Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | 'ಜೈ ಭೀಮ್' ಎಂದರೆ...

ಕಲಬುರಗಿ | 'ಜೈ ಭೀಮ್' ಎಂದರೆ ಮನುವಾದಿಗಳಿಗೆ ನಡುಕ ಹುಟ್ಟುತ್ತದೆ : ದಿವ್ಯಾ ಸುನೀಲ್

ವಾರ್ತಾಭಾರತಿವಾರ್ತಾಭಾರತಿ24 April 2025 8:58 PM IST
share
ಕಲಬುರಗಿ | ಜೈ ಭೀಮ್ ಎಂದರೆ ಮನುವಾದಿಗಳಿಗೆ ನಡುಕ ಹುಟ್ಟುತ್ತದೆ : ದಿವ್ಯಾ ಸುನೀಲ್

ಕಲಬುರಗಿ : ಸ್ವಾಭಿಮಾನ ಸರ್ವ ಧರ್ಮ ಸಮನ್ವಯ ಸಮಿತಿ ಸೇಡಂ ನೇತೃತ್ವದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ 134ನೇ ಜಯಂತೋತ್ಸವ ಆಚರಣೆ ಪ್ರಯುಕ್ತ ʼಸ್ವಾಭಿಮಾನ ಸಮಾವೇಶ ಕಾರ್ಯಕ್ರಮʼ ಬುಧವಾರ ನಡೆಯಿತು.

ಕಾರ್ಯಕ್ರಮದ ವಿಶೇಷ ಆಹ್ವಾನಿತ ಭಾಷಣಕಾರರಾಗಿ ಆಗಮಿಸಿದ ಮಹಾರಾಷ್ಟ್ರ ಮೂಲದ ದಿವ್ಯಾ ಸುನೀಲ್ ಅವರು ಮಾತನಾಡಿ, ದೇಶದೆಲ್ಲೆಡೆ ಅಂಬೇಡ್ಕರ್ ಹೆಸರು ಅಮರವಾಗಿದ್ದು, ಇಡೀ ಜೈ ಭೀಮ್ ಬಂಧುಗಳು ಒಗ್ಗಟ್ಟಿನಿಂದ ಜೈ ಭೀಮ್ ಎಂದು ಘೋಷಣೆ ಹಾಕಿದರೆ ಸಾಕು, ವಿಧಾನಸೌಧವೇ ನಡುಗುತ್ತೆ ಎಂದು ಹೇಳಿದರು.

ಅಂಬೇಡ್ಕರ್ ಬರೆದ ಸಂವಿಧಾನ ಮುಖಾಂತರವೇ ಕೇಂದ್ರದಲ್ಲಿ ಪ್ರದಾನ ಮಂತ್ರಿಯಾಗಿ ನರೇಂದ್ರ ಮೋದಿ ಅಧಿಕಾರದಲ್ಲಿದ್ದಾರೆ ಎಂದು ಮರೆಯಬಾರದು ಎಂದರು.

ಸ್ವಾತಂತ್ರ್ಯವಾಗಿ ಬದುಕಲು ಅಂಬೇಡ್ಕರ್ ನೆರಳು ಇಡೀ ದೇಶಕ್ಕೆ ಪಸರಿಸಿದೆ, ಯಾವುದಕ್ಕೂ ಹೆದರದೆ ನಿರ್ಭಯದಿಂದ ಯುವಕರು ಅಂಬೇಡ್ಕರ್ ಕನಸು ನನಸಾಗುವ ಕೆಲಸ ಮಾಡಬೇಕಾಗಿದೆ ಎಂದು ಸಲಹೆ ನೀಡಿದರು.

ಅಣದೂರಿನ ಭಂತ್ಯೆ ವರಜ್ಯೋತಿ ಅವರು ಮಾತನಾಡಿ, ಅಮೆರಿಕ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಡೆಗಳಲ್ಲಿ ವಿಜೃಂಭಣೆಯಿಂದ ಡಾ.ಅಂಬೇಡ್ಕರ್ ರವರ ಜಯಂತೋತ್ಸವ ಆಚರಣೆಯನ್ನು ಒಂದು ವಾರದ ವರೆಗೆ ನಿರಂತರವಾಗಿ ಮಾಡಲಾಗುತ್ತದೆ, ದೇಶದಲ್ಲಿ ಅಂಬೇಡ್ಕರ್ ಹುಟ್ಟಿ ಬರದಿದ್ದರೆ ಮಹಿಳೆಯರು ತುಂಬ ಕಷ್ಟದಿಂದ ಬದುಕುವ ಪರಿಸ್ಥಿತಿ ಎದುರಾಗುತ್ತಿತ್ತು ಎಂದು ಅಭಿಪ್ರಾಯಪಟ್ಟರು.

ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ಮಾತನಾಡಿ, ಅಂಬೇಡ್ಕರ್ ರವರು ಒಂದೇ ಜಾತಿಗೆ ಸೀಮಿತವಾಗದೆ, ಬಹುಜನ ನಾಯಕರಾಗಿದ್ದಾರೆ. ಅದರ ಬಗ್ಗೆ ಎಲ್ಲರೂ ಅರಿತುಕೊಳ್ಳಬೇಕು ಎಂದರು.

ವೇದಿಕೆ ಮೇಲೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಐದು ಜನ ಸಾಧಕರನ್ನು ಸನ್ಮಾನ ಮಾಡಲಾಯಿತು. ಬೆಳಗ್ಗೆ ಬಸವೇಶ್ವರ ವೃತ್ತದಿಂದ ಅಟೋ ಹಾಗೂ ಬೈಕ್ ಮೂಲಕ ಪ್ರಮುಖ ರಸ್ತೆಗಳ ಮೂಲಕ ಅಂಬೇಡ್ಕರ್ ಮೂರ್ತಿ ಅವರಣದ ವರೆಗೆ ಭವ್ಯ ಮೆರವಣಿಗೆ ಹಾಗೂ ಬಸವೇಶ್ವರ ದೇವಾಲಯದಿಂದ ಚೌರಸ್ತಾ ಕೀರಣಾ ಬಜಾರ್ ಮುಖಾಂತರ ಅಂಬೇಡ್ಕರ್ ಮೂರ್ತಿ ಅವರಣವರೆಗೆ ಮೆರವಣಿಗೆ ಜರುಗಿತ್ತು, ಡೊಳ್ಳು ಕುಣಿತ, ಹಲಗಿ ಬಾರಿಸುವ ಮೂಲಕ ಲಂಬಾಣಿ ಮಹಿಳೆಯರು ತೆಲೆ ಮೇಲೆ ಕುಂಭ ಎತ್ತಿಕೊಂಡು ಕುಣಿದು ಕುಪ್ಪಳಿಸಿದರು.

ಈ ಸಂದರ್ಭದಲ್ಲಿ ಹವಾ ಮಲ್ಲಿನಾಥ, ಬಸವರಾಜ ಆರ್ ಪಾಟೀಲ್ ಉಡಗಿ, ಪ್ರಕಾಶ ಅನ್ನಾರ, ಬಿಜೆಪಿ ಮುಖಂಡ ಶಿವಕುಮಾರ್ ಜಿಕೆ ಪಾಟೀಲ್ ತೆಲ್ಕೂರ, ಪುರಸಭೆ ಅಧ್ಯಕ್ಷ ವೀರೇಂದ್ರ ರೂದ್ನೂರ, ರಾಜಶೇಖರ್ ನಿಲಂಗಿ, ಗೀತಾ ಹೋಸಮನಿ, ಗೌತಮ್ ಬೋಮನ್ನಹಳ್ಳಿ ಚಿಂಚೋಳಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷೆ ಸುಮಾ ಎಲ್ ಚುಮಾನಚೋಡಕರ್, ಶರಣು ಮೇಡಿಕಲ್, ಸುನೀಲ್ ಹಳ್ಳಿ ಸ್ವಾಭಿಮಾನ ಸರ್ವ ಧರ್ಮ ಸಮನ್ವಯ ಸಮಿತಿ ಸಂಸ್ಥಾಪಕ ಓಂಪ್ರಕಾಶ್ ಪಾಟೀಲ್, ಶಿವಕುಮಾರ್ ತೆಟ್ನಳ್ಳಿ, ಶಂಭುಲಿಂಗ ನಾಟಿಕರ್, ಕಾಶಿನಾಥ್ ಮಡಿವಾಳ, ವೇಂಕಟಯ್ಯ ಮುಸ್ತಾಜರ್. ಮಂಜುನಾಥ್ ರೆಡಿ. ಬಾಲರಾಜ್ ಗುತ್ತೆದಾರ ಜೆಡಿಎಸ್ ಜಿಲ್ಲಾಧ್ಯಕ್ಷ. ವಿಜಯಕುಮಾರ್ ಆಡಕಿ, ನಾಗಪ್ಪ ಕೋಳ್ಳಿ ಕುರಕುಂಟಾ, ಲಕ್ಷ್ಮಿನಾರಾಯಣ ಚಿಮನಚೋಡಕರ್, ಅಶ್ವಿನಿ ಮದನಕರ್, ಡಾ. ಶ್ರೀನಿವಾಸ ಮುಕದಮ್ಮ್, ಸತೀಶ್ ಪುಜಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಜಾನಕಿ ಸೇಡಂ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X