ದಾವಣಗೆರೆ | ಪತ್ನಿ ಸಾವಿನಿಂದ ಮನನೊಂದು ತನ್ನಿಬ್ಬರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಸಾಂದರ್ಭಿಕ ಚಿತ್ರ
ದಾವಣಗೆರೆ : ಪತ್ನಿ ಸಾವಿನಿಂದ ಮನನೊಂದು ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಹತ್ಯೆಗೈದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಜೆ ಎಸ್ಪಿಎಸ್ ನಗರದ 2ನೇ ಹಂತದಲ್ಲಿ ನಡೆದಿದೆ.
ಮೃತರನ್ನು ಉದಯಕುಮಾರ (35) ಹಿಂದೂಶ್ರೀ (6) ಶ್ರೀಜಯ (3) ಎಂದು ತಿಳಿದು ಬಂದಿದೆ.
6 ತಿಂಗಳ ಹಿಂದೆ ಪತ್ನಿ ಹೃದಯಘಾತದಿಂದ ಮೃತಪಟ್ಟಿದ್ದರು. ಅದೇ ನೋವಿನಲ್ಲಿದ್ದ ಉದಯಕುಮಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಗಾಂಧಿನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
Next Story