ರಸ್ತೆ ಅಪಘಾತದಲ್ಲಿ ನಟ ಅರವಿಂದ ಬೋಳಾರ್ಗೆ ಗಾಯ
ಮಂಗಳೂರು: ತುಳುನಾಡ ಮಾಣಿಕ್ಯ ಎಂದೇ ಖ್ಯಾತರಾಗಿರುವ ಹಾಸ್ಯನಟ, ಕಲಾವಿದ ಅರವಿಂದ ಬೋಳಾರ್ (Aravind Bolar) ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವೊಂದು ನಗರದ ಪಂಪ್ವೆಲ್ ಬಳಿ ಇಂದು ಸ್ಕಿಡ್ಡಾಗಿ ಉರುಳಿರುವುದಾಗಿ ತಿಳಿದು ಬಂದಿದೆ.
ಅತೀ ವೇಗವಾಗಿ ಚಲಿಸಿಕೊಂಡು ಬರುತ್ತಿದ್ದ ಬಸ್ಸೊಂದು ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ಅರವಿಂದ್ ಬೋಳಾರ್ ತಾನು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನದ ಬ್ರೇಕ್ ಹಾಕಿದ್ದು, ಈ ಸಂದರ್ಭ ಸ್ಕಿಡ್ಡಾಗಿ ಬಿದ್ದ ಪರಿಣಾಮ ಅರವಿಂದ ಬೋಳಾರ್ಗೆ ಗಾಯವಾಗಿದೆ. ಅರವಿಂದ ಬೋಳಾರ್ರ ಕಾಲಿಗೆ ಗಾಯವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳವಾರ ಅರವಿಂದ್ ಬೋಳಾರ್ರ ಕಾಲಿನ ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
Next Story