Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಆನೆ ದಾಳಿ: ಸಕಾಲದಲ್ಲಿ ಪರಿಹಾರ ಪಡೆಯದ...

ಆನೆ ದಾಳಿ: ಸಕಾಲದಲ್ಲಿ ಪರಿಹಾರ ಪಡೆಯದ ಶೇ.62.4 ರೈತರು

ಮೌಲ್ಯಮಾಪನ ವರದಿ ಬಹಿರಂಗ

ಜಿ.ಮಹಾಂತೇಶ್,ಜಿ.ಮಹಾಂತೇಶ್,25 May 2023 8:46 AM IST
share
ಆನೆ ದಾಳಿ: ಸಕಾಲದಲ್ಲಿ ಪರಿಹಾರ ಪಡೆಯದ ಶೇ.62.4 ರೈತರು
ಮೌಲ್ಯಮಾಪನ ವರದಿ ಬಹಿರಂಗ

ಬೆಂಗಳೂರು: ಆನೆ ದಾಳಿಗೆ ಒಳಗಾದ ರೈತರು, ಬೆಳೆಗಾರರ ಪೈಕಿ ಶೇ.62.4ರಷ್ಟು ರೈತರು ಸಕಾಲದಲ್ಲಿ ಎಕ್ಸ್‌ಗ್ರೇಷಿಯಾ ಪಡೆದಿಲ್ಲ. ಶೇ. 37.6ರಷ್ಟು ರೈತರು ಮಾತ್ರ ಸಕಾಲದಲ್ಲಿ ಅಂದರೆ ಮೂರು ತಿಂಗಳ ಒಳಗೆ ಎಕ್ಸ್ ಗ್ರೇಷಿಯಾ ಮೊತ್ತ ಪಡೆದಿದ್ದಾರೆ. ಇನ್ನುಳಿದ ರೈತರು, ಬೆಳೆಗಾರರು ಪರಿಹಾರ ಪಡೆಯಲು ವರ್ಷಗಟ್ಟಲೆ ಅಲೆದಿದ್ದಾರೆ. ಚಾಮರಾಜನಗರ ಮತ್ತು ವೀರಾಜಪೇಟೆ ಹೊರತುಪಡಿಸಿದರೆ ಉಳಿದೆಲ್ಲಾ ವಿಭಾಗಗಳಲ್ಲಿಯೂ ರೈತರಿಗೆ ಪರಿಹಾರ ವಿಳಂಬವಾಗಿ ತಲುಪಿದೆ ಎಂದು ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ ಮತ್ತು ಅರಣ್ಯ ಇಲಾಖೆಯು ನಡೆಸಿದ್ದ ಮೌಲ್ಯಮಾಪನ ವರದಿ ಬಹಿರಂಗಗೊಳಿಸಿದೆ.

ಮಾನವ ಆನೆ ಸಂಘರ್ಷ, ಉಪಶಮನ ಕ್ರಮಗಳು ಮತ್ತು ಸಂಘರ್ಷ ತಗ್ಗಿಸುವಲ್ಲಿ ಅದರ ಪರಿಣಾಮ ಕುರಿತು ಪ್ರಾಧಿಕಾರಕ್ಕೆ 2022ರ ನವೆಂಬರ್‌ನಲ್ಲಿ ಸಲ್ಲಿಸಿರುವ ವರದಿಯು ಮಾನವ ಆನೆ ಸಂಘರ್ಷದ ವಿವಿಧ ಆಯಾಮಗಳನ್ನು ತೆರೆದಿಟ್ಟಿದೆ. ಹಾಗೆಯೇ 2023ರಲ್ಲಿ ಕಾಂಗ್ರೆಸ್ ಸರಕಾರವೇ ಅಸ್ತಿತ್ವಕ್ಕೆ ಬಂದಿರುವ ಬೆನ್ನಲ್ಲೇ  ಈ ವರದಿಯು ಮುನ್ನೆಲೆಗೆ ಬಂದಿದೆ. ಇದರ  ಪ್ರತಿಯು ‘the-file.in’ಗೆ ಲಭ್ಯವಾಗಿದೆ.

