Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಆತಿಥ್ಯ ಉಪಚಾರಕ್ಕಾಗಿ 4 ವರ್ಷಗಳಲ್ಲಿ...

ಆತಿಥ್ಯ ಉಪಚಾರಕ್ಕಾಗಿ 4 ವರ್ಷಗಳಲ್ಲಿ 92.20 ಕೋಟಿ ರೂ. ವೆಚ್ಚ: ತಪಾಸಣೆ ವರದಿಯಲ್ಲಿ ದಾಖಲು

ಜಿ.ಮಹಾಂತೇಶ್ಜಿ.ಮಹಾಂತೇಶ್10 March 2023 9:00 AM IST
share
ಆತಿಥ್ಯ ಉಪಚಾರಕ್ಕಾಗಿ 4 ವರ್ಷಗಳಲ್ಲಿ 92.20 ಕೋಟಿ ರೂ. ವೆಚ್ಚ: ತಪಾಸಣೆ ವರದಿಯಲ್ಲಿ ದಾಖಲು

ಮುಖ್ಯಮಂತ್ರಿ, ಸಚಿವರು, ರಾಜ್ಯಕ್ಕೆ ಬರುವ ಅತಿಥಿಗಳಿಗೆಂದು ಖರೀದಿಸಲಾಗಿರುವ ಇನ್ನೋವಾ, ವರ್ಣ, ಇನ್ನೋವಾ ಕ್ರಿಸ್ಟಾ, ಹೊಂಡಾ ಸಿಟಿ, ಡಿಝೈರ್, ಫೋರ್ಡ್ ಅಲ್ಟೀಸ್ ಫೋರ್ಡ್ ಸೇರಿದಂತೆ  ಒಟ್ಟು ವಾಹನಗಳ ಪೈಕಿ 8 ವಾಹನಗಳನ್ನು 2020ರಿಂದ ಬಳಕೆ ಮಾಡದೇ ಹಾಗೇ ಇಡಲಾಗಿದೆ ಎಂದು ತಪಾಸಣೆ ವರದಿಯಿಂದ ಗೊತ್ತಾಗಿದೆ.

ಬೆಂಗಳೂರು: ಕೇಂದ್ರ ಸಚಿವರು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್  ನ್ಯಾಯಾಧೀಶರು, ವಿವಿಧ ಆಯೋಗಗಳ ಅಧ್ಯಕ್ಷರು ಮತ್ತು ಸದಸ್ಯರ ಆತಿಥ್ಯ ಉಪಚಾರಕ್ಕಾಗಿ ಕಳೆದ ನಾಲ್ಕು ವರ್ಷಗಳಲ್ಲಿ ಒಟ್ಟಾರೆ 92.20 ಕೋಟಿ ರೂ. ಖರ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮತ್ತಿತರ ಕೇಂದ್ರ ಸಚಿವರು ರಾಜ್ಯಕ್ಕೆ ಪದೇಪದೇ ಭೇಟಿ ನೀಡುತ್ತಿರುವ ಹೊತ್ತಿನಲ್ಲಿಯೇ ಕೇಂದ್ರ ಸಚಿವರಾದಿಯಾಗಿ ರಾಜ್ಯಕ್ಕೆ ಆಗಮಿಸಿದ ಮತ್ತಿತರರನ್ನು ರಾಜ್ಯ ಅತಿಥಿ ಎಂದು ಪರಿಗಣಿಸಿ ಉಪಚಾರಕ್ಕಾಗಿ ಮಾಡಿರುವ ವೆಚ್ಚದ ವಿವರಗಳನ್ನು ಲೆಕ್ಕಪರಿಶೋಧನಾಕಾರಿಗಳು ತಪಾಸಣೆ ನಡೆಸಿದ್ದಾರೆ. ಇದರ ಪ್ರತಿಯು ''the-file.in''ಗೆ ಲಭ್ಯವಾಗಿದೆ.

ಅದರಲ್ಲೂ ಬಿಜೆಪಿ ಸರಕಾರದ ಮೂರು ವರ್ಷದ (2020, 2021, 2022) ಅವಧಿಯಲ್ಲಿಯೇ 72.82 ಕೋಟಿ ರೂ.ಗಳನ್ನು ಅತಿಥಿ ಉಪಚಾರಕ್ಕಾಗಿ ವೆಚ್ಚವಾಗಿರುವುದು ಲೆಕ್ಕಾಧಿಕಾರಿಗಳ ತಪಾಸಣೆ ವರದಿಯಿಂದ ಗೊತ್ತಾಗಿದೆ.

