Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶರಣ್ ಪಂಪ್ ವೆಲ್ ವಿರುದ್ಧ ಕ್ರಮಕ್ಕೆ...

ಶರಣ್ ಪಂಪ್ ವೆಲ್ ವಿರುದ್ಧ ಕ್ರಮಕ್ಕೆ ಜಾತ್ಯತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ ಆಗ್ರಹ: ಸಚಿವರಿಗೆ ಮನವಿ

ಮಂಗಳಾದೇವಿ ದಸರಾ ಉತ್ಸವದ ವ್ಯಾಪಾರ ವಿವಾದ

ವಾರ್ತಾಭಾರತಿವಾರ್ತಾಭಾರತಿ18 Oct 2023 12:19 PM IST
share
ಶರಣ್ ಪಂಪ್ ವೆಲ್ ವಿರುದ್ಧ ಕ್ರಮಕ್ಕೆ ಜಾತ್ಯತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ ಆಗ್ರಹ: ಸಚಿವರಿಗೆ ಮನವಿ
"ಶರಣ್ ಪಂಪ್ ವೆಲ್ ನೇತೃತ್ವದ ಬಜರಂಗ ದಳದ ಕುಖ್ಯಾತ ಗ್ಯಾಂಗ್ ಪದೇ ಪದೆ ಇಂತಹ ಸೌಹಾರ್ದ ಕದಡುವ, ದ್ವೇಷ ಹರಡುವ ಕ್ರಿಮಿನಲ್ ಕೃತ್ಯಗಳನ್ನು ಎಸಗುತ್ತಲೇ ಬಂದಿದೆ. ಇಂತಹ ಗೂಂಡಾಗಿರಿ ಎಗ್ಗಿಲ್ಲದೆ ನಡೆಯಲು ಕಾನೂನು ಪಾಲಕರ ತೀರಾ ಮೃದು ಧೋರಣೆ ಕಾರಣ" - ದ.ಕ. ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ

ಮಂಗಳೂರು, ಅ.18: ಮಂಗಳಾದೇವಿ ದೇವಸ್ಥಾನದ ದಸರಾ ಉತ್ಸವದ ಸಂದರ್ಭ ವ್ಯಾಪಾರಕ್ಕೆ ಸಂಬಂಧಿಸಿ ಮತೀಯ ಸೌಹಾರ್ದ ಕದಡಲು ಯತ್ನಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಮತ್ತು ಸಹಚರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸೌಹಾರ್ದ ಕದಡದಂತೆ ಕ್ರಮ ಕಾರ್ಯಕ್ರಮ ರೂಪಿಸಬೇಕು ಎಂದು ಒತ್ತಾಯಿಸಿ ದ.ಕ. ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆಯು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಗೆ ಒತ್ತಾಯಿಸಿದೆ.

ಮಂಗಳೂರಿನಲ್ಲಿ ಸರ್ಕ್ಯೂಟ್ ಹೌಸ್ ನಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾದ ವೇದಿಕೆಯ ಮುಖಂಡರು ಈ ಬಗ್ಗೆ ಮನವಿ ಸಲ್ಲಿಸಿದರು.

ಮಂಗಳಾದೇವಿ ದೇವಸ್ಥಾನದ ದಸರಾ ಉತ್ಸವದ ಸಂದರ್ಭ ವ್ಯಾಪಾರಕ್ಕೆ ಸಂಬಂಧಿಸಿ ಉದ್ಭವಿಸಿದ್ದ ವಿವಾದವನ್ನು ಜಿಲ್ಲಾಡಳಿತ ಪ್ರಭಾರ ಜಿಲ್ಲಾಧಿಕಾರಿ ಸಭೆ ನಡೆಸಿ ಇತ್ಯರ್ಥಪಡಿಸಿದ್ದರೂ, ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ವಿಎಚ್ ಪಿ, ಬಜರಂಗ ದಳವು ಮತೀಯ ಸೌಹಾರ್ದ ಕದಡುವ ಕೆಲಸ ಮಾಡುತ್ತಿದೆ. ಕೇಸರಿ ಧ್ವಜ ಹಾಕಿರುವ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಿ ಎಂದು ತಾಕೀತು ಮಾಡಿದೆ. ಇದು ಬಹಿಷ್ಕಾರದ ಕ್ರಮವಾಗಿದೆ. ಸಂವಿಧಾನದ ಆಶಯದ ಉಲ್ಲಂಘನೆ ಮಾತ್ರವಲ್ಲ, ಇದು ಕ್ರಿಮಿನಲ್ ಕಾನೂನು ಗಳ ಉಲ್ಲಂಘನೆ. ಆದ್ದರಿಂದ ಶರಣ್ ಪಂಪ್ ವೆಲ್ ಮಾತು ಗ್ಯಾಂಗ್ ಅನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ಆಗ್ರಹಿಸಿದೆ.

