Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಬೆಳಗುಂಪಾ ಕುರಿಗಾಯಿ ಮೃತ್ಯು...

ಕಲಬುರಗಿ | ಬೆಳಗುಂಪಾ ಕುರಿಗಾಯಿ ಮೃತ್ಯು ಪ್ರಕರಣ : ಸಾವಿನಲ್ಲಿ ರಾಜಕಾರಣ ಬೇಡವೆಂದ ಕಾಂಗ್ರೆಸ್ ಮುಖಂಡರು

ವಾರ್ತಾಭಾರತಿವಾರ್ತಾಭಾರತಿ18 April 2025 7:27 PM IST
share
Photo of Press meet

ಕಲಬುರಗಿ : ಚಿತ್ತಾಪುರ ತಾಲೂಕಿನ ಬೆಳಗುಂಪ ಗ್ರಾಮದಲ್ಲಿ ಕುರಿಗಾಯಿಯೊರ್ವ ನದಿಯ ಮರಳಿನ ಗುಂಡಿಯಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಕುರಿತು ಬಿಜೆಪಿ ಮುಖಂಡರು ರಾಜಕೀಯ ಮಾಡಬಾರದು ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕನಕನೂರ್ ಹಾಗೂ ಜಗದೇವ ಗುತ್ತೇದಾರ್ ಹೇಳಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಯುವಕನನ್ನು ಕಳೆದುಕೊಂಡ ಕುಟುಂಬ ಸಂಕಷ್ಟದಲ್ಲಿದೆ. ಇದಕ್ಕೆ ಸ್ಪಂದಿಸಿದ ಜಮೀನಿನ ಮಾಲಕರು 10 ಲಕ್ಷ ರೂ. ಸಹಾಯ ನೀಡಿದ್ದಾರೆ. ಜೊತೆಗೆ, ಸಂತ್ರಸ್ತ ಕುಟುಂಬಕ್ಕೆ ಒಂದು ಸರಕಾರಿ ನೌಕರಿ, ಮನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ್ದಾರೆ. ಹಾಗಾಗಿ ಬಿಜೆಪಿ ನಾಯಕರು ಅನಗತ್ಯವಾಗಿ ರಾಜಕಾರಣ ಮಾಡಬಾರದು ಎಂದರು.

ಮೃತ ಯುವಕನ ತಾಯಿಯೇ ಮಗನ ಸಾವಿನಲ್ಲಿ ರಾಜಕೀಯ ಬೇಡ ಎಂದು ಮನವಿ ಮಾಡಿದ್ದಾರೆ. ಇಷ್ಟಾದರೂ ಬಿಜೆಪಿ ನಾಯಕರು ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಖೇದ ವ್ಯಕ್ತಪಡಿಸಿದರು.

ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ಅವರನ್ನು ಕಂಡರೆ ಜೇನು ತುಪ್ಪದ ಮೇಲೆ ಬಿದ್ದಂತೆ ಮುಗಿಬೀಳುತ್ತಾರೆ. ಸಣ್ಣ ಸಣ್ಣ ವಿಷಯಗಳಿಗೂ ಅವರ ಮೇಲೆ ಬೊಟ್ಟು ಮಾಡುವುದು ಸರಿಯಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಬೆಳಗುಂಪಾ ಗ್ರಾಮದ ಸಂತ್ರಸ್ತ ಮೃತನ ಕುಟುಂಬಕ್ಕೆ ಭೇಟಿ ನೀಡುವುದು ಸರಿಯಲ್ಲ. ಮೊದಲೇ ನೊಂದಿರುವ ಕುಟುಂಬಕ್ಕೆ ಮತ್ತೆ ನೋವು ಕೊಡುವುದು ಬೇಡ ಎಂದು ಹೇಳಿದರು.

ಇದೇವೇಳೆ, ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಪ್ರಧಾನಿ ಮೋದಿ ಕಲಬುರಗಿಯ ಭಾಷಣದಲ್ಲಿ ಕೋಲಿ ಸಮಾಜವನ್ನು ಎಸ್.ಟಿ ಪ್ರವರ್ಗಕ್ಕೆ ಸೇರಿಸುವುದಾಗಿ ಹೇಳಿದ್ದರು. ಆ ಮಾತಿನ ಮೇಲೆ ವಿಶ್ವಾಸವಿಟ್ಟು ನಮ್ಮ ಸಮುದಾಯದ ಜನರು ಮತ ಹಾಕಿದ್ದಾರೆ. ಆದರೆ 10 ವರ್ಷ ಕಳೆದರೂ ಕೋಲಿ ಸಮಾಜವನ್ನು ಎಸ್.ಟಿಗೆ ಸೇರಿಸುವ ಕಾರ್ಯ ಆಗಿಲ್ಲ. ಯಡಿಯೂರಪ್ಪ ಅವರ ಸಮಯದಿಂದಲೂ ಇದನ್ನೇ ಕೇಳುತ್ತಿದ್ದೇವೆ. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಉತ್ತರಿಸಬೇಕು ಎಂದು ಸವಾಲು ಎಸೆದರು.

ಕೇಳದೆ ಇದ್ದವರಿಗೆ ಶೇ.10 ಮೀಸಲಾತಿ ಕೊಟ್ಟಿದ್ದಾರೆ. ನಾವು 1996ರಿಂದ ಕೇಳುತ್ತಿದ್ದರೂ ನಮಗೆ ನ್ಯಾಯ ಕೊಟ್ಟಿಲ್ಲ ಎಂದು ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದರು.

ಜಗದೇವ ಗುತ್ತೇದಾರ್ ಮಾತನಾಡಿ, ಬಿಜೆಪಿ ನಾಯಕರಿಗೆ ಹೆಣದ ಮೇಲೆ ರಾಜಕೀಯ ಮಾಡುವುದು ರೂಢಿಯಾಗಿದೆ. ಹಾಗಾಗಿ ಯಾರಾದರೂ ಸತ್ತರೆ ತಕ್ಷಣ ಅಲ್ಲಿ ಬಿಜೆಪಿ ನಾಯಕರು ಹಾಜರಾಗುತ್ತಾರೆ. ಇವರಿಗೆ ಕೋಮುಗಲಭೆ, ಹೆಣಗಳ ಮೇಲೆ ರಾಜಕೀಯ ಮಾಡುವುದು ಬಿಟ್ಟು ಬೇರೆ ಏನೂ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಎಲ್ಲಿಯೇ ಅಕ್ರಮ ಮರಳು ದಂಧೆ ನಡೆದರೂ ಅಂಥವರನ್ನು ಒದ್ದು ಒಳಗೆ ಹಾಕುವಂತೆ ಇತ್ತೀಚಿಗೆ ನಡೆದ ಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಹ ಇದೇವೇಳೆ ಗುತ್ತೇದಾರ್ ಪ್ರಸ್ತಾಪಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರವೀಣ್ ಪಾಟೀಲ್ ಹರವಾಳ್ ಸೇರಿದಂತೆ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X