Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಾಝಾ ಪತ್ರಕರ್ತರ ವಿರುದ್ಧ ಕ್ರಮಕ್ಕೆ...

ಗಾಝಾ ಪತ್ರಕರ್ತರ ವಿರುದ್ಧ ಕ್ರಮಕ್ಕೆ ಇಸ್ರೇಲ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 Nov 2023 10:50 PM IST
share
ಗಾಝಾ ಪತ್ರಕರ್ತರ ವಿರುದ್ಧ ಕ್ರಮಕ್ಕೆ ಇಸ್ರೇಲ್ ಆಗ್ರಹ

ಟೆಲ್ಅವೀವ್ : ಅ. 7ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯನ್ನು ಗಾಝಾದ ಕೆಲವು ಫೋಟೊ ಜರ್ನಲಿಸ್ಟ್ಗಳು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದು ವರದಿ ಮಾಡಿದ್ದು ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಗುರುವಾರ ಇಸ್ರೇಲ್ ಆಗ್ರಹಿಸಿದೆ.

ಹಮಾಸ್ ಇಸ್ರೇಲ್ನ ಗಡಿಭಾಗದ ಪ್ರದೇಶದ ಮೇಲೆ ನಡೆಸಿದ್ದ ದಾಳಿಯನ್ನು ಗಾಝಾ ಮೂಲದ ಫೋಟೊ ಜರ್ನಲಿಸ್ಟ್(ಮಾಧ್ಯಮದ ಫೋಟೊಗ್ರಾಫರ್)ಗಳು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದು ಪ್ರಸಾರ ಮಾಡಿದ್ದಾರೆ. ಇದು ಇಸ್ರೇಲ್ ಮೇಲಿನ ದಾಳಿಯ ಬಗ್ಗೆ ಅವರಿಗೆ ಮೊದಲೇ ಮಾಹಿತಿಯಿತ್ತು ಎಂಬ ಸಂದೇಹಕ್ಕೆ ಕಾರಣವಾಗಿದೆ ಎಂದು ಇಸ್ರೇಲ್ನ ಮಾಧ್ಯಮ ನಿಗಾ ಸಂಸ್ಥೆ `ಹಾನೆಸ್ಟ್ ರಿಪೋರ್ಟಿಂಗ್' ವರದಿ ಮಾಡಿದೆ. `ಅಂತರ್ ರಾಷ್ಟ್ರೀಯ ಮಾಧ್ಯಮಗಳಲ್ಲಿ ಕೆಲಸ ಮಾಡುವ ಕೆಲವು ಫೋಟೊ ಜರ್ನಲಿಸ್ಟ್ಗಳು ಹಮಾಸ್ ಅ. 7ರಂದು ನಡೆಸಿದ ಕ್ರೂರ ಕೃತ್ಯಗಳಲ್ಲಿ ಕೈಜೋಡಿಸಿರುವುದು ಅತ್ಯಂತ ಖಂಡನೀಯ ಕೃತ್ಯವಾಗಿದ್ದು ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಪತ್ರಕರ್ತರು ಮಾನವೀಯತೆಯ ವಿರುದ್ಧದ ಅಪರಾಧಗಳಲ್ಲಿ ಸಹಚರರು ಆಗಿದ್ದು ಅವರ ಕ್ರಮಗಳು ವೃತ್ತಿಪರ ನೀತಿಗೆ ವಿರುದ್ಧವಾಗಿದೆ ' ಎಂದು ಇಸ್ರೇಲ್ ಸರಕಾರ ಆಗ್ರಹಿಸಿದೆ. 6 ಮಂದಿ ಸ್ವತಂತ್ರ ಫೋಟೊ ಜರ್ನಲಿಸ್ಟ್ಗಳ ಹೆಸರನ್ನು ವರದಿಯಲ್ಲಿ ಉಲ್ಲೇಖಿಸಿದ್ದು ಇವರು `ರಾಯ್ಟರ್ಸ್, ಅಸೋಸಿಯೇಟೆಡ್ ಪ್ರೆಸ್ ಮತ್ತು ನ್ಯೂಯಾರ್ಕ್ ಟೈಮ್ಸ್'ನಲ್ಲಿ ಕೆಲಸ ಮಾಡುತ್ತಿದ್ದು ಇಸ್ರೇಲ್ನ ಟ್ಯಾಂಕ್ ಬೆಂಕಿಯಲ್ಲಿ ಉರಿಯುತ್ತಿರುವ, ಹಮಾಸ್ ನಾಗರಿಕರನ್ನು ಅಪಹರಿಸುವ ಫೋಟೊವನ್ನು ತೆಗೆದಿದ್ದಾರೆ ಎಂದು ಇಸ್ರೇಲ್ ಹೇಳಿದೆ. ಆದರೆ ಆರೋಪವನ್ನು ರಾಯ್ಟರ್ಸ್ ನಿರಾಕರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X