ಅನುದಾನ ಲಭ್ಯತೆ ಇಲ್ಲದಿರುವುದೇ ಅಸಮರ್ಥನೀಯ ವಿಳಂಬಕ್ಕೆ ಸಾಮಾನ್ಯ ಕಾರಣ ಎಂದಿರುವ ಅಧ್ಯಯನ ತಂಡವು ಮೂರು ತಿಂಗಳಿಗಿಂತಲೂ  ಹೆಚ್ಚಿನ ಅವಧಿ ತೆಗೆದುಕೊಂಡರೆ ಅದನ್ನು ಇಲಾಖೆಯ ವಿಳಂಬ ಎಂದೇ ಪರಿಗಣಿಸಬೇಕಾಗುತ್ತದೆ. ಆರ್ಥಿಕ ನಷ್ಟ ಮತ್ತು ಭಾವನಾತ್ಮಕವಾಗಿಯೂ ಕ್ಷೋಭೆ ಅನುಭವಿಸುವುದರಿಂದ ರೈತ ಈಗಾಗಲೇ ಸಂಕಷ್ಟದಲ್ಲಿದ್ದಾನೆ ಎನ್ನುವುದನ್ನು ಮರೆಯಬಾರದು ಎಂದು ಸರಕಾರದ ಗಮನ ಸೆಳೆದಿದೆ. ಚಾಮರಾಜನಗರ ಮತ್ತು ವೀರಾಜಪೇಟೆ ಹೊರತುಪಡಿಸಿದರೆ ಉಳಿದೆಲ್ಲಾ ವಿಭಾಗಗಳಲ್ಲಿಯೂ ರೈತರಿಗೆ ಪರಿಹಾರವು ವಿಳಂಬವಾಗಿ ತಲುಪಿದೆ.  ಮೈಸೂರು, ಮಂಡ್ಯ, ಮಡಿಕೇರಿ ಮತ್ತು ಬಂಡೀಪುರ ಮತ್ತು ನಾಗರಹೊಳೆ ರೈತರು ಸಕಾಲದಲ್ಲಿ ಎಕ್ಸ್‌ಗ್ರೇಷಿಯಾ ಪಡೆದಿಲ್ಲ. ರೈತರು

ಎಕ್ಸ್‌ಗ್ರೇಷಿಯಾ ಪಡೆದುಕೊಳ್ಳುವಲ್ಲಿನ ವಿಳಂಬದ ಅವಧಿಯು ಕೆಲವು ತಿಂಗಳುಗಳಿಂದ ವರ್ಷಗಳವರೆಗೂ ಇದೆ. ಶೇ.62.4ರಷ್ಟು ರೈತರಿಗೆ ಘಟನೆ ನಡೆದ ಮೂರು ತಿಂಗಳಿಗಿಂತ ಹೆಚ್ಚಿನ ಅವಧಿಯ ಬಳಿಕ ಪರಿಹಾರ ಮೊತ್ತ ಸಂದಾಯವಾಗಿದೆ. ಈ ಶ್ರೇಣಿಯಲ್ಲಿ ಶೆ.9.8ರಷ್ಟು ರೈತರು ಆರು ತಿಂಗಳ ಬಳಿಕ ಪರಿಹಾರ ಪಡೆದಿದ್ದಾರೆ.

ರಾಮನಗರ ಮತ್ತು ಮಡಿಕೇರಿ ವಿಭಾಗಗಳಲ್ಲಿಯೂ ವಿಳಂಬ ಪಾವತಿಯ ಅತೀ ಹೆಚ್ಚು ಪ್ರಕರಣಗಳಿವೆ. ಈ ವಿಭಾಗಗಳಲ್ಲಿ ವಿಳಂಬಕ್ಕೆ ಮತ್ತೊಂದು ಕಾರಣ ಎಂದರೆ ಆನೆ ದಾಳಿಗೆ ತುತ್ತಾದ ಪ್ರಕರಣಗಳು ಜಾಸ್ತಿ ಇದೆ ಎನ್ನುವುದು ಮತ್ತು ಪಾವತಿಸಬೇಕಾದ ಪರಿಹಾರ ಮೊತ್ತವೂ ಜಾಸ್ತಿ ಇರುವುದಾಗಿದೆ. ವಿಳಂಬಕ್ಕೆ ಸರಕಾರದಿಂದ ಅನುದಾನ ಬಿಡುಗಡೆಯಾಗದೇ ಇರುವುದು ಅಥವಾ ಸಂಬಂಧಿಸಿದ ಜಿಲ್ಲಾ ಅಥವಾ ವಿಭಾಗಕ್ಕೆ ಸಕಾಲದಲ್ಲಿ ಅನುದಾನ ಹಂಚಿಕೆಯಾಗದೇ ಇರುವುದು ಕಾರಣವಾಗಿರಬಹುದು ಎಂದು ಅಧ್ಯಯನ ತಂಡವು ವರದಿಯಲ್ಲಿ ಅಭಿಪ್ರಾಯಿಸಿದೆ.

