Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಪ್ಪಚೆಟ್ಟೋಳಂಡ ಹಾಕಿ ಉತ್ಸವಕ್ಕೆ ಚಾಲನೆ...

ಅಪ್ಪಚೆಟ್ಟೋಳಂಡ ಹಾಕಿ ಉತ್ಸವಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಭರವಸೆ

19 March 2023 12:12 AM IST
share
ಅಪ್ಪಚೆಟ್ಟೋಳಂಡ ಹಾಕಿ ಉತ್ಸವಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ
ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಭರವಸೆ

ಮಡಿಕೇರಿ: ಕೊಡವ ಕುಟುಂಬಗಳ ನಡುವಿನ 23ನೇ ‘ಅಪ್ಪಚೆಟ್ಟೋಳಂಡ ಕಪ್ ಹಾಕಿ ಉತ್ಸವ-2023’ಕ್ಕೆ ವರ್ಣರಂಜಿತ ಕಾರ್ಯಕ್ರಮದಲ್ಲಿ ನಾಪೋಕ್ಲುವಿನ ಚೆರಿಯಪರಂಬು ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ವಿದ್ಯುಕ್ತ ಚಾಲನೆ ನೀಡಿದರು.

ಕೊಡವ  ಸಾಂಪ್ರದಾಯಿಕ ಉಡುಗೆ ತೊಟ್ಟು ಕೊಡವ ಭಾಷೆಯಲ್ಲಿ ಮಾತು ಪ್ರಾರಂಭಿಸಿದ ಮುಖ್ಯಮಂತ್ರಿ ನಶಿಸಿ ಹೋಗುತ್ತಿರುವ ಕುಟುಂಬಗಳ ನಡುವಿನ ಸಂಬಂಧ ಮತ್ತೆ ಬೆಸೆಯಲು ಕುಟುಂಬಗಳ ನಡುವಿನ ಹಾಕಿ ಸಹಕಾರಿಯಾಗಿದೆ ಎಂದರು. 

ಕುಟುಂಬದಲ್ಲಿ ಸದಸ್ಯರ ಸಂಬಂಧ ಉತ್ತಮವಾಗಿದ್ದರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಇದು ಭಾರತೀಯ ನಾಗರಿಕತೆಯಾಗಿದ್ದು, ಕೊಡವ ಕೌಟುಂಬಿಕ ಹಾಕಿ ಉತ್ಸವ ಇದಕ್ಕೆ ಸೂಕ್ತ ನಿದರ್ಶನವಾಗಿದೆ. ಹಾಕಿ ಕ್ರೀಡೆಯ ಮೂಲಕ ಕೊಡವರು ತಮ್ಮಲ್ಲಿನ ಉತ್ತಮ ಕೌಟುಂಬಿಕ ಸಂಬಂಧಗಳಿಗೆ ಮಾದರಿಯಾಗಿದ್ದಾರೆ. ಕೆ.ಜಿ.ಬೋಪಯ್ಯ ಅವರು ಹಾಕಿ ಕ್ರೀಡೆಗೆ ಸೂಕ್ತ ಅನುದಾನ ತರುವಲ್ಲಿ ಶ್ರಮಿಸಿದ್ದಾರೆ. ನನ್ನಲ್ಲಿ ಬೋಪಯ್ಯ ಅವರ ನಿಯೋಗ ಬಂದಾಗ 1 ಕೋಟಿ ಕೇಳಿದ್ದರು. ತಕ್ಷಣವೇ ನಾನು 1 ಕೋಟಿ ಮಂಜೂರು ಮಾಡಿದ್ದೇನೆ ಎಂದರು.

ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಗೆ ತಕ್ಷಣ ಆದೇಶ ಹೊರಡಿಸುತ್ತೇನೆ ಣೆಂದು ಮುಖ್ಯಮಂತ್ರಿ ಘೋಷಿಸಿದರು.