ಮಂಗಳಾದೇವಿ ಜಾತ್ರೋತ್ಸವವನ್ನೇ ಗುರಿಯಾಗಿಸಿ ವಿಎಚ್ ಪಿ, ಬಜರಂಗ ದಳವನ್ನು ಚೂ ಬಿಟ್ಟು ಮತೀಯ ಸೌಹಾರ್ದ ಕದಡುವ ಕೆಲಸ ಬಹಿರಂಗವಾಗಿಯೇ ನಡೆಯತೊಡಗಿದೆ. ದೇವಸ್ಥಾನದ ಮುಂಭಾಗದ ನಗರ ಪಾಲಿಕೆ ಜಾಗದಲ್ಲಿ ಹಾಕಲಾದ ಜಾತ್ರೆ ವ್ಯಾಪಾರದ ಸ್ಟಾಲ್ ಗಳಲ್ಲಿ ವ್ಯಾಪಾರಿಗಳ ಮಳಿಗೆಗಳಿಗೆ ಬಲವಂತವಾಗಿ ಕೇಸರಿ ಧ್ವಜ ಕಟ್ಟುವ ಮೂಲಕ ಒಂದು ಸಮುದಾಯದ ವ್ಯಾಪಾರಿಗಳನ್ನು ಪ್ರತ್ಯೇಕಿಸುವ, ಕೇಸರಿ ಬಾವುಟ ಕಟ್ಟಿರುವ ಮಳಿಗೆಗಳಲ್ಲಿ ಮಾತ್ರ ಹಿಂದುಗಳು ಖರೀದಿಸಬೇಕು ಎಂದು ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಬಜರಂಗ ದಳದ ಮುಖಂಡರು ಬಹಿರಂಗ ಕರೆ ನೀಡಿರುತ್ತಾರೆ. ಇದು ಸಂವಿಧಾನದ ನಿಯಮಗಳ, ಕ್ರಿಮಿನಲ್ ಕಾನೂನುಗಳ ಸ್ಪಷ್ಟ ಉಲ್ಲಂಘನೆ. ಸಮುದಾಯವೊಂದನ್ನು ಬಹಿಷ್ಕರಿಸುವುದು, ಬಹಿರಂಗವಾಗಿ ಬಹಿಷ್ಕಾರಕ್ಕೆ ಕರೆ ನೀಡುವುದು ಜಾಮೀನುರಹಿತ ಅಪರಾಧವಾಗಿದೆ. ಶರಣ್ ಪಂಪ್ ವೆಲ್ ನೇತೃತ್ವದ ಬಜರಂಗ ದಳದ ಕುಖ್ಯಾತ ಗ್ಯಾಂಗ್ ಪದೇ ಪದೆ ಇಂತಹ ಸೌಹಾರ್ದ ಕದಡುವ, ದ್ವೇಷ ಹರಡುವ ಕ್ರಿಮಿನಲ್ ಕೃತ್ಯಗಳನ್ನು ಎಸಗುತ್ತಲೇ ಬಂದಿದೆ. ಆದರೆ, ಕಾನೂನು ಪಾಲಕರು ಈ ಕುರಿತು ತೀರಾ ಮೃದು ಧೋರಣೆ ತಳೆಯುತ್ತಿರುವುದು ಗೂಂಡಾಗಿರಿಯನ್ನು ಎಗ್ಗಿಲ್ಲದೆ ಮುಂದುವರಿಸಲು ಅವಕಾಶ ಒದಗಿಸಿದೆ ಎಂದು ದೂರಲಾಗಿದೆ.

