Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾಗಾಟ ವೆಚ್ಚ ಕಡಿತದಿಂದ ರಫ್ತು...

ಸಾಗಾಟ ವೆಚ್ಚ ಕಡಿತದಿಂದ ರಫ್ತು ಉದ್ಯಮಕ್ಕೆ ಪ್ರೋತ್ಸಾಹ: ಡಾ. ವೆಂಕಟರಮಣ ಅಕ್ಕರಾಜು

ಸಮುದ್ರದ ಪ್ರತಿಕೂಲತೆ ಕುರಿತ ಕಾರ್ಯಾಗಾರ

2 Jun 2023 11:27 PM IST
share
ಸಾಗಾಟ ವೆಚ್ಚ ಕಡಿತದಿಂದ ರಫ್ತು ಉದ್ಯಮಕ್ಕೆ ಪ್ರೋತ್ಸಾಹ: ಡಾ. ವೆಂಕಟರಮಣ ಅಕ್ಕರಾಜು
ಸಮುದ್ರದ ಪ್ರತಿಕೂಲತೆ ಕುರಿತ ಕಾರ್ಯಾಗಾರ

ಮಂಗಳೂರು : ದೇಶದಲ್ಲಿ ಗುಣಮಟ್ಟದ ಉತ್ಪನ್ನಗಳು ಸಿದ್ಧವಾದರೂ, ಸಾಗಾಟ ವೆಚ್ಚವನ್ನು ತಗ್ಗಿಸುವ ಸವಾಲು ಇದೆ. ಅದನ್ನು ಮೀರಲು ಶ್ರಮಿಸಬೇಕಿದೆ. ಈ ಪ್ರಯತ್ನದ ಮೂಲಕ ರಫ್ತು ಉದ್ಯಮಕ್ಕೆ ಪ್ರೋತ್ಸಾಹ ನೀಡಿ ದಂತೆಯೂ ಆಗುತ್ತದೆ ಎಂದು ನವ ಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ) ಅಧ್ಯಕ್ಷ ಡಾ. ವೆಂಕಟರ ಮಣ ಅಕ್ಕರಾಜು ಅಭಿಪ್ರಾಯಪಟ್ಟರು.

ಮಂಗಳೂರು ಪ್ರಾಧಿಕಾರದಲ್ಲಿ ಶುಕ್ರವಾರ ನಡೆದ ‘ಸಮುದ್ರದ ಪ್ರತಿಕೂಲತೆ’ ಕುರಿತ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಆಮದು ಮತ್ತು ರಫ್ತು ನಡೆದಾಗ ಮಾತ್ರ ಬಂದರುಗಳು ಅಭಿವೃದ್ಧಿ ಕಾಣುತ್ತವೆ. ಸರಕುಗಳನ್ನು ಹೆಚ್ಚಿಸಿ ಸಾಗಾಟ ವೆಚ್ಚವನ್ನು ಕಡಿಮೆಗೊಳಿಸಲು ಸಾಧ್ಯವಿದೆ. ದೇಶೀಯ ವಸ್ತುಗಳ ರಫ್ತಿನಲ್ಲಿ ಸಾಗಾಟ ವೆಚ್ಚವನ್ನು ನಿಯಂತ್ರಣ ಮಾಡುವ ಮೂಲಕ ಚೀನಾ, ಪೆಸಿಫಿಕ್ ದೇಶಗಳ ಮುಂದೆ ಸ್ಪರ್ಧೆಯೊಡ್ಡಬಹುದಾಗಿದೆ. ಇದರಿಂದ ದೇಶದ ಜಿಡಿಪಿ ಅಭಿವೃದ್ಧಿ ಹೊಂದಿ, ಜನರ ತಲಾ ಆದಾಯದಲ್ಲಿ ಪ್ರಗತಿ ಕಾಣಬಹುದು ಎಂದು ಡಾ.ವೆಂಕಟರಮಣ ಅಕ್ಕರಾಜು ಹೇಳಿದರು.

ಬಂದರು ಅಭಿವೃದ್ಧಿಯ ಭಾಗವಾಗಿ ಹಲವು ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿಂದೆ ಅಂತರ ರಾಷ್ಟ್ರೀಯ ಕಾರ್ಗೊಗಳು ಬೇರೆ ದೇಶಗಳ ಮೂಲಕ ಹಾದು ಹೋಗುತ್ತಿದ್ದವು. ಈಗ ಭಾರತದ ಸಮುದ್ರ ದಡಕ್ಕೂ ಬರುತ್ತವೆ. ಇದು ಪೂರಕ ಬೆಳವಣಿಗೆಯಾಗಿದೆ. ಬಂದರುಗಳ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಾಕಷ್ಟು ಪ್ರೋತ್ಸಾಹ ನೀಡುತ್ತಿವೆ ಎಂದು ಹೇಳಿದರು.

ಎನ್‌ಎಂಪಿಎ ಕೋಸ್ಟ್ ಗಾರ್ಡ್‌ನ ಡಿಐಜಿ ಪಿ.ಕೆ. ಮಿಶ್ರಾ, ಕೇಂದ್ರ ಸರಕಾರದ ಮಾಜಿ ನಾವಿಕ ಸಲಹೆಗಾರ ಕ್ಯಾಪ್ಟನ್ ಎಲ್.ಕೆ. ಪಾಂಡ, ಐಪಿಎ ಸಲಹೆಗಾರ ಡಾ. ಆರ್.ಡಿ. ತ್ರಿಪಾಠಿ, ಎನ್‌ಎಂಪಿಎ ಉಪಾಧ್ಯಕ್ಷ ಕೆ.ಜಿ.ನಾಥ್, ಅಧಿಕಾರಿ ಕ್ಯಾಪ್ಟನ್ ಎಸ್.ಆರ್. ಪಟ್ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

share
Next Story
X