Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆನೇಕಲ್ | ಉಪ ಲೋಕಾಯುಕ್ತರ ಸಂಬಂಧಿಕ ಎಂದು...

ಆನೇಕಲ್ | ಉಪ ಲೋಕಾಯುಕ್ತರ ಸಂಬಂಧಿಕ ಎಂದು ತಹಶೀಲ್ದಾರ್ ರಿಗೆ ವಂಚಿಸಲು ಯತ್ನ: ಆರೋಪಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ15 Dec 2024 12:03 PM IST
share
ಆನೇಕಲ್ | ಉಪ ಲೋಕಾಯುಕ್ತರ ಸಂಬಂಧಿಕ ಎಂದು ತಹಶೀಲ್ದಾರ್ ರಿಗೆ ವಂಚಿಸಲು ಯತ್ನ: ಆರೋಪಿಯ ಬಂಧನ

ಆನೇಕಲ್: ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಹೆಸರನ್ನು ದುರುಪಯೋಗಪಡಿಸಿಕೊಂಡು ಆನೇಕಲ್ ವಿಶೇಷ ತಹಶೀಲ್ದಾರ್ ಕರಿಯಾ ನಾಯಕ್ ರ ಮೇಲೆ ಪ್ರಭಾವ ಬೀರಿ ಅಕ್ರಮವಾಗಿ ಜಮೀನು ಖಾತೆ ಬದಲಾವಣೆಗೆ ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಆನೇಕಲ್ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ ಮೂಲದ ಆನಂದ್ ಕುಮಾರ್ ಬಂಧಿತ ಆರೋಪಿ.

ಲೋಕಾಯುಕ್ತ ಇಲಾಖೆಯ ಉಪನಿಬಂಧಕ ಅರವಿಂದ್ ಎನ್.ವಿ. ನೀಡಿದ ದೂರಿನ ಮೇರೆಗೆ ಆನೇಕಲ್ ಇನ್ ಸ್ಪೆಕ್ಟರ್ ಬಿ.ಎಂ. ತಿಪ್ಪೇಸ್ವಾಮಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ.

ಘಟನೆ ವಿವರ

ಆನೇಕಲ್ ವಿಶೇಷ ತಹಶೀಲ್ದಾರ್ ಕರಿಯಾ ನಾಯಕ್ ಕಚೇರಿಗೆ ಆಗಮಿಸಿದ್ದ ಆರೋಪಿ ಆನಂದ್, ತಾನು ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪರ ಸಂಬಂಧಿಕ ಹಾಗೂ ತಾನು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಉದ್ಯೋಗಿ ಎಂದು ಹೇಳಿ, ಸರ್ಜಾಪುರ ಹೋಬಳಿ ಚಿಕ್ಕನಹಳ್ಳಿ ಸನಂ 18/ಪಿ16 ಹೊಸ ನಂಬರ್ 191 ರ ಒಂದು ಎಕರೆ ಜಮೀನನ್ನು ಎಸ್.ಎನ್.ರಾಮಸ್ವಾಮಿ ಅಡಿಗ ಎಂಬವರಿಂದ ನಾರಾಯಣ ಅಡಿಗ ಎಂಬವರ ಹೆಸರಿಗೆ ಖಾತೆ ಬದಲಾಯಿಸುವಂತೆ ಒತ್ತಡ ಹೇರಿದ್ದಾನೆ.

ಅಷ್ಟಲ್ಲದೆ ತನ್ನ ಮೊಬೈಲ್ ನಿಂದ ಯಾರಿಗೋ ಕಾಲ್ ಮಾಡಿ ಉಪ ಲೋಕಾಯುಕ್ತರು ಮಾತನಾಡುತ್ತಿದ್ದಾರೆಂದು, ಮತ್ತೊಂದು ಬಾರಿ ಲೋಕಾಯುಕ್ತ ಐ.ಜಿ. ಮಾಡನಾಡುತ್ತಿರುತ್ತಾರೆಂದು, ಮತ್ತೊಂದು ಬಾರಿ ಲೋಕಾಯುಕ್ತ ಎಸ್ಪಿ ಮಾತನಾಡುತ್ತಿದ್ದಾರೆ ಹೇಳಿ ತಹಶೀಲ್ದಾರ್ ರಿಗೆ ಮೊಬೈಲ್ ಕೊಟ್ಟು ಮಾತನಾಡಿಸಿದ್ದಾನೆ. ಆ ಕಡೆಯಿಂದ ಮಾತನಾಡಿದ ವ್ಯಕ್ತಿಗಳು ತಾವು ಲೋಕಾಯುಕ್ತ ನ್ಯಾಯಮೂರ್ತಿ, ಲೋಕಾಯುಕ್ತ ಐ.ಜಿ. ಮತ್ತು ಲೋಕಾಯುಕ್ತ ಎಸ್ಪಿ ಎಂದು ಹೇಳಿ ಮಾತನಾಡಿದ್ದಲ್ಲದೆ, "ನಿಮ್ಮ ಬಳಿ ಬಂದಿರುವ ಆನಂದ್ ಕುಮಾರ್ ನಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾನೆ, ಆತನ ಕೆಲಸವನ್ನು ಯಾವುದೇ ತಡ ಮಾಡದೆ ಬೇಗ ಮಾಡಿಕೊಡಿ" ಎಂದು ಒತ್ತಡ ಹೇರಿದ್ದಾರೆ. ಈ ಬಗ್ಗೆ ಸಂಶಯಗೊಂಡ ವಿಶೇಷ ತಹಶೀಲ್ದಾರ್ ಕರಿಯಾ ನಾಯಕ್ ಅವರು ಲೋಕಾಯುಕ್ತಕ್ಕೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಪರಿಶೀಲಿಸಿದ ಲೋಕಾಯುಕ್ತಕ್ಕೆ ಆರೋಪಿ ಆನಂದ್ ಕುಮಾರ್ ತನ್ನ ಬಳಿ 2, 3 ಮೊಬೈಲ್ ನಂಬರ್ ಗಳನ್ನು ಇಟ್ಟುಕೊಂಡಿದ್ದು, ಅವುಗಳಿಂದ ಕರೆ ಮಾಡಿದಾಗ ಟ್ರೂ ಕಾಲರ್ ನಲ್ಲಿ ಕರ್ನಾಟಕ ಲೋಕಾಯುಕ್ತ ಕಚೇರಿ ಎಂದು, ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪರ ಹೆಸರು ಕರ್ನಾಟಕ ಲೋಕಾಯುಕ್ತ ಸಂಸ್ಥೆ ಬೆಂಗಳೂರು ಎಂದು ಬರುವಂತೆ ಮಾಡಿಟ್ಟುಕೊಂಡಿರುವುದು ಪತ್ತೆಯಾಗಿದೆ. ಆರೋಪಿಯ ವಂಚನೆ ಬಗ್ಗೆ ಲೋಕಾಯುಕ್ತ ಇಲಾಖೆಯ ಉಪನಿಬಂಧಕರು ಆನೇಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಅದರಂತೆ ಪ್ರಕರಣ ದಾಖಲಿಸಿಕೊಂಡಿರುವ ಆನೇಕಲ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X