Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕಳಪೆ ಮೂಲಸೌಕರ್ಯ ಹೊಂದಿರುವ...

ಕಲಬುರಗಿ | ಕಳಪೆ ಮೂಲಸೌಕರ್ಯ ಹೊಂದಿರುವ ಪ್ಯಾರಾ ಮೆಡಿಕಲ್ ಸಂಸ್ಥೆ ಮುಚ್ಚಲು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಆದೇಶ

ʼಗುಣಮಟ್ಟಕ್ಕೆ ಹೆಚ್ಚು ಒತ್ತು ನೀಡಲು ಆದ್ಯತೆʼ

ವಾರ್ತಾಭಾರತಿವಾರ್ತಾಭಾರತಿ27 March 2025 7:12 PM IST
share
Photo of Metting

ಕಲಬುರಗಿ : ಕಳಪೆ ಗುಣಮಟ್ಟದ ಪ್ಯಾರಾ-ಮೆಡಿಕಲ್ ಕಾಲೇಜುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳಪೆ ಮೂಲ ಸೌಕರ್ಯ ಹೊಂದಿರುವ ಸಂಸ್ಥೆಗಳು ಹಾಗೂ ಅಂಗಸಂಸ್ಥೆಗಳನ್ನು ಮುಚ್ಚಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ನಿರ್ದೇಶನ ನೀಡಿದ್ದಾರೆ.

ಮೂಲಸೌಕರ್ಯ ಮತ್ತು ಬೋಧನಾ ಮಾನದಂಡಗಳನ್ನು ಪೂರೈಸಲು ವಿಫಲವಾದ ಸಂಸ್ಥೆಗಳನ್ನು ಕೂಡಲೇ ಮುಚ್ಚುವಂತೆ ಸೂಚನೆ ನೀಡಲಾಗಿದೆ.

ಗುರುವಾರ ವಿಕಾಸಸೌಧದಲ್ಲಿ ನಡೆದ ರಾಜ್ಯ ಪ್ಯಾರಾ-ಮೆಡಿಕಲ್ ಮಂಡಳಿಯ ಪರಿಶೀಲನಾ ಸಭೆಯಲ್ಲಿ ಸಚಿವರು, ಹಲವಾರು ಖಾಸಗಿ ಕಾಲೇಜುಗಳಲ್ಲಿನ ನ್ಯೂನತೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ಸಂಬಂಧ ಸಚಿವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಅಸಮರ್ಪಕ ಸೌಲಭ್ಯಗಳೊಂದಿಗೆ ಇಕ್ಕಟ್ಟಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಲೇಜುಗಳಿವೆ. ಒಂದು ಸಂಸ್ಥೆಯು ನೂರಾರು ವಿದ್ಯಾರ್ಥಿಗಳಿಗೆ ಒಂದೇ ಸೂಕ್ಷ್ಮದರ್ಶಕವನ್ನು ನೀಡುತ್ತಿದೆ ಹಾಗೂ ಇನ್ನೊಂದು ಸರಿಯಾದ ಬೆಳಕಿಲ್ಲದೆ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ಸಚಿವರಿಗೆ ವರದಿ ನೀಡಿದ್ದಾರೆ.

ಭಾರಿ ಶುಲ್ಕ ಪಡೆದರೂ ಕಳಪೆ ಬೋಧನೆ :

ಖಾಸಗಿ ಸಂಸ್ಥೆಗಳು ಅನುಮೋದನೆ ಪಡೆಯುವಾಗ ದಾರಿ ತಪ್ಪಿಸುವ ಮಾಹಿತಿ ನೀಡುತ್ತಿವೆ. ಭಾರಿ ಶುಲ್ಕವನ್ನು ವಿಧಿಸುತ್ತಿದ್ದರೂ ಅನುಮತಿಸಿದ ಗುಣಮಟ್ಟದ ಶಿಕ್ಷಣವನ್ನು ನೀಡಲು ವಿಫಲವಾಗಿವೆ ಎಂದು ಡಾ.ಪಾಟೀಲ್ ತಿಳಿಸಿದ್ದಾರೆ.

ರಾಜ್ಯದ 566 ಪ್ಯಾರಾ-ಮೆಡಿಕಲ್ ಕಾಲೇಜುಗಳಲ್ಲಿ 529 ಖಾಸಗಿಯಾಗಿ ನಡೆಸಲ್ಪಡುತ್ತಿದ್ದು, 2024-25 ಶೈಕ್ಷಣಿಕ ವರ್ಷದಲ್ಲಿ 22,256 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತಿದೆ. ಖಾಸಗಿ ಕಾಲೇಜುಗಳು ಮೂರು ವರ್ಷಗಳ ಕೋರ್ಸ್‌ಗೆ ವಾರ್ಷಿಕವಾಗಿ 20,000 ರೂ. ಶುಲ್ಕ ವಿಧಿಸುತ್ತವೆ, ಸರ್ಕಾರಿ ಸಂಸ್ಥೆಗಳು 8,500 ರೂ. ಶುಲ್ಕ ಪಡೆಯುತ್ತಿವೆ.

