Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪುಣೆ: ಪತ್ನಿಯ ಶೀಲ ಶಂಕಿಸಿ ಮೂರರ ಹರೆಯದ...

ಪುಣೆ: ಪತ್ನಿಯ ಶೀಲ ಶಂಕಿಸಿ ಮೂರರ ಹರೆಯದ ಪುತ್ರನ ಕತ್ತು ಸೀಳಿದ ಟೆಕ್ಕಿ

ವಾರ್ತಾಭಾರತಿವಾರ್ತಾಭಾರತಿ22 March 2025 9:44 PM IST
share
ಪುಣೆ: ಪತ್ನಿಯ ಶೀಲ ಶಂಕಿಸಿ ಮೂರರ ಹರೆಯದ ಪುತ್ರನ ಕತ್ತು ಸೀಳಿದ ಟೆಕ್ಕಿ

ಪುಣೆ: ತನ್ನ ಪತ್ನಿ ವಿವಾಹಬಾಹಿರ ಸಂಬಂಧವನ್ನು ಹೊಂದಿದ್ದಾಳೆಂದು ಶಂಕಿಸಿದ್ದ ಟೆಕ್ಕಿಯೋರ್ವ ತಮ್ಮ ಮೂರುವರೆ ವರ್ಷ ಪ್ರಾಯದ ಮಗನ ಕತ್ತನ್ನು ಸೀಳಿ, ಶವವನ್ನು ಅರಣ್ಯ ಪ್ರದೇಶದಲ್ಲಿ ಎಸೆದ ಘಟನೆ ಪುಣೆಯ ಚಂದನ ನಗರ ಪ್ರದೇಶದಲ್ಲಿ ಸಂಭವಿಸಿದೆ.

ಹಿಮ್ಮತ್ ಟಿಕೆಟಿ ಮಾಧವ ಟಿಕೆಟಿ ಮತ್ತು ಸ್ವರೂಪಾ ಅವರ ಏಕೈಕ ಪುತ್ರನಾಗಿದ್ದು, ಕುಟುಂಬವು ಆಂಧ್ರಪ್ರದೇಶದ ವಿಶಾಖಪಟ್ಟಣ ಮೂಲದ್ದಾಗಿದೆ.

ಪೋಲಿಸರ ಪ್ರಕಾರ ಮಾಧವ ಸ್ವರೂಪಾಳ ಶೀಲವನ್ನು ಶಂಕಿಸಿದ್ದ. ಗುರುವಾರ ಅಪರಾಹ್ನ ದಂಪತಿಗಳು ಜಗಳವಾಡಿಕೊಂಡಿದ್ದರು. ಕೋಪದಿಂದ ಕುದಿಯುತ್ತಿದ್ದ ಮತ್ತು ಅನುಮಾನದ ಸುಳಿಯಲ್ಲಿ ಸಿಲುಕಿದ್ದ ಮಾಧವ ಮಗನನ್ನು ತನ್ನೊಂದಿಗೆ ಕರೆದುಕೊಂಡು ಮನೆಯಿಂದ ಹೊರಬಿದ್ದಿದ್ದ. ಗಂಟೆಗಟ್ಟಲೆ ಬಾರ್ ನಲ್ಲಿ ಕುಳಿತಿದ್ದ ಆತ ಬಳಿಕ ಅಲ್ಲಿಂದ ಸೂಪರ್ ಮಾರ್ಕೆಟ್ ಗೆ ತೆರಳಿದ್ದ,ನಂತರ ಚಂದನ ನಗರ ಸಮೀಪದ ಅರಣ್ಯ ಪ್ರದೇಶವನ್ನು ತಲುಪಿದ್ದ.

ಗಂಟೆಗಳ ಕಾಲ ಪತಿ ಮತ್ತು ಪುತ್ರ ಸಂಪರ್ಕಕ್ಕೆ ಸಿಗದಿದ್ದಾಗ ಸ್ವರೂಪಾ ಆತಂಕಗೊಂಡಿದ್ದಳು. ತಡರಾತ್ರಿಯಾದರೂ ಅವರು ಮರಳದಿದ್ದಾಗ ಆಕೆ ಚಂದನ ನಗರ ಪೋಲಿಸ್ ಠಾಣೆಗೆ ತೆರಳಿ ನಾಪತ್ತೆ ದೂರನ್ನು ದಾಖಲಿಸಿದ್ದಳು.

ಪೋಲಿಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮಹತ್ವದ ವಿವರಗಳು ಬಹಿರಂಗಗೊಂಡಿದ್ದವು. ಅಪರಾಹ್ನ 2:30ಕ್ಕೆ ಮಾಧವ ಮಗನೊಂದಿಗೆ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ,ಆದರೆ 5:30ರ ದೃಶ್ಯಾವಳಿ ಆತ ಒಬ್ಬನೇ ಬಟ್ಟೆಗಳನ್ನು ಖರೀದಿಸುತ್ತಿದ್ದನ್ನು ತೋರಿಸಿತ್ತು.

ಮಾಧವನ ಮೊಬೈಲ್ ಫೋನ್ ಲೊಕೇಷನ್ ಹಿಂದೆ ಬಿದ್ದಿದ್ದ ಪೋಲಿಸರು ಆತನನ್ನು ಲಾಡ್ಜ್ವೊಂದರಿಂದ ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಆ ವೇಳೆಗೆ ಆತ ಪಾನಮತ್ತನಾಗಿದ್ದ.

ಪ್ರಜ್ಞೆ ಮರಳಿದ ಬಳಿಕ ಮಾಧವ ಮಗನ ಕೊಲೆ ಮಾಡಿದ್ದನ್ನು ಒಪ್ಪಿಕೊಂಡಿದ್ದ. ಸಮೀಪದ ಅರಣ್ಯದಲ್ಲಿಯ ಅಪರಾಧ ಸ್ಥಳಕ್ಕೆ ತೆರಳಿದ ಪೋಲಿಸರು ಅಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿದ್ದ ಮಗುವಿನ ಮೃತದೇಹವನ್ನು ಪತ್ತೆ ಹಚ್ಚಿದ್ದರು.

ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೋಲಿಸರು ಮಾಧವನನ್ನು ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದು,ತನಿಖೆಯನ್ನು ಮುಂದುವರಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X