ಕಲಬುರಗಿ | ಸಂತ್ರಸ್ವಾಡಿ ಶಾಲೆಯಲ್ಲಿ ಡಾ.ಅಂಬೇಡ್ಕರ್ ಜಯಂತಿ ಆಚರಣೆ

ಕಲಬುರಗಿ : ನಗರದ ಸಂತ್ರಸ್ವಾಡಿ ಪ್ರದೇಶದಲ್ಲಿರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇಯ ಜಯಂತಿಯನ್ನು ಆಚರಿಸಲಾಯಿತು.
ವಸತಿ ಶಾಲೆಯ ಮುಖ್ಯ ಗುರುಗಳಾದ ವೀರೇಶ್ ಬಡಿಗೇರ್ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಭೀಮಣ್ಣ ಮಹಾಗಾಂವ, ಮಲ್ಲಿಕಾರ್ಜುನ ಸರ್ , ಮೀನಾಕ್ಷಿ, ಶ್ರುತಿ ಮೇಡಂ ಹಾಗೂ ಅಡುಗೆ ಸಿಬ್ಬಂದಿಗಳು ಹಾಜರಿದ್ದರು.
Next Story