ಹಾಕಿ ಉತ್ಸವದ ಅಂಗವಾಗಿ ಇಂದು ಬೆಳಗ್ಗಿನಿಂದಲೆ ನಾಪೋಕ್ಲು ಚೆರಿಯಪರಂಬು ಮೈದಾನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ನಡೆದವು. ಸಂಜೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳನ್ನು ಅಪ್ಪಚಟ್ಟೋಳಂಡ ಕುಟುಂಬದ ಪರವಾಗಿ ಕೊಡಗಿನ ಸಾಂಪ್ರದಾಯಿಕ ಉಡುಪು ತೊಡಿಸಿ, ವಡಿ ಕತ್ತಿಯನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ಎಂಎಲ್‍ಸಿ ಸುಜಾ ಕುಶಾಲಪ್ಪ, ಅಪ್ಪಚೆಟ್ಟೋಂಡ ಹಾಕಿ ಉತ್ಸವ ಸಮಿತಿಯ ಪ್ರಮುಖರು ಹಾಜರಿದ್ದರು.

ಕೊಡವ ಸಮುದಾಯದ 336 ತಂಡಗಳ ನಡುವಣ ಪಂದ್ಯಾವಳಿ ಮುಂದಿನ 23 ದಿನಗಳ ಕಾಲ ಹಾಕಿ ಪ್ರಿಯರನ್ನು ತನ್ನಡೆಗೆ ಸೆಳೆಯಲಿದೆ. ಇದೇ ಮೊಟ್ಟ ಮೊದಲ ಬಾರಿಗೆ ದೊಡ್ಡ ಸಂಖ್ಯೆಯಲ್ಲಿ ತಂಡಗಳು ಪಾಲ್ಗೊಂಡಿರುವುದು ವಿಶೇಷ.

ಆಕರ್ಷಕ ಮೆರವಣಿಗೆ- ಹಾಕಿ ಉತ್ಸವದ ಅಂಗವಾಗಿ ಇಂದು ಬೆಳಗ್ಗೆ ಅಪ್ಪಚೆಟ್ಟೋಳಂಡ ಕುಟುಂಬದ ಪಟ್ಟೆದಾರ ಅಪ್ಪಚೆಟ್ಟೋಳಂಡ ಈರಪ್ಪ ಅವರ ನೇತೃತ್ವದಲ್ಲಿ, ಕೊಡವ ಸಾಂಪ್ರದಾಯಿಕ ಉಡುಪಿನೊಂದಿಗೆ ಸಮುದಾಯದ ಪುರುಷರು, ಮಹಿಳೆಯರು ಮಕ್ಕಳು ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಗಮನ ಸೆಳೆದರು.

1997ರಲ್ಲಿ ಮೊಟ್ಟ ಮೊದಲ ಕೌಟುಂಬಿಕ ಹಾಕಿ ಪಂದ್ಯಾವಳಿ ಆಯೋಜಿಸಿದ ಪಾಂಡಂಡ ಕುಟುಂಬದಿಂದ ಇಲ್ಲಿಯವರೆಗೆ ಪಂದ್ಯಾವಳಿ ಆಯೋಜಿಸಿರುವ ಒಟ್ಟು 23 ತಂಡಗಳ ಪ್ರತಿನಿಧಿಗಳು ಆಕಾಶಕ್ಕೆ ಗುಂಡು ಹಾರಿಸುವುದರೊಂದಿಗೆ ಹಲ ಸಂಖ್ಯೆಯಲ್ಲ ನೆರೆದಿದ್ದ ಪ್ರೇಕ್ಷಕರ ಸಮ್ಮುಖದಲ್ಲಿ ಪಂದ್ಯಾವಳಿಗೆ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.

