Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಡಾ. ತುಂಬೆ ಮೊಯ್ದಿನ್ ಅವರಿಗೆ ಎರಡು ಗೌರವ...

ಡಾ. ತುಂಬೆ ಮೊಯ್ದಿನ್ ಅವರಿಗೆ ಎರಡು ಗೌರವ ಡಾಕ್ಟರೇಟ್‌ಗಳು

ವಾರ್ತಾಭಾರತಿವಾರ್ತಾಭಾರತಿ3 March 2025 8:43 PM IST
share
ಡಾ. ತುಂಬೆ ಮೊಯ್ದಿನ್ ಅವರಿಗೆ ಎರಡು ಗೌರವ ಡಾಕ್ಟರೇಟ್‌ಗಳು

ದುಬೈ: ಪ್ರತಿಷ್ಠಿತ ತುಂಬೆ ಗ್ರೂಪ್ ನ ಸ್ಥಾಪಕಾಧ್ಯಕ್ಷ ಡಾ. ತುಂಬೆ ಮೊಯ್ದಿನ್ ಅವರು ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆ, ಅರೋಗ್ಯ ಕ್ಷೇತ್ರದಲ್ಲಿ ತಂದಿರುವ ಧನಾತ್ಮಕ ಬದಲಾವಣೆಗಳು ಹಾಗು ಸಾಮಾಜಿಕ ಸೇವೆಯನ್ನು ಗುರುತಿಸಿ ಎರಡು ಗೌರವ ಡಾಕ್ಟರೇಟ್ ಗಳನ್ನು ನೀಡಲಾಗಿದೆ.

ಭಾರತದ ಚಿತ್ಕಾರ ವಿಶ್ವವಿದ್ಯಾಲಯ ಹಾಗು ಉಝ್ಬೆಕಿಸ್ತಾನದ ಫೇರ್ಗನಾ ಮೆಡಿಕಲ್ ಇನ್ಸ್ ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ - ಈ ಎರಡೂ ವಿವಿಗಳಿಂದ ಡಾ. ತುಂಬೆ ಮೊಯ್ದಿನ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.

ಚಂಡೀಗಢದ ಚಿತ್ಕಾರ ವಿವಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಮೊಯ್ದಿನ್ ಅವರಿಗೆ ಡಾಕ್ಟರ್ ಆಫ್ ಲಿಟರೇಚರ್ ( ಡಿ ಲಿಟ್ ) ಪದವಿಯನ್ನು ಪ್ರದಾನ ಮಾಡಲಾಯಿತು.


ಉಝ್ಬೆಕಿಸ್ತಾನದ ಫೇರ್ಗನಾ ಮೆಡಿಕಲ್ ಇನ್ಸ್ ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ನಲ್ಲಿ ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಡಾ. ಮೊಯ್ದಿನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಯಿತು. ಅಂತರ್ ರಾಷ್ಟ್ರೀಯ ಅರೋಗ್ಯ ಕ್ಷೇತ್ರದಲ್ಲಿ ಪರಸ್ಪರ ಪಾಲುದಾರಿಕೆ ಹಾಗು ಒಪ್ಪಂದಗಳ ಮೂಲಕ ಶೈಕ್ಷಣಿಕ ಹಾಗು ಅರೋಗ್ಯ ಕ್ಷೇತ್ರದಲ್ಲಿ ಡಾ. ಮೊಯ್ದಿನ್ ಅವರು ಮಾಡಿರುವ ಅಮೋಘ ಸಾಧನೆಗೆ ಜಾಗತಿಕ ಗೌರವ ಸಂದಂತಾಗಿದೆ. ಈವರೆಗೆ ಡಾ. ಮೊಯ್ದಿನ್ ಅವರಿಗೆ ಒಟ್ಟು ನಾಲ್ಕು ಗೌರವ ಡಾಕ್ಟರೇಟ್ ಗಳನ್ನು ನೀಡಲಾಗಿದೆ.


"ಈ ಪ್ರತಿಷ್ಠಿತ ಪದವಿಗಳನ್ನು ಸ್ವೀಕರಿಸಿ ನನಗೆ ಬಹಳ ಸಂತಸವಾಗಿದೆ. ಇದು ವೈಯಕ್ತಿಕವಾಗಿ ನನಗೆ ಮಾತ್ರವಲ್ಲದೆ ಇಡೀ ತುಂಬೆ ಗ್ರೂಪ್ ಗೆ ಸಂದಿರುವ ಗೌರವವಾಗಿದೆ. ಜಾಗತಿಕವಾಗಿ ಅರೋಗ್ಯ ಹಾಗು ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ತುಂಬೆ ಗ್ರೂಪ್ ನ ಪ್ರಯತ್ನ ಹಾಗು ಬದ್ಧತೆಗೆ ಈ ಗೌರವ ಸಲ್ಲುತ್ತದೆ. ಎಲ್ಲರಿಗೂ ಅತ್ಯುನ್ನತ ವೈದ್ಯಕೀಯ ಸೌಲಭ್ಯಗಳು ಹಾಗು ಶಿಕ್ಷಣ ಕೈಗೆಟಕುವಂತೆ ಮಾಡಲು ನಾವು ನಮ್ಮ ಪ್ರಯತ್ನವನ್ನು ಮುಂದುವರಿಸುತ್ತೇವೆ" ಎಂದು ಡಾ. ತುಂಬೆ ಮೊಯ್ದಿನ್ ಅವರು ಪ್ರತಿಕ್ರಿಯಿಸಿದ್ದಾರೆ.

ತುಂಬೆ ಗ್ರೂಪ್ ಅನ್ನು ಅರೋಗ್ಯ, ವೈದ್ಯಕೀಯ ಶಿಕ್ಷಣ, ಸಂಶೋಧನೆ ಹಾಗು ಚಿಕಿತ್ಸಾ ಕ್ಷೇತ್ರದಲ್ಲಿ ಜಾಗತಿಕ ನಾಯಕನಾಗಿ ರೂಪಿಸುವ ವಿಷನ್ 2028 ನತ್ತ ಮುನ್ನುಗ್ಗಲು ಈ ಎರಡೂ ಗೌರವಗಳು ಪ್ರೇರಣೆಯಾಗಿವೆ.

ಡಾ. ತುಂಬೆ ಮೊಯ್ದಿನ್ ಅವರ ಸಮರ್ಥ ಹಾಗು ದೂರದರ್ಶಿ ನಾಯಕತ್ವದಲ್ಲಿ ತುಂಬೆ ಗ್ರೂಪ್ ಈಗಾಗಲೇ ವೇಗವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿದೆ. ಜೊತೆಗೆ ವೈದ್ಯಕೀಯ ಕ್ಷೇತ್ರದಲ್ಲಾಗುತ್ತಿರುವ ಡಿಜಿಟಲ್ ಕ್ರಾಂತಿಗೆ ಹೊಂದಿಕೊಂಡು ತನ್ನ ಜಾಗತಿಕ ಗುರಿಯನ್ನು ತಲುಪಲು ಹೆಜ್ಜೆಯಿಡುತ್ತಿದೆ ಎಂದು ತುಂಬೆ ಗ್ರೂಪ್ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X