ರಾಮನಗರ ಮತ್ತು ಚಾಮರಾಜನಗರದ ಕೆಲವು ಭಾಗ, ಮಂಡ್ಯ ಮತ್ತು ಹುಣಸೂರಿನ ಹೆಚ್ಚಿನ ಪ್ರದೇಶಗಳನ್ನು ಹೊರತುಪಡಿಸಿದರೆ ಉಳಿದೆಲ್ಲಾ ಕಡೆ ರೈತರ ಪರಿಹಾರ ಅಸಮರ್ಪಕವಾಗಿದೆ.  ಮೈಸೂರು, ಮಡಿಕೇರಿ, ಬಂಡೀಪುರ ಮತ್ತು ನಾಗರಹೊಳೆ ಸುತ್ತಮುತ್ತಲಿನ ಸಂತ್ರಸ್ತ ರೈತರು ತಾವು ಅನುಭವಿಸಿದ ನಷ್ಟಕ್ಕೆ ನೀಡಿದ ಎಕ್ಸ್‌ಗ್ರೇಷಿಯಾ ಅಸರ್ಮಪಕವಾಗಿದೆ. ಬೆಳೆ ಪರಿಹಾರದ ಮೊತ್ತವನ್ನು ಪರಿಷ್ಕರಿಸಿದ್ದರೂ ಮೌಲ್ಯಮಾಪನವು ವಾಸ್ತವಿಕತೆಗೆ ಹತ್ತಿರವಾಗಿರದ ಕಾರಣ ಅದು ಅವಕಾಶದ ವೆಚ್ಚವನ್ನು ಒಳಗೊಂಡಿಲ್ಲ. ಬಹುತೇಕ ರೈತರು ಬೆಳೆದು ನಿಂತ ತೆಂಗು, ಮಾವು ಮತ್ತು ಇತರ ಮರಗಳಿಗೆ ಹಾನಿಯಾದಾಗ ನಷ್ಟ ಮೌಲ್ಯಮಾಪನ ಮಾಡುವಾಗ ಮರವನ್ನು ಬೆಳೆಸಲು ಆದ ವೆಚ್ಚವನ್ನು ಪರಿಗಣಿಸುವುದಿಲ್ಲ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಬೆಳೆಯುವ ಹಂತದಲ್ಲಿರುವ ತೆಂಗಿಗೆ 2,000 ರೂ. ಪರಿಹಾರ ನೀಡಲಾಗಿದೆ ಎನ್ನುವುದನ್ನು ಇಲ್ಲಿ ಗಮನಿಸಬೇಕು. ಆದ್ದರಿಂದ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಜತೆ ಚರ್ಚಿಸಿ ಪರಿಹಾರದ ಮೊತ್ತವನ್ನು ಪರಿಷ್ಕರಿಸುವುದು ಅಗತ್ಯವಾಗಿದೆ. ಎಲ್ಲಾ ನಷ್ಟಕ್ಕೂ ಪರಿಹಾರ ನೀಡುವುದು ಕಷ್ಟವಾದರೂ ಪರಿಹಾರ ಮೊತ್ತ ಸ್ವಲ್ಪವಾದರೂ ಸಮಂಜಸವಾಗಿರಬೇಕು ಎಂದು ಅಧ್ಯಯನ ತಂಡವು ಸಲಹೆ ನೀಡಿದೆ.

share
ಜಿ.ಮಹಾಂತೇಶ್,
ಜಿ.ಮಹಾಂತೇಶ್,
Next Story
X