Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಳಗಾವಿ ಅಧಿವೇಶನ | ಪರಿಷತ್‍ನಲ್ಲಿ...

ಬೆಳಗಾವಿ ಅಧಿವೇಶನ | ಪರಿಷತ್‍ನಲ್ಲಿ ಮಹಾತ್ಮಾ ಗಾಂಧಿ ಗುಣಗಾನ

ವಾರ್ತಾಭಾರತಿವಾರ್ತಾಭಾರತಿ16 Dec 2024 10:11 PM IST
share
ಬೆಳಗಾವಿ ಅಧಿವೇಶನ | ಪರಿಷತ್‍ನಲ್ಲಿ ಮಹಾತ್ಮಾ ಗಾಂಧಿ ಗುಣಗಾನ

ಬೆಳಗಾವಿ : ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧಿ ಅವರು ವಹಿಸಿ ನೂರು ವರ್ಷಗಳು ತುಂಬಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿರುವ ಶತಮಾನೋತ್ಸ್ಸವ ಸಮಾವೇಶ ಕುರಿತ ವಿಶೇಷ ಚರ್ಚೆಯು ವಿಧಾನ ಪರಿಷತ್ ಕಲಾಪದಲ್ಲಿ ಸೋಮವಾರ ನಡೆಯಿತು.

ಈ ವೇಳೆಯಲ್ಲಿ ಕಾಂಗ್ರೆಸ್ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಮಹಾತ್ಮ ಗಾಂಧೀಜಿ ಸತ್ಯ, ಅಹಿಂಸೆಯನ್ನು ಪ್ರತಿಪಾದಿಸಿದ್ದರೆ, ಗೂಡ್ಸೆಯ ಅನುಯಾಯಿಗಳು ಹಿಂಸೆ, ಸುಳ್ಳನ್ನೆ ಅನುಸರಿಸುತ್ತಿದ್ದಾರೆ. 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಅಸ್ಪಶ್ಯತೆ ನಿವಾರಣೆಯ ಅಂಗೀಕಾರಕ್ಕೆ ಗಾಂಧೀಜಿ ಮುನ್ನುಡಿ ಬರೆದಿದ್ದರು. ಹೀಗಾಗಿ ಇಂದಿನ ನೂರು ವರ್ಷಗಳ ಕಾರ್ಯಕ್ರಮ ಅತ್ಯಂತ ಮಹತ್ವದಾಗಿದೆ’ ಎಂದರು.

ಬಿಜೆಪಿ ಸದಸ್ಯ ಸಿ.ಟಿ.ರವಿ ಮಾತನಾಡಿ, ಸ್ವತಂತ್ರ್ಯ ಪೂರ್ವದಲ್ಲಿನ ಕಾಂಗ್ರೆಸ್‍ನಲ್ಲಿ ತೀವ್ರಗಾಮಿ ಹಾಗೂ ಮಂದಗಾಮಿಗಳು ಎಂಬ ಎರಡು ಬಣಗಳಿದ್ದವು. ಬಾಲಗಂಗಾಧರನಾಥ ತಿಲಕ್‍ರಂತಹ ತೀವ್ರಗಾಮಿಗಳು ಹೋರಾಟದ ಮೂಲಕ ಸ್ವರಾಜ್ಯದ ಕಹಳೆ ಮೊಳಗಿಸಿದರೆ, ಮಂದಗಾಮಿಗಳ ಪಡೆಯು ಬ್ರಿಟಿಷರಿಗೆ ಅರ್ಜಿ ಸಲ್ಲಿಸುವ ಮೂಲಕ ಅವರೊಂದಿಗೆ ಚೆನ್ನಾಗಿಯೇ ಇದ್ದರು. ಗಾಂಧಿ ಅವರ ವ್ಯಕ್ತಿತ್ವವನ್ನು ವೈಭವೀಕರಿಸುವ ಮೂಲಕ ಗಾಂಧಿಯನ್ನು ಯಾರ ಕೈಗೂ ಸಿಗದಂತೆ ಕಾಂಗ್ರೆಸ್ ಮಾಡಿದೆ. ಇದನ್ನು ನೋಡಿದರೆ, ಗಾಂಧಿ ಅವರ ವೈಚಾರಿಕಾ ವಾರಸುಧಾರರು ಯಾರು ಎನ್ನುವ ಪ್ರಶ್ನೆ ಕಾಡುತ್ತಿದೆ ಎಂದರು.

