Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | 1949 ರ ಬಿ.ಟಿ ಕಾಯಿದೆ ರದ್ದು...

ಬೀದರ್ | 1949 ರ ಬಿ.ಟಿ ಕಾಯಿದೆ ರದ್ದು ಮಾಡಿ ಬುದ್ಧ ವಿಹಾರ ಬೌದ್ಧರಿಗೆ ನೀಡಲು ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ5 April 2025 10:45 PM IST
share
Photo of Letter of appeal

ಬೀದರ್ : 1949 ರ ಬಿ.ಟಿ ಕಾಯಿದೆ ರದ್ದು ಮಾಡಿ ಬಿಹಾರದ ಬೌದ್ಧಗಯಾದಲ್ಲಿರುವ ಬುದ್ಧ ವಿಹಾರದ ಸಂಪೂರ್ಣ ಆಡಳಿತ ಬೌದ್ಧರಿಗೆ ಒಪ್ಪಿಸಬೇಕು ಎಂದು ಬೌದ್ಧ ಭೀಕ್ಖು, ಭೀಕ್ಖುಣಿಯರ ಜಿಲ್ಲಾ ಸಮಿತಿ ಹಾಗೂ ಉಪಾಸಕ, ಉಪಾಸಕಿಯರ ಸಂಘವು ಆಗ್ರಹಿಸಿದೆ.

ಇಂದು ನಗರದ ಅಂಬೇಡ್ಕರ್ ಭವನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನೆ ಮೂಲಕ ಆಗಮಿಸಿ ಜಿಲ್ಲಾಧಿಕಾರಿಗಳ ಮೂಲಕ ಬಿಹಾರದ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಬಿಹಾರದ ಬೋಧಗಯಾದಲ್ಲಿರುವ ಮಹಾಬೋಧಿ ಮಹಾವಿಹಾರವು ವಿಶ್ವದಾದ್ಯಂತ ಬೌದ್ಧರ ಪವಿತ್ರ ಸ್ಥಳವಾಗಿದ್ದು, ಇದು ಯುನೇಸ್ಕೊ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿದೆ. ಆದರೆ 1949 ರ ಬಿ.ಟಿ ಕಾಯಿದೆಯು ಲಕ್ಷಾಂತರ ಬೌದ್ಧರ ಹಕ್ಕು ಮತ್ತು ಘನತೆಯನ್ನು ಉಲ್ಲಂಘಿಸುತ್ತಿದೆ. ಇದರಿಂದಾಗಿ ಬೌದ್ಧರ ಮೂಲಭೂತ ಹಕ್ಕುಗಳು ದುರ್ಬಲಗೊಳಿಸುವುದಲ್ಲದೆ ಬುದ್ಧನ ಬೋಧನೆಗಳ ಪಾವಿತ್ರ್ಯತೆ ಮತ್ತು ಈ ತಾಣದ ಸಾಂಸ್ಕೃತಿಕ ಮಹತ್ವವನ್ನು ಅಗೌರವಗೊಳಿಸಲಾಗುತ್ತಿದೆ ಎಂದು ದೂರಲಾಗಿದೆ.

1949 ರ ಬಿ.ಟಿ ಕಾಯಿದೆಯಿಂದ ಮಹಾಬೋಧಿ ಮಹಾವಿಹಾರಗಳ ಆಡಳಿತವನ್ನು ಅಲ್ಲಿನ ಬೌದ್ಧೇತರರ ನಡೆಸುತ್ತಿದ್ದಾರೆ. ಸಂಪೂರ್ಣವಾಗಿ ಬೌದ್ಧಗಯಾದ ಬುದ್ಧ ವಿಹಾರ ಬ್ರಾಹ್ಮಣರ ನಿಯಂತ್ರಣದಲ್ಲಿದೆ. ಬೌದ್ಧರ ಧಾರ್ಮಿಕ ಹಕ್ಕು ಕಸಿದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

1949 ರ ಪ್ರಸ್ತುತ-ಬಿಟಿ ಕಾಯಿದೆಯ ತಕ್ಷಣದ ವಿಸರ್ಜನೆ ಮಾಡಿ, ಸ್ವತಂತ್ರ ಬೌದ್ಧ ನಿರ್ವಹಣಾ ಟ್ರಸ್ಟ್‌ ರಚನೆ ಮಾಡುವ ಮೂಲಕ ಬೌದ್ಧ ವಿಹಾರ ಬೌದ್ಧರಿಗೆ ಒದಗಿಸಿ ಕೊಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಆಣದೂರಿನ ಭಂತೆ ಧಮ್ಮಾನಂದ್ ಮಹಾಥೆರೊ, ಭಂತೆ ರೇವತ್ ಥೆರೊ, ಭಂತೆ ವರಜ್ಯೋತಿ, ಭಂತೆ ಜ್ಞಾನಸಾಗರ್ ಥೆರೊ, ಭಂತೆ ಧಮ್ಮಪಾಲ್ ಥೆರೊ, ಭಂತೆ ಸಂಘರಕ್ಖಿತ್, ಭಂತೆ ಧಮ್ಮ ಕೀರ್ತಿ, ಭಂತೆ ನವಪಾಲ್, ಭಂತೆ ಭೋಧಿರತ್ನ, ಭೀಕ್ಖುಣಿ ಸುಮನ್ ಆರ್ಯಾಜಿ, ಭೀಕ್ಕುಣಿ ಪ್ರಜಾಪತಿ ಗೌತಮಿ, ಭಂತೆ ಧಮ್ಮದೀಪ್ ಸೇರಿದಂತೆ ಅನೇಕ ಬೌದ್ಧ ಅನುಯಾಯಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X