ಕಲಬುರಗಿ | ಲಾರಿ-ಕಾರು ಮಧ್ಯೆ ಭೀಕರ ಅಪಘಾತ; ಮೂವರು ಮೃತ್ಯು

ಕಲಬುರಗಿ: ಲಾರಿ ಮತ್ತು ಕಾರೊಂದರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂಚೋಳಿ ತಾಲೂಕಿನ ಮಗದಂಪುರ ಗ್ರಾಮದ ಸಮೀಪ ಇಂದು ನಡೆದಿದೆ.
ಬೀದರ್ ನಿಂದ ತೆಲಂಗಾಣದ ಧಾರೂರ್ ಗೆ ತೆರಳುದ್ದ ಕಾರು ಮತ್ತು ತೆಲಂಗಾಣದಿಂದ ಚಿಂಚೋಳಿ ಕಡೆಗೆ ಬರುತ್ತಿದ್ದ ಲಾರಿ ಮಧ್ಯೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದು, ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕುಂಚಾವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
Next Story