Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಂಗ್ರೆಸ್ ‘ಗ್ಯಾರಂಟಿ’ಗಳಿಗೊಂದು...

ಕಾಂಗ್ರೆಸ್ ‘ಗ್ಯಾರಂಟಿ’ಗಳಿಗೊಂದು ಷರತ್ತು, ಸಲಹೆ..: ಸಿಎಂಗೆ ಪತ್ರ ಬರೆದ ತಳಸಮುದಾಯಗಳ ಅಧ್ಯಯನ ಕೇಂದ್ರ

28 May 2023 11:56 PM IST
share
ಕಾಂಗ್ರೆಸ್ ‘ಗ್ಯಾರಂಟಿ’ಗಳಿಗೊಂದು ಷರತ್ತು, ಸಲಹೆ..: ಸಿಎಂಗೆ ಪತ್ರ ಬರೆದ ತಳಸಮುದಾಯಗಳ ಅಧ್ಯಯನ ಕೇಂದ್ರ

ಬೆಂಗಳೂರು, ಮೇ 28: ‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಜಾರಿಗೆ ಮುಂದಾಗಿರುವ ಪ್ರಮುಖ ಐದು ಗ್ಯಾರಂಟಿ ಯೋಜನೆಗಳಿಂದ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳು ಪ್ರಗತಿ ಸಾಧಿಸಲಿವೆ’ ಎಂದು ಬಣ್ಣಿಸಿರುವ ಬೆಂಗಳೂರು ರಾಷ್ಟ್ರೀಯ ಕಾನೂನು ಶಾಲೆಯ ತಳಸಮುದಾಯಗಳ ಅಧ್ಯಯನ ಕೇಂದ್ರವೂ, ‘ಈ ಯೋಜನೆಗಳಿಗೆ ಸಂಬಂಧಿಸಿದಂತೆ ಕೆಲವೊಂದು ಷರತ್ತು ವಿಧಿಸುವ ಸಲಹೆ’ ನೀಡಿದೆ.

ರವಿವಾರ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಳಸಮುದಾಯಗಳ ಅಧ್ಯಯನ ಕೇಂದ್ರದ ಡಾ.ಆರ್.ವಿ.ಚಂದ್ರಶೇಖರ್ ಪತ್ರ ಬರೆದಿದ್ದು, ‘ಗೃಹ ಲಕ್ಷ್ಮಿ ಯೋಜನೆ, ಯುವ ನಿಧಿ ಮಹಿಳೆಯರಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಸೇರಿದಂತೆ ರಾಜ್ಯ ಸರಕಾರ ಜಾರಿಗೊಳಿಸಲು ಹೊರಟಿರುವ ಐದು ಯೋಜನೆಗಳು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಅನುಕೂಲವಾಗಿದ್ದು, ಇದನ್ನು ಚಾಚೂ ತಪ್ಪದೆ ಅನುಷ್ಠಾನಗೊಳಿಸಲು ಮುಂದಾಗಬೇಕು’ ಎಂದು ಒತ್ತಾಯಿಸಿದ್ದಾರೆ.

-‘ಯುವ ನಿಧಿ’ ನಿರುದ್ಯೋಗ ಭತ್ಯೆ: ರಾಜ್ಯ ಸರಕಾರ ಯುವ ಜನರಿಗೆ ನಿರುದ್ಯೋಗ ಭತ್ಯೆ ನೀಡುವುದಾಗಿ ಪ್ರಕಟಿಸಿದ್ದು, ಈ ಸಂಬಂಧ ಫಲಾನುಭವಿಗಳು ಸಂಪೂರ್ಣವಾಗಿ ನಿರುದ್ಯೋಗಿಯಾಗಿಬೇಕು. ರಾಜ್ಯದಲ್ಲಿ ಕನಿಷ್ಠ 10 ವರ್ಷ ವಾಸ ಮಾಡಿರಬೇಕು. ಬಿಪಿಎಲ್ ಪಡಿತರ ಚೀಟಿ, ನಿರುದ್ಯೋಗಿ ಎಂದು ಸ್ಥಳೀಯ ಪ್ರಾಧಿಕಾರದಿಂದ ಪ್ರಮಾಣ ಪತ್ರ ಪಡೆದಿರಬೇಕು. ಅದೇ ರೀತಿ, ಎಲ್ಲಿಗೂ ಪೂರ್ಣ ಹಾಗೂ ಅಲ್ಪವಧಿ ಕಾರ್ಯನಿರ್ವಹಣೆ ಮಾಡುತ್ತಿರಬಾರದು.

