Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂದೋರ್‌: ಭಾರಿ ಪ್ರಮಾಣದ ಮಾರಕ ರಾಸಾಯನಿಕ...

ಇಂದೋರ್‌: ಭಾರಿ ಪ್ರಮಾಣದ ಮಾರಕ ರಾಸಾಯನಿಕ ವಶ

ವಾರ್ತಾಭಾರತಿವಾರ್ತಾಭಾರತಿ30 Sept 2018 8:51 AM IST
share
ಇಂದೋರ್‌: ಭಾರಿ ಪ್ರಮಾಣದ ಮಾರಕ ರಾಸಾಯನಿಕ ವಶ

ಹೊಸದಿಲ್ಲಿ, ಸೆ. 30: ಕಂದಾಯ ಗುಪ್ತಚರ ನಿರ್ದೇಶನಾಲಯ ಮತ್ತು ಡಿಆರ್‌ಡಿಇ ವಿಜ್ಞಾನಿಗಳ ತಂಡ ನಡೆಸಿದ ಸುಧೀರ್ಘ ಕಾರ್ಯಾಚರಣೆಯಲ್ಲಿ ಇಂದೋರ್‌ನಲ್ಲಿ ಅಕ್ರಮವಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಯೋಗಾಲಯದ ಮೇಲೆ ದಾಳಿ ನಡೆಸಿ 9 ಕೆಜಿ ಮಾರಕ ಕೃತಕ ಒಪಿಯಾಡ್ ಮತ್ತು ಫೆಂಟನೈಲ್ ಎಂಬ ರಾಸಾಯನಿಕ ವಶಪಡಿಸಿಕೊಂಡಿದ್ದಾರೆ.

ಇದು ಸುಮಾರು 40 ರಿಂದ 50 ಲಕ್ಷ ಮಂದಿಯನ್ನು ಕೊಲ್ಲುವ ಸಾಮರ್ಥ್ಯ ಹೊಂದಿದ್ದ ರಾಸಾಯನಿಕಗಳು ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಸ್ಥಳೀಯ ವ್ಯಾಪಾರಿ ಹಾಗೂ ಅಮೆರಿಕವನ್ನು ದ್ವೇಷಿಸುವ ಪಿಎಚ್‌ಡಿ ಪದವೀಧರ ಕೆಮಿಸ್ಟ್ ಒಬ್ಬರು ಈ ಪ್ರಯೋಗಾಲಯ ನಡೆಸುತ್ತಿದ್ದರು ಎನ್ನಲಾಗಿದೆ. ಭಾರತದಲ್ಲಿ ಫೆಂಟನೈಲ್ ವಶಪಡಿಸಿಕೊಂಡಿರುವುದು ಇದೇ ಮೊದಲು. ಈ ರಾಸಾಯನಿಕವನ್ನು ರಾಸಾಯನಿಕ ಯುದ್ಧದಲ್ಲಿ ಬಳಸಿದರೆ ದೊಡ್ಡ ಪ್ರಮಾಣದ ಸಾವು ಸೋವಿಗೆ ಇದು ಕಾರಣವಾಗುವುದರಿಂದ ಇಂಥ ಪ್ರಯೋಗಾಲಯ ಕಾರ್ಯ ನಿರ್ವಹಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಸಂಬಂಧ ಮೆಕ್ಸಿಕೊ ಪ್ರಜೆಯೊಬ್ಬನನ್ನೂ ಬಂಧಿಸಲಾಗಿದೆ.

"ಫೆಂಟನೈಲ್ ರಾಸಾಯನಿಕವು ಹೆರಾಯಿನ್‌ಗಿಂತ 50 ಪಟ್ಟು ಶಕ್ತಿಶಾಲಿಯಾಗಿದ್ದು, ಇದರ ಕಣಗಳನ್ನು ಆಘ್ರಾಣಿಸುವುದು ಕೂಡಾ ಮಾರಕವಾಗುತ್ತದೆ. ದೇಶದಲ್ಲಿ ಕಾನೂನು ಜಾರಿ ಸಂಸ್ಥೆ ಈ ರಾಸಾಯನಿಕವನ್ನು ಇಷ್ಟು ಬೃಹತ್ ಪ್ರಮಾಣದಲ್ಲಿ ವಶಪಡಿಸಿಕೊಳ್ಳುತ್ತಿರುವುದು ಇದೇ ಮೊದಲು. ಜೀವಹಾನಿಕಾರಕ ರಾಸಾಯನಿಕ ಉತ್ಪಾದನಾ ಘಟಕದ ಮೇಲೆ ನಡೆದಿರುವ ಈ ದಾಳಿ ಡಿಆರ್‌ಐ ಇತಿಹಾಸದಲ್ಲೇ ವಿಶಿಷ್ಟ ಹಾಗೂ ಐತಿಹಾಸಿಕ" ಎಂದು ಡಿಆರ್‌ಐ ಮಹಾನಿರ್ದೇಶಕ ಡಿ.ಪಿ.ಡ್ಯಾಶ್ ಹೇಳಿದ್ದಾರೆ.

ಈ ರಾಸಾಯನಿಕ ಉತ್ಪಾದನೆಗೆ ಪರಿಣತಿ ಬೇಕಾಗಿದ್ದು, ತರಬೇತಿ ಪಡೆದ ವಿಜ್ಞಾನಿಗಳು ಅತ್ಯುನ್ನತ ದರ್ಜೆಯ ಪ್ರಯೋಗಾಲಯಗಳಲ್ಲಿ ಮಾತ್ರ ಇದನ್ನು ಉತ್ಪಾದಿಸಲು ಸಾಧ್ಯ. ಇದು ನಿಯಂತ್ರಿತ ರಾಸಾಯನಿಕವಾಗಿದ್ದು, ಅನಸ್ತೇಶಿಯಾ ಮತ್ತು ನೋವು ನಿವಾರಕ ಔಷಧಿಗಳಲ್ಲಿ ಅಲ್ಪಪ್ರಮಾಣದಲ್ಲಿ ಬಳಕೆಯಾಗುತ್ತದೆ ಎಂದು ವಿವರಿಸಿದ್ದಾರೆ.

ಇದು ಸುಲಭವಾಗಿ ಹರಡುತ್ತದೆ ಹಾಗೂ ಚರ್ಮದ ಮೂಲಕ ಕೂಡಾ ಇದು ದೇಹಕ್ಕೆ ಹೀರಿಕೊಳ್ಳಲ್ಪಡುತ್ತದೆ. ಆಕಸ್ಮಿಕವಾಗಿ ಉಸಿರಾಟದ ಮೂಲಕ ಸೇವಿಸಲು ಕೂಡಾ ಸಾಧ್ಯತೆ ಇದ್ದು, 2 ಮಿಲಿಗ್ರಾಂನಷ್ಟು ಫೆಂಟನೈಲ್ ರಾಸಾಯನಿಕ ಒಬ್ಬ ವ್ಯಕ್ತಿಯನ್ನು ಕೊಲ್ಲಬಲ್ಲದು. ಈ ದಾಳಿಗೆ ಡಿಆರ್‌ಡಿಇ ಪ್ರಯೋಗಾಲಯದ ಪರಿಣತ ವಿಜ್ಞಾನಿಗಳ ನೆರವು ಬಳಸಿಕೊಳ್ಳಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X