ಧ್ವಜಾರೋಹಣ-ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಬೋಪಣ್ಣ ಅವರು ಅಕಾಡೆಮಿಯ ಧ್ವಜಾರೋಹಣ ನೆರವೇರಿಸಿದರೆ, ಅಪ್ಪಚೆಟ್ಟೋಳಂಡ ಹಾಕಿ ಉತ್ಸವದ ಧ್ವಜವನ್ನು ಕುಟುಂಬದ ಪಟ್ಟೆದಾರ ಅಪ್ಪಚೆಟ್ಟೋಳಂಡ ಈರಪ್ಪ ಅವರು ಆರೋಹಿಸಿದರು.

ಜಿಲ್ಲೆಯ ಸಮಮಸ್ಯೆಗಳನ್ನು ಸಿಎಂ ಗಮನಕ್ಕೆ ತನ್ನಿ- ಈ ಸಂದರ್ಭ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಾಜಿ ಎಂಎಲ್‍ಸಿ ವೀಣಾ ಅಚ್ಚಯ್ಯ ಮಾತನಾಡಿ, ಸಮಾರಂಭಕ್ಕೆ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದು, ಈ ಸಂದರ್ಭ ಜಿಲ್ಲೆಯ ಸಮಸ್ಯೆಗಳನ್ನು ಅವರ ಗಮನಕ್ಕೆ ತರುವುವಂತೆ ತಿಳಿಸಿ, ಈ ಬಾರಿಯ ಪಮದ್ಯಾವಳಿಯಲ್ಲಿ ದಾಖಲೆಯ ಸಂಖ್ಯೆಯಲ್ಲಿ ತಂಡಗಳು ಪಾಲ್ಗೊಂಡಿರುವುದು ನಿಜಕ್ಕೂ ಸಂತಸವನ್ನು ತಂದಿದೆಯೆಂದು ನುಡಿದರು.

ಬೆಳ್ಳಿ ರೋಲಿಂಗ್ ಟ್ರೋಫಿ- ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಬೋಪಣ್ಣ ಮಾತನಾಡಿ,  ಹಾಕಿ ಪಂದ್ಯಾವಳಿಯ ಜನಕ ಪಾಂಡಂಡ ಕುಟ್ಟಪ್ಪ ಅವರ ಜ್ಞಾಪಕಾರ್ಥ ಬೆಳ್ಳಿಯ ರೋಲಿಂಗ್ ಕಪ್‍ನ್ನು ನೀಡುತ್ತಿರುವುದಾಗಿ ತಿಳಿಸಿದರು.

ಮುಂದಿನ 2024 ನೇ ಸಾಲಿನಲ್ಲಿ ಕುಂಡ್ಯೋಳಂಡ ತಂಡ ನಾಪೋಕ್ಲುವಿನಲ್ಲಿ, 2025ನೇ ಸಾಲಿನಲ್ಲಿ ಮುದ್ದಂಡ ಕುಟುಂಬಸ್ಥರು ಮಡಿಕೇರಿಯಲ್ಲಿ ಕೌÀಟುಂಬಿಕ ಹಾಕಿ ಪಂದ್ಯಾವಳಿ ನಡೆಸಲಿರುವುದಾಗಿ ಮಾಹಿತಿ ನೀಡಿದರು.

ಸಮಾರಂಭದಲ್ಲಿ ಅಪ್ಪಚೆಟ್ಟೋಳಂಡ ಕಪ್ ಹಾಕಿ ಉತ್ಸವ ಸಮಿತಿಯ ಸಂಚಾಲಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರಾದ ಪರದಂಡ ಸುಬ್ರಮಣಿ, ಪದ್ಮಶ್ರೀ ರಾಣಿ ಮಾಚಯ್ಯ, ಪ್ರಮುಖರಾದ ರವಿ ಪೆಮ್ಮಯ್ಯ, ಮಿಥುನ್ ಮಾಚಯ್ಯ ಸೇರಿದಂತೆ ಹಲ ಗಣ್ಯರು ಪಾಲ್ಗೊಂಡಿದ್ದರು. 

share
Next Story
X