ಕಲಬುರಗಿ: ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಕಲಬುರಗಿ: ಸಾಲಬಾಧೆಯಿಂದ ಜಮೀನಿನಲ್ಲಿ ನೇಣು ಬಿಗಿದುಕೊಂಡು ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಮಲಾಪುರ ತಾಲ್ಲೂಕಿನಲ್ಲಿ ನಡೆದಿದೆ.
ಕೊಟ್ಟರಗಾ ಗ್ರಾಮದ ರೈತ ಸೂರ್ಯಕಾಂತ ಅಂಬಾರಾಯ ಹಂಗರಗಿ (34) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದುಬಂದಿದೆ.
ಚಿಂಚನಸೂರ ಪಿಕೆಜಿಬಿಯಲ್ಲಿ 2 ಲಕ್ಷ ಹಾಗೂ 5 ಲಕ್ಷ ಖಾಸಗಿ ಸಾಲವಿದೆ ಎಂದು ತಿಳಿದುಬಂದಿದೆ.
ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದಾರೆ.
Next Story