Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಿತ್ರರಾಷ್ಟ್ರಗಳನ್ನು ಸಂಪರ್ಕಿಸಿ...

ಮಿತ್ರರಾಷ್ಟ್ರಗಳನ್ನು ಸಂಪರ್ಕಿಸಿ ರಾಜತಾಂತ್ರಿಕ ಬೆಂಬಲ ಕೋರಿದ ಪಾಕಿಸ್ತಾನ

ಚೀನಾ, ಟರ್ಕಿ, ಇರಾನ್, ಈಜಿಪ್ಟ್, ಸೌದಿ ಜತೆ ಮಾತುಕತೆ

ವಾರ್ತಾಭಾರತಿವಾರ್ತಾಭಾರತಿ27 April 2025 10:36 PM IST
share
ಮಿತ್ರರಾಷ್ಟ್ರಗಳನ್ನು ಸಂಪರ್ಕಿಸಿ ರಾಜತಾಂತ್ರಿಕ ಬೆಂಬಲ ಕೋರಿದ ಪಾಕಿಸ್ತಾನ

ಇಸ್ಲಾಮಾಬಾದ್: ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಬಳಿಕ ಭಾರತದ ಜೊತೆಗಿನ ಉದ್ವಿಗ್ನತೆ ಹೆಚ್ಚಿರುವಂತೆಯೇ ಪಾಕಿಸ್ತಾನದ ಉನ್ನತ ನಾಯಕರು ಪ್ರಾದೇಶಿಕ ಮಿತ್ರರಾಷ್ಟ್ರಗಳಾದ ಚೀನಾ, ಸೌದಿ ಅರೆಬಿಯಾ, ಇರಾನ್, ಈಜಿಪ್ಟ್ ಮುಖಂಡರನ್ನು ಸಂಪರ್ಕಿಸಿ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ರವಾನಿಸಿದ್ದು ರಾಜತಾಂತ್ರಿಕ ಬೆಂಬಲ ಕೋರಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಷಾಕ್ ದಾರ್ ಶನಿವಾರ ಈಜಿಪ್ಟ್, ಟರ್ಕಿ ಮತ್ತು ಸೌದಿ ಅರೆಬಿಯಾದ ವಿದೇಶಾಂಗ ಸಚಿವರ ಜತೆ ಮಾತುಕತೆ ನಡೆಸಿದ್ದು ರಾಜತಾಂತ್ರಿಕ ಬೆಂಬಲ ಕೋರಿದ್ದಾರೆ.

ಪ್ರಧಾನಿ ಶಹಬಾಝ್ ಷರೀಫ್ ಶನಿವಾರ ಇರಾನ್ ಅಧ್ಯಕ್ಷ ಮಸೂದ್ ಪೆಜೆಷ್ಕಿಯಾನ್ ಜತೆ ಮಾತುಕತೆ ನಡೆಸಿದ್ದು , ಭಾರತ ಮತ್ತು ಪಾಕಿಸ್ತಾನದ ನಡುವೆ ಶಾಂತಿ ನೆಲೆಸುವಂತಾಗಲು ಇರಾನ್ ನಡೆಸುವ ಯಾವುದೇ ಪ್ರಯತ್ನವನ್ನು ಸ್ವಾಗತಿಸುವುದಾಗಿ ಹೇಳಿದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಉಪಪ್ರಧಾನಿ, ವಿದೇಶಾಂಗ ಸಚಿವ ದಾರ್ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಜತೆ ದೂರವಾಣಿಯಲ್ಲಿ ನಡೆದ ಮಾತುಕತೆ ಸಂದರ್ಭ ಇತ್ತೀಚಿನ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿದರು. ಇಬ್ಬರು ನಾಯಕರೂ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಪುನರುಚ್ಚರಿಸಿದರು ಮತ್ತು ಪ್ರಾದೇಶಿಕ ಸ್ಥಿರತೆಯ ಬಗ್ಗೆ ಕಳವಳವನ್ನು ಹಂಚಿಕೊಂಡರು. ಪಾಕ್ ವಿದೇಶಾಂಗ ಸಚಿವರು ಭಾರತದ ಏಕಪಕ್ಷೀಯ ಮತ್ತು ಕಾನೂನುಬಾಹಿರ ಕ್ರಮಗಳನ್ನು, ಪಾಕಿಸ್ತಾನದ ವಿರುದ್ಧದ ಆಧಾರರಹಿತ ಪ್ರಚಾರವನ್ನು ಸ್ಪಷ್ಟವಾಗಿ ತಿರಸ್ಕರಿಸಿದರು ಎಂದು ಪಾಕ್ ವಿದೇಶಾಂಗ ಇಲಾಖೆ `ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ.

ಉಕ್ಕಿನಷ್ಟು ಬಲಿಷ್ಠವಾದ ಪಾಕಿಸ್ತಾನ-ಚೀನಾ ಸ್ನೇಹಕ್ಕಾಗಿ ಪಾಕಿಸ್ತಾನದ ಬದ್ಧತೆಯನ್ನು ಮತ್ತು ಸಾರ್ವಕಾಲಿಕ ಕಾರ್ಯತಂತ್ರದ ಸಹಕಾರಿ ಸಹಭಾಗಿತ್ವದ ಪರಿಕಲ್ಪನೆಗೆ ಪಾಕಿಸ್ತಾನದ ಬದ್ಧತೆಯನ್ನು ದಾರ್ ಪುನರುಚ್ಚರಿಸಿದರು. ಎರಡೂ ಕಡೆಯವರು ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಎತ್ತಿಹಿಡಿಯಲು, ಪರಸ್ಪರ ಗೌರವ ಮತ್ತು ತಿಳುವಳಿಕೆಯನ್ನು ಉತ್ತೇಜಿಸಲು ಮತ್ತು ಏಕಪಕ್ಷೀಯತೆ ಮತ್ತು ಅಧಿಪತ್ಯದ ನೀತಿಗಳನ್ನು ಜಂಟಿಯಾಗಿ ವಿರೋಧಿಸಲು ಎರಡೂ ಕಡೆಯವರು ತಮ್ಮ ದೃಢ ಸಂಕಲ್ಪವನ್ನು ಪುನರುಚ್ಚರಿಸಿದರು ಎಂದು ಹೇಳಿಕೆ ತಿಳಿಸಿದೆ.

ಈ ಪ್ರದೇಶ ಮತ್ತು ಅದರಾಚೆಗೂ ಶಾಂತಿ, ಭದ್ರತೆ ಮತ್ತು ಸುಸ್ಥಿರ ಅಭಿವೃದ್ಧಿಯ ಹಂಚಿಕೆಯ ಉದ್ದೇಶಗಳನ್ನು ಮುನ್ನಡೆಸಲು ಎಲ್ಲಾ ಹಂತಗಳಲ್ಲಿ ನಿಕಟ ಸಂವಹನ ಮತ್ತು ಸಮನ್ವಯವನ್ನು ಕಾಪಾಡಿಕೊಳ್ಳಲು ಇಬ್ಬರು ನಾಯಕರೂ ಒಪ್ಪಿಕೊಂಡರು ಎಂದು ವಿದೇಶಾಂಗ ಇಲಾಖೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X