ಪ್ರಮಾಣ ಸ್ವೀಕರಿಸಬೇಕಿತ್ತು. ದಾಂಪತ್ಯದ ಪ್ರಮಾಣ ಸ್ವೀಕರಿಸುವ ಗಳಿಗೆ ಬಂದಾಗ, ಕೊಲಾಸೊ ದಂಪತಿ ಮಾಡಿದ್ದು ಸಮಾಜ ಸೇವೆಯ ಪ್ರಮಾಣ. ತಮ್ಮ ದುಡಿಮೆಯ, ತಮ್ಮ ಗಳಿಕೆಯ ಒಂದಷ್ಟು ಪ್ರಮಾಣವನ್ನು ಜನರಿಗಾಗಿ, ದೇಶಕ್ಕಾಗಿ, ವಿಶ್ವದ ಶಾಂತಿಗಾಗಿ ನೀಡುವ ಪ್ರಮಾಣವನ್ನು ರೊನಾಲ್ಡ್ ಕೊಲಾಸೊ ಹಾಗು ಜೀನ್ ಕೊಲಾಸೊ ದಂಪತಿ ಸ್ವೀಕರಿಸಿದ್ದನ್ನು ಡಾ. ರೊನಾಲ್ಡ್ ಕೊಲಾಸೊ ಸ್ಮರಿಸಿದರು. 

ಬಳಿಕ ಮಾತು ಮುಂದುವರೆಸಿದ ಅವರು, ಮಾನವೀಯತೆಯನ್ನು ಆಚರಿಸಲು ದೇವರು ಪ್ರತಿಯೊಬ್ಬರಿಗೂ ಒಂದೇ ಅವಕಾಶ ಕೊಡುತ್ತಾರೆ. ನನಗೂ ಆ ಒಂದು ಅವಕಾಶ ಬಂದಿತ್ತು. ನನಗೆ ಬಂದಿದ್ದ ಅವಕಾಶದಲ್ಲಿ ನಾನು ನನ್ನ ಕೈಯಲ್ಲಿ ಆದಷ್ಟು ಸಮಾಜಕ್ಕೆ ನೀಡಿದ್ದೇನೆ. ಏಕೆಂದರೆ ಇಂದು ನನ್ನ ಬಳಿ ಏನೇನು ಇದೆಯೋ ಅದೆಲ್ಲವನ್ನೂ ನೀಡಿದ್ದೇ ಸಮಾಜ.

ನಾವು ಪ್ರತಿ ವರ್ಷ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಲೇ ಇರುತ್ತೇವೆ. ನಮ್ಮ ಬ್ಯಾಂಕ್ ಬ್ಯಾಲೆನ್ಸ್, ನಮ್ಮ ಬಳಿ ಇರುವ ಬಂಗಲೆ, ಕಾರುಗಳು ಇತರೆ ಆಸ್ತಿಗಳ ಮೂಲಕ ನಮ್ಮ ಬ್ಯಾಲೆನ್ಸ್ ಹೆಚ್ಚಿಸಿಕೊಳ್ಳುವುದರಲ್ಲಿ ನಾವು ತೃಪ್ತಿ ಪಡಬಾರದು. ಪ್ರತಿ ವರ್ಷ ನಾವು ಎಷ್ಟು ಹೃದಯಗಳನ್ನು ಮುಟ್ಟಿದ್ದೇವೆ, ಎಷ್ಟು ಹೃದಯಗಳ ಪ್ರೀತಿಯನ್ನು ಸಂಪಾದಿಸಿದ್ದೇವೆ ಎನ್ನುವುದರ ಆಧಾರದ ಮೇಲೆ ನಮ್ಮ ಸಾರ್ಥಕತೆಯನ್ನು ಅಳೆಯಬೇಕು. ನಾನು ಪ್ರತಿ ವರ್ಷ ಮಾಡುವುದು ಇದನ್ನೇ ಎಂದರು.

ಅಂತಿಮವಾಗಿ ಕಾರ್ಯಕ್ರಮದಲ್ಲಿ ನೆರೆದಿದ್ದ ಎಲ್ಲರನ್ನೂ ಎದ್ದು ನಿಲ್ಲುವಂತೆ ವಿನಂತಿಸಿದ ಕೊಲಾಸೊ ಅವರು, ಎಲ್ಲರೂ ಎದ್ದು ನಿಂತ ಬಳಿಕ "ತಮ್ಮ ಒಟ್ಟು ಗಳಿಕೆಯ ಸಣ್ಣ ಪ್ರಮಾಣವನ್ನಾದರೂ ಈ ಸಮಾಜಕ್ಕಾಗಿ ಮುಡಿಪಾಗಿ ಇಡುತ್ತೇವೆ. ಗ್ರಾಮೀಣ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನಾವು ವ್ಯಯ ಮಾಡುತ್ತೇವೆ. ಮಕ್ಕಳ ಶಾಲಾ ಪುಸ್ತಕ, ಸಮವಸ್ತ್ರಕ್ಕಾದರೂ ನಮ್ಮ ಗಳಿಕೆಯ ಒಂದು ಪಾಲನ್ನು ನೀಡುತ್ತೇವೆ" ಎನ್ನುವ ಪ್ರಮಾಣವಚನ ಬೋಧಿಸಿದರು.

share
Next Story
X