Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದಿಲ್ಲಿ ಪೊಲೀಸರಿಂದ ಮಾನವ ಹಕ್ಕುಗಳ...

ದಿಲ್ಲಿ ಪೊಲೀಸರಿಂದ ಮಾನವ ಹಕ್ಕುಗಳ ಕಾರ್ಯಕರ್ತ ನದೀಮ್ ಖಾನ್ ಅಕ್ರಮ ಬಂಧನಕ್ಕೆ ಯತ್ನ: APCR ಖಂಡನೆ

ವಾರ್ತಾಭಾರತಿವಾರ್ತಾಭಾರತಿ2 Dec 2024 2:04 PM IST
share
Photo of  Nadeem khan

ಬೆಂಗಳೂರು: ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ರಾಷ್ಟ್ರೀಯ ಕಾರ್ಯದರ್ಶಿ ನದೀಮ್ ಖಾನ್ ಅವರ ಸಹೋದರ ಕಾಶಿಫ್ ಖಾನ್ ಅವರ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ನಿವಾಸಕ್ಕೆ ಅಕ್ರಮ ದಾಳಿ, ಕಿರುಕುಳ ಮತ್ತು ನದೀಮ್ ಖಾನ್ ಅವರನ್ನು ಅಕ್ರಮ ಬಂಧನಕ್ಕೆ ಯತ್ನಿಸಿರುವುದನ್ನು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್(ಎಪಿಸಿಆರ್) ಕರ್ನಾಟಕ ಘಟಕ ತೀವ್ರವಾಗಿ ಖಂಡಿಸಿದೆ.

APCR ಕರ್ನಾಟಕ ಘಟಕದ ಅಧ್ಯಕ್ಷ ಪಿ. ಉಸ್ಮಾನ್ ಮತ್ತು ಪ್ರಧಾನ ಕಾರ್ಯದರ್ಶಿ ಮಹಮ್ಮದ್ ನಿಯಾಝ್ ಅವರು ದಿಲ್ಲಿ ಪೊಲೀಸರ ಕ್ರಮಗಳನ್ನು ಕಾನೂನುಬಾಹಿರ, ಅಕ್ರಮ ಮತ್ತು ಸಂವಿಧಾನದ 14,19 ಮತ್ತು 21ನೇ ವಿಧಿಗಳಲ್ಲಿನ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಟೀಕಿಸಿದ್ದಾರೆ. ಖಾನ್ ಅವರು ಸಾಮಾಜಿಕ ಚಟುವಟಿಕೆಯಲ್ಲಿ ಸಕ್ರಿಯರಾಗಿರುವ ಕಾರಣ ಪೊಲೀಸರು ಅವರನ್ನು ಗುರಿಯಾಗಿಸಿದ್ದಾರೆ. ಕರ್ನಾಟಕ ಸರ್ಕಾರವು ಇಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ದಿಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸ್ಥಳೀಯ ಪೊಲೀಸರಿಗೆ ಯಾವುದೇ ಸೂಚನೆ ನೀಡದೆ ನಡೆಸಿದ ದಾಳಿಯು ʼಅರ್ನೇಶ್ ಕುಮಾರ್ vs ಬಿಹಾರʼ ಮತ್ತು ʼಸಿದ್ಧಾರ್ಥ್ vs ಉತ್ತರಪ್ರದೇಶʼ ಸೇರಿದಂತೆ ಹಲವು ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನೀಡಿದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ. ಶಾಹೀನ್ ಬಾಗ್ ಪೊಲೀಸ್ ಠಾಣೆಯ ಸಿಬ್ಬಂದಿ ಸೇರಿದಂತೆ ದಿಲ್ಲಿ ಪೊಲೀಸ್ ಅಧಿಕಾರಿಗಳು ಮನೆಗೆ ಅಕ್ರಮವಾಗಿ ಪ್ರವೇಶಿಸಿ ನದೀಮ್ ಖಾನ್ ಕುಟುಂಬವನ್ನು ಬೆದರಿಸಿದ್ದಾರೆ ಎಂದು APCR ಆರೋಪಿಸಿದೆ.

ದಿಲ್ಲಿಯ ಶಾಹೀನ್ ಬಾಗ್ ಪೊಲೀಸ್ ಠಾಣೆಯಲ್ಲಿ ನದೀಮ್ ಖಾನ್ ವಿರುದ್ಧ BNS ಕಾಯ್ದೆಯ ಸೆಕ್ಷನ್ 196, 353(2) ಮತ್ತು 61ರ ಅಡಿಯಲ್ಲಿ ದಾಖಲಾದ ಪ್ರಕರಣವು ಕಟ್ಟುಕಥೆಯಾಗಿದೆ. ಕ್ರಿಮಿನಲ್ ತನಿಖೆಯ ನೆಪದಲ್ಲಿ ಉತ್ತರಪ್ರದೇಶ, ಸೇರಿದಂತೆ ಇತರ ರಾಜ್ಯಗಳಲ್ಲಿ ಆರೋಪಿಗಳ ಮನೆಗಳನ್ನು ಅಕ್ರಮವಾಗಿ ಕೆಡವುದನ್ನು ವಿರೋಧಿಸಿದ್ದರಿಂದ ಈ ರೀತಿ ಅವರ ಮೇಲೆ ಆರೋಪ ಹೊರಿಸಲಾಗಿದೆ ಎಂದು APCR ಹೇಳಿಕೊಂಡಿದೆ.

ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ನದೀಮ್ ಖಾನ್ ದಿಲ್ಲಿ ಪೊಲೀಸರು ಆಗಮಿಸಿದಾಗ ತನ್ನ ಸಹೋದರನ ನಿವಾಸದಲ್ಲಿದ್ದರು. ಸ್ಥಳೀಯ ಸಾಮಾಜಿಕ ಕಾರ್ಯಕರ್ತರು, ವಕೀಲರು ಮತ್ತು ಮಾನವ ಹಕ್ಕುಗಳ ಸಂಘಟನೆಗಳ ಮಧ್ಯಪ್ರವೇಶದ ಹೊರತಾಗಿಯೂ, ಅಧಿಕಾರಿಗಳು ಸರಿಯಾದ ದಾಖಲೆಗಳನ್ನು ಪ್ರಸ್ತುತಪಡಿಸದೆ, ಸ್ಥಳೀಯ ಪೊಲೀಸರ ಅನುಮತಿಯನ್ನು ಪಡೆಯದೆ ನದೀಮ್ ಖಾನ್ ಅವರನ್ನು ಅಕ್ರಮವಾಗಿ ಬಂಧಿಸಲು ಮುಂದಾಗಿದ್ದಾರೆ. ದಿಲ್ಲಿ ಪೊಲೀಸರ ವಿರುದ್ಧ ಕಾಶಿಫ್ ಖಾನ್ ಅತಿಕ್ರಮಣ, ಕಿರುಕುಳ ಮತ್ತು ಬೆದರಿಕೆ ಆರೋಪದಲ್ಲಿ ಪ್ರಕರಣವನ್ನು ಕೂಡ ದಾಖಲಿಸಿದ್ದಾರೆ ಎಂದು APCR ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X