ಬೆಂಗಳೂರು | ಮಳೆ ಹಾನಿ ಪ್ರದೇಶಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭೇಟಿ
ಬೆಂಗಳೂರು : ನಗರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಬೆಳಿಗ್ಗೆ ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೇಂದ್ರೀಯ ವಿಹಾರ್ ಅಪಾರ್ಮೆಂಟ್ಗೆ ಭೇಟಿ ನೀಡಿದ ತುಷಾರ್ ಗಿರಿನಾಥ್ ಅವರು, ಅಲ್ಲಲ್ಲಿ ನೀರು ನಿಂತಿದ್ದು, ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಂಡು ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸದ್ಯ ಇರುವ ನೀರುಗಾಲುವೆಯ ಪಕ್ಕ ಖಾಸಗಿ ಜಾಗದಲ್ಲಿ ಇಟಾಚಿ ಮೂಲಕ ಕಚ್ಚಾ ಡ್ರೈನ್ ಮಾಡಲಾಗುತ್ತಿದ್ದು, ಕೂಡಲೆ ಕೆಲಸ ಮುಗಿಸಿ ಕಚ್ಚಾ ಡ್ರೈನ್ ಮೂಲಕ ನೀರು ಹರಿದು ಹೊಗುವಂತೆ ಮಾಡಲಾಗುತ್ತಿದೆ.
ನಿನ್ನೆ ಸಂಜೆ ಸಹಾಯ ಕೇಂದ್ರ(Help Desk) ತೆಗಯಲಾಗಿದ್ದು, ನಿವಾಸಿಗಳಿಗಳಿಗೆ ಕುಡಿಯುವ ನೀರು, ಹಾಲು, ಬ್ರೆಡ್, ಬಿಸ್ಕೆಟ್ ಇನ್ನಿತರೆ ಅಗತ್ಯ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
Next Story