Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಕೊಲೆಯ...

ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಕೊಲೆಯ ಹಿಂದೆ ರಾಷ್ಟ್ರೀಯ ಸಂಚು ನಡೆದಿತ್ತು: ಡಾ.ಕೆ.ಮರುಳಸಿದ್ದಪ್ಪ

ವಾರ್ತಾಭಾರತಿವಾರ್ತಾಭಾರತಿ24 Feb 2025 10:47 PM IST
share
Photo of Program

ಬೆಂಗಳೂರು : ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ, ಪತ್ರಕರ್ತೆ ಗೌರಿ ಲಂಕೇಶ್ ಕೊಲೆಯ ಹಿಂದೆ ರಾಷ್ಟ್ರೀಯ ಸಂಚು ನಡೆದಿತ್ತು ಎಂದು ಹಿರಿಯ ವಿಮರ್ಶಕ ಡಾ.ಕೆ.ಮರುಳಸಿದ್ದಪ್ಪ ತಿಳಿಸಿದ್ದಾರೆ.

ಸೋಮವಾರ ನಗರದ ಚಿತ್ರಕಲಾ ಪರಿಷತ್‍ನಲ್ಲಿ ಬಸವ ಅಂತರ್ ರಾಷ್ಟ್ರೀಯ ಪ್ರತಿಷ್ಠಾನ, ಜಿಲ್ಲಾ ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಡಾ.ಎಂ.ಎಂ. ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಉಪರಾಷ್ಟ್ರಪತಿಯೊಬ್ಬರು ಎಂ.ಎಂ.ಕಲಬುರ್ಗಿ ಅವರನ್ನು ಪ್ರೊಫೆಸರ್ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ಮಾಡಿದ್ದರು. ಆದರೆ ಕಲಬುರ್ಗಿ ಯಾವುದಕ್ಕೂ ಹೆದರಲಿಲ್ಲ. ಕೊನೆಯಲ್ಲಿ ಅವರನ್ನು ಕೊಲೆ ಮಾಡಲಾಯಿತು ಎಂದು ತಿಳಿಸಿದರು.

ಎಂ.ಎಂ.ಕಲಬುರ್ಗಿ ಮತ್ತು ಗೌರಿ ಲಂಕೇಶ್ ಅವರನ್ನು ಕೊಂದವರು ಯಾರೇ ಇರಬಹುದು. ಆದರೆ ನಡೆದ ಸಂಚು ರಾಷ್ಟ್ರೀಯ ನೆಲೆಯಲ್ಲಿ ಕೋಮುವಾದಿಗಳು ಮಾಡಿದ ಕ್ರೂರವಾದ ಸಂಚು ಎಂದು ಹೇಳಿದರು.

ಎಂ.ಎಂ.ಕಲಬುರ್ಗಿ ಅವರ ಬಗ್ಗೆ ಮಾತನಾಡುವುದೆಂದರೆ ವಚನ ಸಾಹಿತ್ಯ, ಶರಣ ಸಾಹಿತ್ಯದ ಬಗ್ಗೆ ಮಾತನಾಡಿದಂತೆ. ಆ ಪರಂಪರೆಯನ್ನು ವ್ಯಾಖ್ಯಾನ ಮಾಡುವುದಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟರು. 12ನೇ ಶತಮಾನದಲ್ಲಿ ಕನ್ನಡ ನಾಡಿನಲ್ಲಿ ನಡೆದ ಕ್ರಾಂತಿ ದೇಶದಲ್ಲೇ ಅದ್ಭುತವಾದ ಕ್ರಾಂತಿಯಾಗಿದೆ. ಕರ್ನಾಟಕದಲ್ಲಂತೂ ಸಾಂಸ್ಕøತಿಕ ಚಹರೆಯನ್ನೇ ಬದಲಾಯಿಸಿದೆ. ವಚನ ಸಾಹಿತ್ಯದಿಂದ ಕನ್ನಡ ಸಾಹಿತ್ಯ ಪರಂಪರೆ ಹೊಸ ದಾರಿಯನ್ನು ಹಿಡಿಯಿತು ಎಂದು ಅಭಿಪ್ರಾಯಪಟ್ಟರು.

ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಮಾತನಾಡಿ, ಇತ್ತೀಚಿಗೆ ಎಂ.ಎಂ.ಕಲಬುರ್ಗಿ ಮತ್ತು ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ಆರೋಪಿಗಳಿಗೆ ಬಿಜಾಪುರದಲ್ಲಿ ಸನ್ಮಾನ ಮಾಡಲಾಯಿತು. ಅದರ ವಿರುದ್ಧ ನಾವು ಹೋರಾಟ ಮಾಡಿದೆವು. ಆದರೆ ಬಸವ ಸಮಿತಿ, ವೀರಶೈವ ಮಹಾವೇದಿಕೆಯವರು ಬಾಯಿ ಬಿಡಲಿಲ್ಲ. ಕೆಲವೇ ಕೆಲವು ಜನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂದು ಬೇಸರ ವ್ಯಕ್ತಪಡಿಸಿದರು.

ಬಸವಣ್ಣ ಅವರನ್ನು ಹಳ್ಳಿಹಳ್ಳಿಗೆ ತಲುಪಿಸಿದ ಕೀರ್ತಿ ದಲಿತ ಸಂಘರ್ಷ ಸಮಿತಿಗೆ ಸಲ್ಲುತ್ತದೆ. ಬಸವಣ್ಣ ಎಂದರೆ ದನಕ್ಕೆ ಪೂಜೆ ಮಾಡುತ್ತಿದ್ದೆವು. ಬಸವಣ್ಣವೆಂದರೆ ಕಲ್ಯಾಣ ಬಸವಣ್ಣ ಎನ್ನುವುದನ್ನು ತಿಳಿಸಿದ್ದು, ದಲಿತ ಸಂಘರ್ಷ ಸಮಿತಿ, ಬಾಬಾ ಸಾಹೇಬರು ಬರಿ ದಲಿತರಿಗಾಗಿ ಮಾತ್ರ ಕೆಲಸ ಮಾಡಲಿಲ್ಲ. ಅಂಬೇಡ್ಕರ್ ಅವರ ಇನ್ನೂ ಅನೇಕ ವಿಚಾರಗಳನ್ನು ಹೊರಗೆ ತರಬೇಕಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿ, ಕನ್ನಡ ಸಾಹಿತ್ಯದಲ್ಲಿ ಬೂಸಾ ಇದೆ. ಎಂದು ಬಸವಲಿಂಗಪ್ಪ ಅವರು ಹೇಳಿದ್ದರು. ಅವರು ಕನ್ನಡ ಸಾಹಿತ್ಯ ಬೂಸ ಎಂದು ಹೇಳಿರಲಿಲ್ಲ. ಆದರೆ ನನಗೆ ಬೇರೆ ಪ್ರಚೋದನೆ ಆಗಿತ್ತು. ಆ ಸಮಯದಲ್ಲಿ ಬಸವಲಿಂಗಪ್ಪ ಅವರನ್ನು ಪದಚ್ಯುತಿಗೊಳಿಸುವಲ್ಲಿ ಸಕ್ರಿಯನಾಗಿದ್ದು, ಅನ್ಯಾಯದ ಕೆಲಸ ಮಾಡಿದ್ದೇನೆ. ಅದರ ಬಗ್ಗೆ ಇವತ್ತಿಗೂ ಕೂಡ ನೋವಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ವೇಳೆ ದಲಿತ ಸಂಘರ್ಷ ಸಮಿತಿಯ ಪ್ರದಾನ ಸಂಚಾಲಕ ಮಾವಳ್ಳಿ ಶಂಕರ್ ಅವರಿಗೆ ಡಾ.ಎಂ.ಎಂ.ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಾಟಕ ಅಕಾಡಮಿ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ, ಬಸವ ಪ್ರತಿಷ್ಠಾನದ ಅಧ್ಯಕ್ಷ ಎಸ್.ಮಹದೇವಯ್ಯ, ಇಂದಿರಾ ಕೃಷ್ಣಪ್ಪ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X