ಪೊಲೀಸ್ ಇಲಾಖೆ, ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಇಂತಹ ಗಂಭೀರ ಪ್ರಕರಣವನ್ನು ಲಘುವಾಗಿ ಕಾಣಬಾರದು, ಕಾನೂನಿನ ಕಠಿಣ ನಿಯಮಗಳಡಿ ತಕ್ಷಣವೇ ಪ್ರಕರಣ ದಾಖಲಿಸಿ ಶರಣ್ ಪಂಪ್ ವೆಲ್ ಮತ್ತು ಅವರ ಜೊತೆಗಾರರಾದ ಕ್ರಿಮಿನಲ್ ಗುಂಪುನ್ನು ಬಂಧಿಸಿ ಜೈಲಿಗಟ್ಟ ಬೇಕು ಎಂದು ಒತ್ತಾಯಿಸಿರುವ 'ದ.ಕ. ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ', ಇಂತಹ ಕ್ರಮಗಳಿಲ್ಲದೆ ಮುಂದಕ್ಕೆ ಶಾಂತಿ ಕದಡುವ ಘಟನೆಗಳು ಜರುಗಿದರೆ ಅದಕ್ಕೆ ಜಿಲ್ಲಾಡಳಿತವೇ ಹೊಣೆಯಾಗಲಿದೆ ಎಂದು ವೇದಿಕೆ ಎಚ್ಚರಿಸಿದೆ.

ಮುಂಬರುವ ಲೋಕಸಭೆ ಚುನಾವಣೆಯ ಸಿದ್ದತೆಯ ಭಾಗವಾಗಿಯೇ ಈ ಎಲ್ಲಾ ಘಟನೆಗಳು ನಡೆಯುತ್ತಿವೆ. ಶರಣ್ ಪಂಪ್ ವೆಲ್ ಸೇರಿದಂತೆ ಬಜರಂಗ ದಳದ ಕಾರ್ಯಕರ್ತರನ್ನು ಛೂ ಬಿಟ್ಟು ಬಿಜೆಪಿ ಮತೀಯ ಉದ್ವಿಗ್ನತೆ ಕೆರಳಿಸಲು, ಧರ್ಮದ ಆಧಾರದಲ್ಲಿ ಮತಗಳ ಧ್ರುವೀಕರಣಕ್ಕೆ ಮುಂದಾಗಿದೆ. ಸೌಹಾರ್ದಕ್ಕೆ ಮಾದರಿಯಾಗಿರುವ ಮಂಗಳಾದೇವಿ ದೇವಳದ ದಸರಾದಲ್ಲಿ ಯಶಸ್ಸು ಕಂಡರೆ ಮುಂಬರುವ ಚುನಾವಣೆಯವರಗೆ ಎಲ್ಲಾ ಧಾರ್ಮಿಕ, ಸಾಂಸ್ಕೃತಿಕ ಉತ್ಸವಗಳಲ್ಲಿ ಇದೇ ಮಾದರಿಯನ್ನು ಬಿಜೆಪಿ ಅನುಸರಿಸಲಿದೆ. ಆದ್ದರಿಂದ ಇಂತಹ ಕೆಟ್ಟ, ದುರಾಲೋಚನೆಯ, ಮತೀಯ ದ್ವೇಷದ ರಾಜಕಾರಣಕ್ಕೆ ಕಡಿವಾಣ ಹಾಕಲು ದೃಢ ಕ್ರಮಗಳನ್ನು ಜರುಗಿಸಬೇಕು, ಐಕ್ಯ, ಸೌಹಾರ್ದ ಪರಂಪರೆಯನ್ನು ಎತ್ತಿಹಿಡಿಯಲು ಮುಂದಾಗಬೇಕು ಎಂದು ಸಚಿವರನ್ನು ವೇದಿಕೆ ಒತ್ತಾಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X