-ಗೃಹ ಲಕ್ಷ್ಮೀ ಯೋಜನೆ: ಈ ಯೋಜನೆ ಮೂಲಕ ರಾಜ್ಯದ ಪ್ರತಿ ಗೃಹಣಿ, ಮನೆಯ ಯಾಜಮಾನಿಗೆ ರಾಜ್ಯ ಸರಕಾರವೂ ಮಾಸಿಕ 2 ಸಾವಿರ ರೂ.ನೀಡಲಿದ್ದು, ಇದಕ್ಕೆ ಫಲಾನುಭವಿ ಕನಿಷ್ಟ 10 ವರ್ಷಗಳ ಕಾಲ ರಾಜ್ಯದಲ್ಲಿ ನೆಲೆಸಿರಬೇಕು ಎನ್ನುವ ನಿಬಂಧನೆ ಇರಬೇಕು. ಅದೇ ರೀತಿ, ಬಿಪಿಎಲ್ ಪಡಿತರ ಹೊಂದಿರಬೇಕು. ಸರಕಾರಿ ನೌಕರರು ಇರಬಾರದು, 10 ಎಕರೆಗಿಂತ ಅಧಿಕ ಕೃಷಿ ಭೂಮಿ ಇರಬಾರದು. ಬೇರೆ ಯೋಜನೆಗಳಲ್ಲಿ ಫಲಾನುಭವಿಗಳಾಗಿ ಇರಬಾರದು. ವಾರ್ಷಿಕ ಆದಾಯ 25ಸಾವಿರ ರೂ. ಕ್ಕಿಂತಲೂ ಹೆಚ್ಚಿಗೆ ಇರಬಾರದು. ಅದೇ ರೀತಿ, 5 ಲಕ್ಷ ರೂ.ಗಳಿಗಿಂತ ಅಧಿಕ ಆಸ್ತಿ ಇರಬಾರದು.

-ಗೃಹ ಜ್ಯೋತಿ ಯೋಜನೆ: 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಯೋಜನೆ ಇದಾಗಿದ್ದು, ಈ ಯೋಜನೆಯನ್ನು ಪಡೆಯಲು 10ವರ್ಷಗಳ ಕಾಲ ಕರ್ನಾಟಕದಲ್ಲಿ ನೆಲೆಸಿರಬೇಕು. 200 ಯೂನಿಟ್‍ಗಿಂತ ಅಧಿಕ ವಿದ್ಯುತ್ ಬಳಕೆ ಮಾಡಿದರೆ, ಪೂರ್ಣ ಮೊತ್ತ ಪಾವತಿ ಮಾಡಬೇಕು. ಒಂದು ಮನೆಗೆ ಒಂದೇ ಯೋಜನೆ ಇರಬೇಕು. ವಾಣಿಜ್ಯ ಉದ್ದೇಶಗಳಿದ್ದರೆ ಇದರಲ್ಲಿ ವಿನಾಯಿತಿ ನೀಡಬಾರದು. ಬಳಸಿದ ಯೂನಿಟ್‍ಗೆ ಮಾತ್ರ ಉಚಿತ ನೀಡಿ, ನಿಗದಿತ ಶುಲ್ಕವಾದ 80 ಹಾಗೂ 100 ರೂ.ಗಳನ್ನು ಪಡೆಯಬೇಕು.

ಮಹಿಳೆಯರಿಗೆ ಉಚಿತ ಪ್ರಯಾಣ: ಈ ಯೋಜನೆಯನ್ನು ಪಡೆಯುವವರು 10 ವರ್ಷಗಳಿಂದ ರಾಜ್ಯದಲ್ಲಿ ನೆಲೆಸಿರಬೇಕು. ರಾಜ್ಯದಲ್ಲಿ ಮಾತ್ರ ಸಾಮಾನ್ಯ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು. ಅರ್ಜಿ ಸಲ್ಲಿಸುವ ಅರ್ಹತೆ ಹೊಂದಿರುವ ಎಲ್ಲ ಮಹಿಳೆಯರಿಗೂ ಗುರುತಿನ ಚೀಟಿಯನ್ನು ನೀಡಿ ಅದನ್ನು ತೋರಿಸಿದವರಿಗೆ ಮಾತ್ರ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಿಸಬೇಕು. ಬಾರ್ ಕೋಡ್ ಮಾದರಿಯ ಗುರುತಿನ ಚೀಟಿ ನೀಡಬೇಕು. 18 ವರ್ಷ ಮೇಲ್ಪಟ್ಟವರನ್ನು ಮಾತ್ರ ಮಹಿಳೆಯರು ಎಂದು ಪರಿಗಣಿಸಬೇಕು ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

share
Next Story
X