ಕೆಪಿಸಿಸಿ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿಸಿ ನಾಯಕರಿಗೆ ಅಗೌರವ: ದೂರು ದಾಖಲು
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಕಾಂಗ್ರೆಸ್ ವಿರುದ್ಧವೇ ಅವಹೇಳನಕಾರಿ ಬರಹಗಳನ್ನು ಬರೆದು ಪೋಸ್ಟ್ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಸೈಬರ್ ಠಾಣೆಗೆ ದೂರು ಸಲ್ಲಿಕೆಯಾಗಿದೆ.
ಕಾಂಗ್ರೆಸ್ ಪಕ್ಷದ ಹಸ್ತದ ಗುರುತನ್ನ ಬಳಸಿಕೊಂಡು ನಕಲಿ ವೆಬ್ ಸೈಟ್ ನಲ್ಲಿ ಪಕ್ಷ ಹಾಗೂ ಅದರ ನಾಯಕರಿಗೆ ಅಗೌರವ ತರುವಂತಹ ಹೇಳಿಕೆಗಳನ್ನು ಫೋಸ್ಟ್ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಕಾನೂನು ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯ ಶತಭಾಷ್ ಶಿವಣ್ಣ ಸೈಬರ್ ಕ್ರೈಮ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.
ಹೇಡಿಗಳ ಕೊನೆಯ ಅಸ್ತ್ರ ಅಪಪ್ರಚಾರ: ಪ್ರಿಯಾಂಕ್ ಖರ್ಗೆ ಆಕ್ರೋಶ
'ಹೇಡಿಗಳ ಕೊನೆಯ ಅಸ್ತ್ರ ಅಪಪ್ರಚಾರ, ಕುಯುಕ್ತಿ ಎನ್ನುವ ಮಾತಿದೆ, ಅದರಂತೆಯೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಹೆಸರಿನ ನಕಲಿ ಪತ್ರ ಹಾಗೂ ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ನಕಲಿ ವೆಬ್ಸೈಟ್ ಸೃಷ್ಟಿಸಿ ತೇಜೋವಧೆ ಮಾಡಿದವರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ' ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.
(ನಕಲಿ ವೆಬ್ ಸೈಟ್ ನ ಸ್ಕ್ರೀನ್ ಶಾಟ್)
ಹೇಡಿಗಳ ಕೊನೆಯ ಅಸ್ತ್ರ ಅಪಪ್ರಚಾರ, ಕುಯುಕ್ತಿ ಎನ್ನುವ ಮಾತಿದೆ,
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) February 3, 2023
ಅದರಂತೆಯೇ ವಿರೋಧ ಪಕ್ಷದ ನಾಯಕರಾದ ಶ್ರೀ @siddaramaiah ಅವರ ಹೆಸರಿನ ನಕಲಿ ಪತ್ರ ಹಾಗೂ ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ನಕಲಿ ವೆಬ್ಸೈಟ್ ಸೃಷ್ಟಿಸಿ ತೇಜೋವಧೆ ಮಾಡಿದವರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ. pic.twitter.com/GNWHTTZNMh