ಸರಳತೆ, ಸತ್ಯ, ಅಹಿಂಸೆ, ರಾಷ್ಟ್ರ ನಿಷ್ಠೆ ಎನ್ನುವುದು ಗಾಂಧಿ ಅವರ ಆಶಯ. ಆದರೆ, ಈಗ ಗಾಂಧಿ ಎಂದು ಹೆಸರಿಟ್ಟುಕೊಂಡರೆ, ಗಾಂಧಿ ಆಗಲು ಸಾಧ್ಯವಿಲ್ಲ. ಅಂತಹವರಿಗೆ ಯಾವುದೇ ಯೋಗ್ಯತೆಯು ಇಲ್ಲ. ಈಗಿನ ಗಾಂಧಿಗಳ ಹೆಸರು ಕೇಳಿದರೆ ಗಾಂಧಿ ಮೇಲೆಯೇ ಅನುಮಾನ ಮೂಡುತ್ತದೆ. ಅವರ ವೈಚಾರಿಕಾ ವಾರಸುಧಾರರು ಯಾರು ಇಲ್ಲ? ಅಧಿಕಾರದ ವಾರಸುದಾರರು ಮಾತ್ರವೇ ಈಗ ಉಳಿದುಕೊಂಡಿದ್ದಾರೆ ಎಂದು ಸಿ.ಟಿ.ರವಿ ಟೀಕಿಸಿದರು.

ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ಅನ್ನು ವಿಸರ್ಜನೆ ಮಾಡಿ ಎಂದೂ ಗಾಂಧಿಯೇ ಹೇಳಿದರೂ, ಆ ಕೆಲಸ ಈವರೆಗೂ ಮಾಡಿಲ್ಲ. ಆದರೀಗ ಗಾಂಧಿ ಹೆಸರು ಕಾಂಗ್ರೆಸ್ ಮೂಲಕ ದುರ್ಬಳಕೆಯಾಗಿದೆ. ಸಾವರ್ಕರ್ ಸೇರಿದಂತೆ ಎಲ್ಲರನ್ನು ಸಮಾನವಾಗಿಯೇ ನೋಡಬೇಕು. ಒಂದು ಘಟನೆಯಿಂದಾಗಿ ಗಾಂಧಿಯನ್ನು ಭಿನ್ನವಾಗಿ ನೋಡಬಾರದು ಎಂದು ಸಿ.ಟಿ.ರವಿ ಪ್ರತಿಪಾದಿಸಿದರು.

ಗೂಡ್ಸೆ ಎಂಬಾತ ಗಾಂಧಿಯನ್ನು ಒಮ್ಮೆ ಮಾತ್ರ ಕೊಂದ. ಆದರೆ ನಾವುಗಳು ಅವರ ವಿಚಾರವನ್ನು ನಿತ್ಯ ಕೊಲ್ಲುತ್ತಿದ್ದೇವೆ. ಭಾರತ ವಿಭಜನೆಗೆ ಗಾಂಧಿ ಒಪ್ಪಿಕೊಂಡಿದ್ದರು. ಶೇ.15 ರಷ್ಟಿದ್ದ ಮುಸ್ಲಿಮರು ಪ್ರತ್ಯೇಕ ಮುಸ್ಲಿಮ್ ದೇಶ ಕೇಳಿದರೆ, ಶೇ.75ರಷ್ಟಿರುವ ನಾವು, ಹಿಂದೂ ದೇಶ ಕೇಳಿದರೆ ತಪ್ಪೇನು? ಎಂದು ಸಿ.ಟಿ.ರವಿ ಪ್ರಶ್ನಿಸಿದರು. ಸಿ.ಟಿ.ರವಿ ಮಾತಿಗೆ ಕೆಂಡಮಂಡಲಗೊಂಡ ಕಾಂಗ್ರೆಸ್ ಸದಸ್ಯರು, ಒಮ್ಮೆಲೆ ಮುಗಿಬಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X