ಕಲಬುರಗಿ | ಎ.14 ರಂದು ಡಾ.ಬಾಬಾ ಸಾಹೇಬ ಅಂಬೇಡ್ಕರ್ ಜಯಂತಿ ಆಚರಣೆ

ಡಾ.ಅಂಬೇಡ್ಕರ್
ಕಲಬುರಗಿ : ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕ ತಿ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಹಾಗೂ ಭಾರತ ರತ್ನ ಡಾ.ಬಾಬಾ ಸಾಹೇಬ ಅಂಬೇಡ್ಕರ್ ರವರ 134ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಎ.14 ರಂದು ಕಲಬುರಗಿ ಜಗತ್ ವೃತ್ತದ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿ ಹತ್ತಿರ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ಡಾ.ಬಾಬಾ ಸಾಹೇಬ ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಬೆಳಿಗ್ಗೆ 9.30 ಗಂಟೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ರಾಜ್ಯದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯಸಿಂಗ್, ಅಫಜಲಪುರ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಂ.ವೈ.ಪಾಟೀಲ್, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಝ್ ಫಾತೀಮಾ, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್.ಪಾಟೀಲ್ ಹಾಗೂ ಕರ್ನಾಟಕ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಅವರು ಗೌರವ ಉಪಸ್ಥಿತಿವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ಆರ್.ದೊಡ್ಡಮನಿ, ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರುಗಳಾದ ಬಸವರಾಜ ಮತ್ತಿಮಡು, ಡಾ.ಅವಿನಾಶ್ ಉಮೇಶ ಜಾಧವ, ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ.ನಮೋಶಿ, ಡಾ.ಬಿ.ಜಿ.ಪಾಟೀಲ, ಡಾ.ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ.ಸಾಬಣ್ಣ ತಳವಾರ, ತಿಮ್ಮಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಮಹಾನಗರಪಾಲಿಕೆ ಮಹಾಪೌರ ಯಲ್ಲಪ್ಪ ನಾಯ್ಕೋಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಅಜಯ ಹಿಲೋರಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಎಂ. ಸುಂದರೇಶ ಬಾಬು ಹಾಗೂ ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ ಎಸ್ ಹಾಗೂ ಕಲಬುರಗಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ರವರ ಜಯಂತ್ಯೋತ್ಸವ ಆಚರಣೆ ಸಮಿತಿಯ ಅಧ್ಯಕ್ಷ ವಾಸು ಎಸ್.ವಂಟಿ ಅವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರುವರು. ಕಲಬುರಗಿ ಗೋದುತಾಯಿ ದೊಡ್ಡಪ್ಪ ಅಪ್ಪ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪುಟ್ಟಮಣಿ ದೇವಿದಾಸ ಅವರು ವಿಶೇಷ ಉಪನ್ಯಾಸ ನೀಡುವರು.