ಅತಿಥ್ಯ ಉಪಚಾರಕ್ಕಾಗಿ ಮಾಡಿರುವ ವೆಚ್ಚ ಮಾತ್ರವಲ್ಲದೇ ಇನ್ನಿತರ ವೆಚ್ಚದ ವಿವರಗಳನ್ನೂ ತಪಾಸಣೆ ವರದಿಯಲ್ಲಿ ದಾಖಲಿಸಲಾಗಿದೆ. ಕುಮಾರಕೃಪಾ ಅತಿಥಿ ಗೃಹದ ಕೊಠಡಿಗಳು ಮತ್ತು ವಸತಿಗೃಹಗಳ ನವೀಕರಣ, ಅಧುನೀಕರಣ, ಮೂಲಸೌಕರ್ಯ,  ಮೇಲ್ವಿಚಾರಣೆಗೆ 2018-19ರಿಂದ 2021-22ರವರೆಗೆ ನೀಡಿದ್ದ 3.17ಕೋಟಿ ರೂ.ಅನುದಾನದ ಪೈಕಿ ಬಳಕೆಯಾಗದ 20.33 ಲಕ್ಷ ರೂ. ಗಳನ್ನು ಸರಕಾರದ ಖಾತೆಗೆ ಹಿಂದಿರುಗಿಸಿಲ್ಲ. ಅಲ್ಲದೇ ಈ ಅನುದಾನ ಹಂಚಿಕೆಯನ್ನೂ ನಿಯಮಿತವಾಗಿ ನಿರ್ವಹಿಸಿಲ್ಲ. ಈ ಹಣ ಸದ್ಯ ಪಿಡಬ್ಲ್ಯೂಡಿ ಬಳಿಯೇ ಇದೆ  ಎಂದು ವರದಿಯಿಂದ ತಿಳಿದು ಬಂದಿದೆ. ಕುಮಾರಕೃಪಾಕ್ಕೆ ಸಂಬಂಧಿಸಿದಂತೆ 2018ರಿಂದ 2022ರವರೆಗೆ  ವಾರ್ಷಿಕ  ಸ್ಟಾಕ್ ಬುಕ್‌ಗಳನ್ನು ಕರ್ನಾಟಕ ಅರ್ಥಿಕ ಸಂಹಿತೆ ಪ್ರಕಾರ ಭೌತಿಕವಾಗಿ  ನಿರ್ವಹಿಸಿಲ್ಲ ಎಂದು ತಪಾಸಣೆ ವರದಿಯಲ್ಲಿ ವಿವರಿಸಲಾಗಿದೆ.

ಅದೇ ರೀತಿ ಕುಮಾರಕೃಪಾ ಅತಿಥಿ ಗೃಹಕ್ಕೆ ಸಂಬಂಧಿಸಿದಂತೆ ಮಾರ್ಚ್ 2021 ಮತ್ತು ಏಪ್ರಿಲ್ 2022ರಲ್ಲಿ  ನಡೆದಿರುವ ಹಣಕಾಸಿನ ವಹಿವಾಟುಗಳಿಗೆ ಸಂಬಂಧಿಸಿದ ನಗದು ವಹಿವಾಟುಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ. ಮಾರ್ಚ್ 2021ರಲ್ಲಿ 67 ಬಿಲ್, ಫೆಬ್ರುವರಿ 2022ರಲ್ಲಿ 81 ಬಿಲ್‌ಗಳಿಗೆ ಸಂಬಂಧಿಸಿದ ಒಟ್ಟು 7,53,42,714 ರೂ. ನಗದು ವಹಿವಾಟಿನಲ್ಲಿ ವ್ಯತ್ಯಾಸ ಕಂಡುಬಂದಿರುವುದು ತಪಾಸಣೆ ವರದಿಯಿಂದ ಗೊತ್ತಾಗಿದೆ.

2006-07ರಲ್ಲಿದ್ದಂತೆ ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರಿಂದ ಒಟ್ಟಾರೆ 12.54 ಲಕ್ಷ ರೂ. ಹೊರಬಾಕಿ ಇದೆ. 2000-2022ರಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಅಂದಿನ ಮುಖ್ಯಮಂತ್ರಿ ಸಂಘಟಿಸಿದ್ದ ಕಾಂಗ್ರೆಸ್ ಸಮ್ಮೇಳನಕ್ಕಾಗಿ ನಿಯಮಬಾಹಿರವಾಗಿ 70.25 ಲಕ್ಷ ರೂ. ವೆಚ್ಚ ಮಾಡಿದ್ದರ ಬಗ್ಗೆ ರಾಜ್ಯ ಆತಿಥ್ಯ ಸಂಸ್ಥೆಯು ಇದುವರೆಗೂ ಯಾವುದೇ ವಿವರಣೆಯನ್ನು ನೀಡಿಲ್ಲ ಎಂದು ತಪಾಸಣೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X