ಹತ್ತಕ್ಕೂ ಹೆಚ್ಚು ಕಾಲೇಜುಗಳು ಪ್ಯಾರಾ-ಮೆಡಿಕಲ್ ಮಂಡಳಿಯ ಅನುಮೋದನೆಯಿಲ್ಲದೆ ವಿದ್ಯಾರ್ಥಿಗಳನ್ನು ಇತರ ಸಂಸ್ಥೆಗಳಿಗೆ ಅಕ್ರಮವಾಗಿ ವರ್ಗಾಯಿಸಿರುವುದು ಬಹಿರಂಗವಾಗಿದೆ. ಹಲವಾರು ಸಂಸ್ಥೆಗಳು ದಾಖಲಾದ ಕೋರ್ಸ್‌ಗಳಿಗೆ ಅಗತ್ಯವಾದ ಬೋಧನೆ, ತರಬೇತಿಯನ್ನು ನೀಡುವಲ್ಲಿ ವಿಫಲವಾಗಿರುವುದು ಕಂಡುಬಂದಿದೆ.

ಪ್ಯಾರಾ ಮೆಡಿಕಲ್‌ ಕ್ಷೇತ್ರದಲ್ಲಿ ವಿವಿಧ ತರಬೇತಿ :

ಕರ್ನಾಟಕದಲ್ಲಿ ಪ್ಯಾರಾ-ಮೆಡಿಕಲ್ ಸ್ಟ್ರೀಮ್ ಅಡಿ ವಿವಿಧ ಡಿಪ್ಲೊಮಾ ಕೋರ್ಸ್‌ಗಳು, ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞಾನ (DMLT), ಡಿಪ್ಲೊಮಾ ಇನ್ ಮೆಡಿಕಲ್ ಇಮೇಜಿಂಗ್ ತಂತ್ರಜ್ಞಾನ (DMIT), ಡಿಪ್ಲೊಮಾ ಇನ್ ಹೆಲ್ತ್ ಇನ್ಸ್ಪೆಕ್ಟರ್ (DHI), ಡಿಪ್ಲೊಮಾ ಇನ್ ಮೆಡಿಕಲ್ ರೆಕಾರ್ಡ್ಸ್ ತಂತ್ರಜ್ಞಾನ (DMRT), ಡಿಪ್ಲೊಮಾ ಇನ್ ಆಪರೇಷನ್ ಥಿಯೇಟರ್ ಮತ್ತು ಅರಿವಳಿಕೆ ತಂತ್ರಜ್ಞಾನ (DOT & AT), ಡಿಪ್ಲೊಮಾ ಇನ್ ಡಯಾಲಿಸಿಸ್ ತಂತ್ರಜ್ಞಾನ (DDT), ಡಿಪ್ಲೊಮಾ ಇನ್ ಆಪ್ತಾಲ್ಮಿಕ್ ತಂತ್ರಜ್ಞಾನ (DOT), ಡಿಪ್ಲೊಮಾ ಇನ್ ಡೆಂಟಲ್ ಮೆಕ್ಯಾನಿಕ್ಸ್ (DDM) ಮತ್ತು ಡಿಪ್ಲೊಮಾ ಇನ್ ಡೆಂಟಲ್ ಹೈಜೀನ್ (DDH) ತರಬೇತಿ ನೀಡಲಾಗುತ್ತಿದೆ. ಇದರಲ್ಲಿ ಯಶಸ್ವಿಯಾದವರು ಆಸ್ಪತ್ರೆಗಳು, ವೈದ್ಯಕೀಯ ಮತ್ತು ದಂತ ಕಾಲೇಜುಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕ್ಲಿನಿಕಲ್ ಪ್ರಯೋಗಾಲಯಗಳಲ್ಲಿ ಹುದ್ದೆಗಳಿಗೆ ಅರ್ಹರಾಗುತ್ತಾರೆ.

ಪ್ಯಾರಾ-ವೈದ್ಯಕೀಯ ಶಿಕ್ಷಣದ ಗುಣಮಟ್ಟವನ್ನು ಕಾಪಾಡುವುದು ಮತ್ತು ವಿದ್ಯಾರ್ಥಿಗಳು ಆರೋಗ್ಯ ಕ್ಷೇತ್ರದಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಹಾಗೂ ಸೂಕ್ತ ವೃತ್ತಿಜೀವನಕ್ಕೆ ಸರಿಯಾದ ತರಬೇತಿಯನ್ನು ಪಡೆಯುವುದು ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಕೆಲವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

ಇಲಾಖೆ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೋಶಿನ್, ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ.ಬಿ.ಎಲ್.ಸುಜಾತಾ ರಾಥೋಡ್ ಮತ್ತು ಪ್ಯಾರಾ-ವೈದ್ಯಕೀಯ ಮಂಡಳಿಯ ವಿಶೇಷ ಅಧಿಕಾರಿ ಡಾ.ವಿಜಯ್ ಕುಮಾರ್ ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X