ಕಾರ್ಮಿಕನ ಮೃತದೇಹ ಎಳೆದೊಯ್ದ ಪ್ರಕರಣ | ಆರೋಪಿಗಳ ವಿರುದ್ಧ ಅಗತ್ಯ ಕಾನೂನು ಕ್ರಮ: ಸಂತೋಷ್ ಲಾಡ್

ಧಾರವಾಡ : ಕಲಬುರಗಿಯ ಖಾಸಗಿ ಕಂಪೆನಿಯಲ್ಲಿ ಮೃತ ಕಾರ್ಮಿಕನ ದೇಹವನ್ನು ಇತರೆ ಕಾರ್ಮಿಕರು ಎಳೆದೊಯ್ದಿರುವ ಘಟನೆ ತೀವ್ರ ಆಘಾತ ಮೂಡಿಸಿದೆ. ಕೃತ್ಯ ಎಸಗಿದವರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಬುಧವಾರ ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಜೊತೆಯಲ್ಲೇ ಕೆಲಸ ಮಾಡುವ ಕಾರ್ಮಿಕ ಮೃತಪಟ್ಟಾಗ ಕಾರ್ಮಿಕರು ಈ ರೀತಿ ಅಮಾನುಷವಾಗಿ ಮೃತದೇಹದೊಂದಿಗೆ ನಡೆದುಕೊಂಡಿದ್ದಾರೆ ಎಂಬುದೇ ಅರಗಿಸಿಕೊಳ್ಳಲಾಗುತ್ತಿಲ್ಲ. ಕಾರ್ಮಿಕರೇ ಮೃತದೇಹವನ್ನು ಎಳೆದೊಯ್ದಿದ್ದನ್ನು ಮಾಧ್ಯಮಗಳ ಮೂಲಕ ನೋಡಿದ್ದೇನೆ. ಇಂತಹುದು ನಡೆಯಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದರು.
ಇದು ನಮ್ಮ ಮನಸ್ಥಿತಿಯನ್ನು ತೋರಿಸುತ್ತದೆ. ಘಟನೆ ಬಗ್ಗೆ ವಿಷಾದವಿದೆ. ಮನುಷ್ಯರಲ್ಲಿ ಮಾನವೀಯತೆಯೇ ಮುಖ್ಯವಾಗಬೇಕು. ಮೃತದೇಹಕ್ಕೆ ಗೌರವ ಕೊಡಬೇಕು ಎಂಬ ಬಗ್ಗೆ ನಾವು ತಿಳಿದಿರಬೇಕು. ಘಟನೆ ಬಗ್ಗೆ ಈಗಾಗಲೇ ಕಲಬುರಗಿ ಪೆÇಲೀಸ್ ವರಿಷ್ಠಾಧಿಕಾರಿಗಳೊಡನೆ ಮಾತನಾಡಿ ಮಾಹಿತಿ ತರಿಸಿಕೊಂಡಿದ್ದೇನೆ ಎಂದು ತಿಳಿಸಿದರು.