Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ : ಪೊಲೀಸರಿಂದ...

ಬೆಳ್ತಂಗಡಿ : ಪೊಲೀಸರಿಂದ ತಪ್ಪಿಸಿಕೊಳ್ಳಲು ನಕ್ಸಲ್‌ ಎಂದು ಬಿಂಬಿಸಿ 112ಗೆ ಕರೆ ಮಾಡಿ ನಾಟಕ!

ನಕ್ಸಲ್ ಪೀಡಿತ ಪ್ರದೇಶದ ಮನೆಗೆ ಬಂದ ಅಪರಿಚಿತ ತಂಡ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ22 Nov 2023 7:24 PM IST
share
ಬೆಳ್ತಂಗಡಿ : ಪೊಲೀಸರಿಂದ ತಪ್ಪಿಸಿಕೊಳ್ಳಲು ನಕ್ಸಲ್‌ ಎಂದು ಬಿಂಬಿಸಿ 112ಗೆ ಕರೆ ಮಾಡಿ ನಾಟಕ!

ಬೆಳ್ತಂಗಡಿ : ನಕ್ಸಲ್ ಪೀಡಿತ ಪ್ರದೇಶದಲ್ಲಿ ರಾತ್ರಿ ಐದು ಜ‌ನರ ತಂಡವೊಂದು ಬಾಗಿಲು ಬಡಿದು ವಿಚಾರಿಸಿರುವ ಘಟನೆ ನ.21 ರಂದು ರಾತ್ರಿ ಕುತ್ಲೂರಿನಲ್ಲಿ ನಡೆದಿರುವ ಘಟನೆಗೆ ಇದೀಗ ಟ್ವಿಸ್ಟ್ ಸಿಕ್ಕಿದೆ.

ಮನೆಗೆ ಬಂದಿರುವುದು ನಕ್ಸಲ್ ಅಲ್ಲ ವಂಚನೆ ಪ್ರಕರಣದ ಆರೋಪಿ ಜೋಸಿ ಆಂಟೋನಿ ಎಂಬಾತ ಹಗಲು ಹೊತ್ತು ಸಿಕ್ಕಿಲ್ಲ ಎಂದು ರಾತ್ರಿ ಹೊತ್ತು ಮೂಡುಬಿದಿರೆ ಪೊಲೀಸರು ಹೋಗಿದ್ದರು. ಈ ಬಗ್ಗೆ ವೇಣೂರು ಮತ್ತು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ಇರಲ್ಲಿಲ್ಲ ಎಂದು ‌ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ರಿಷ್ಯಂತ್ ಸ್ಪಷ್ಟಪಡಿಸಿದ್ದಾರೆ.

ಜೋಸಿ ಆಂಟೋನಿಯ ಜಾಗವನ್ನು ಬೆಂಗಳೂರಿನ ಸುಹನಾ ಎಂಬವರು 45 ಲಕ್ಷಕ್ಕೆ ಅಗ್ರಿಮೆಂಟ್ ಮಾಡಿದ್ದು ಇದರಲ್ಲಿ 24 ಲಕ್ಷ ಚೆಕ್ ನೀಡಿದ್ದರು. ಹಾಗೂ ಅದೇ ಜಾಗವನ್ನು ಬೆಂಗಳೂರಿನ ಶರತ್ ಎಂಬವರಿಗೆ 48 ಲಕ್ಷಕ್ಕೆ ಅಗ್ರಿಮೆಂಟ್ ಮಾಡಿ 19 ಲಕ್ಷದ ಚೆಕ್ ಪಡೆದಿದ್ದನು. ಇಬ್ಬರಿಗೂ ಜೋಸಿ ಆಂಟೋನಿ ವಂಚನೆ ಮಾಡಿದ್ದು, ಈ ಪ್ರಕರಣದ ಬಗ್ಗೆ ಇಬ್ಬರು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಜೋಸಿ ಆಂಟೋನಿ ವಿರುದ್ಧ ದೂರು ನೀಡಿದ್ದರು.

ಈ ಸಂಬಂಧ ಠಾಣೆಗೆ ಕರೆದರೆ ಬಾರದೆ ಫೋನ್ ತೆಗೆಯದೆ ಜೋಸಿ ಆಂಟೋನಿ ತಪ್ಪಿಸಿಕೊಳ್ಳುತ್ತಿದ್ದ ಇದರಿಂದಾಗಿ ಮೂಡುಬಿದಿರೆ ಪೊಲೀಸರು ರಾತ್ರಿಯ ವೇಳೆ ಆತನನ್ನು ಹುಡುಕಿ ಮನೆಗೆ ಹೋಗಿದ್ದರು.

ಮಹಿಳಾ ಪಿ.ಸಿ ಸಮೇತ ಪೊಲೀಸರು ಬಂದು ಮನೆಯ ಬಾಗಿಲು ತಟ್ಟಿದ್ದರು. ಆದರೆ ಜೋಸಿ ಆಂಟೋನಿ ಬಾಗಿಲು ತೆರೆಯಲಿಲ್ಲ. ರಾತ್ರಿಯಾದ ಕಾರಣ ಪೊಲೀಸರು ಹಿಂತಿರುಗಿದ್ದರು. ಪೊಲೀಸರಿಂದ ತಪ್ಪಿಸಿಕೊಳ್ಳಲು ಆತ ಮೂಡುಬಿದಿರೆ ಪೊಲೀಸರನ್ನು ನಕ್ಸಲರು ಎಂದು ಬಿಂಬಿಸಿ ವೇಣೂರು, 112 ಪೊಲೀಸರಿಗೆ ಕರೆ ಮಾಡಿ ನಾಟಕವಾಡಿರುವುದು ಇದೀಗ ಬೆಳಕಿಗೆ ಬಂದಿದೆ.

"ವೇಣೂರು ಠಾಣೆ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಜೋಸಿ ಆಂಟೋನಿ ಎಂಬಾತನ ಮನೆಗೆ, ನ.21 ರಂದು ರಾತ್ರಿ ನಕ್ಸಲರು ಭೇಟಿ ನೀಡಿರುವುದಾಗಿ ಸುದ್ದಿ ಪ್ರಸಾರವಾಗುತ್ತಿದ್ದು, ವಾಸ್ತವವಾಗಿ ಮಂಗಳೂರು ನಗರ ವ್ಯಾಪ್ತಿಯ ಪೊಲೀಸರು ದೂರು ಅರ್ಜಿ ಸಂಬಂಧವಾಗಿ, ಜೋಸಿ ಆಂಟೋನಿ ಮನೆಗೆ ಭೇಟಿ ನೀಡಿರುವುದಾಗಿದೆ".

- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮಂಗಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X