Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಶಿಸ್ತಿಗೆ ಇನ್ನೊಂದು ಹೆಸರೇ...

ಕಲಬುರಗಿ | ಶಿಸ್ತಿಗೆ ಇನ್ನೊಂದು ಹೆಸರೇ ಪೊಲೀಸ್ ಇಲಾಖೆ : ವರಜ್ಯೋತಿ ಬಂತೇಜಿ

ವಾರ್ತಾಭಾರತಿವಾರ್ತಾಭಾರತಿ11 April 2025 8:17 PM IST
share
ಕಲಬುರಗಿ | ಶಿಸ್ತಿಗೆ ಇನ್ನೊಂದು ಹೆಸರೇ ಪೊಲೀಸ್ ಇಲಾಖೆ : ವರಜ್ಯೋತಿ ಬಂತೇಜಿ

ಕಲಬುರಗಿ : ಇವತ್ತಿನ ಹಲವಾರು ಇಲಾಖೆಗಳಲ್ಲಿ ಅತ್ಯಂತ ಶಿಸ್ತು ಬದ್ಧತೆಯಿಂದ ಕೂಡಿದ ಇಲಾಖೆಗಳಲ್ಲಿ ಪೊಲೀಸ್ ಇಲಾಖೆ ಮೊದಲನೆಯದಾಗಿದೆ. ಶಿಸ್ತಿಗೆ ಇನ್ನೊಂದು ಹೆಸರೇ ಈ ಇಲಾಖೆಯನ್ನು ಕರೆಯಬಹುದು ಎಂದು ಅಣದೂರಿನ ವರ ಜ್ಯೋತಿ ಬಂತೇಜಿಯವರು ಹೇಳಿದರು.

ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಜಿಲ್ಲಾ ಸಿರಿಗನ್ನಡ ವೇದಿಕೆ ಮತ್ತು ಜನಕಲ್ಯಾಣ ಎಜ್ಯುಕೇಷನ್ ಅಂಡ್ ರೂರಲ್ ಡೆವಲಪ್‍ಮೆಂಟ್ ಟ್ರಸ್ಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಮುಖ್ಯಮಂತ್ರಿ ಚಿನ್ನದ ಪದಕ ವಿಜೇತ ಪುರಸ್ಕೃತರಿಗೆ ಹಮ್ಮಿಕೊಂಡ ಸಮಾರಂಭದ ಸಾನಿಧ್ಯ ವಹಿಸಿಕೊಂಡು ಆಶೀರ್ವಚನ ನೀಡಿ ಮಾತನಾಡಿದರು.

ಜಿಲ್ಲೆಯ ಐದು ಜನರಿಗೆ ನಮ್ಮವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಲಭಿಸಿದ್ದು ನನಗೆ ಸಂತೋಷವಾಗಿದೆ, ಇವತ್ತು ಒಳ್ಳೆಯವರಿಗೆ ಒಳ್ಳೆಯವರಾಗಿ, ಕೆಟ್ಟದ್ದು ಕಂಡರೆ ಶಿಕ್ಷಿಸಿ ತಮ್ಮ ಎಡೆ ಬಿಡದ ಶಿಸ್ತು ಪರಿಪಾಲಕರು ಪೊಲೀಸರಾಗಿದ್ದಾರೆ ಎಂದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಮಹೇಶ ಮೇಘಣ್ಣನವರ ಉದ್ಘಾಟಿಸಿ, ಮಾತನಾಡಿದ ಅವರು, ನಮ್ಮ ಇಲಾಖೆಯ ಸೇವೆಗೆ ಸಂದ ಗೌರವವಾಗಿದೆ, ಇಂತಹ ಅಭಿನಂದನಾ ಸಮಾರಂಭದ ಕಾರ್ಯ ಮಾಡಿದ ವೇದಿಕೆಯ ಕಾರ್ಯ ಅನುಕರಣೀಯವೆಂದರು.

ಅಭಿನಂದನಾ ಭಾಷಣ ಮಾಡಿದ ಸಾಹಿತಿ ಮತ್ತು ಜಿಲ್ಲಾ ಸಿರಿಗನ್ನಡ ವೇದಿಕೆ ಅಧ್ಯಕ್ಷ ಡಾ.ಗವಿಸಿದ್ಧಪ್ಪ ಪಾಟೀಲ ಅವರು ಮಾತನಾಡಿ, ದಕ್ಷ, ಪ್ರಮಾಣಿಕ ಸೇವೆಯನ್ನು ಮಾಡುತ್ತಾ ನಮ್ಮ ಜೀವನಕ್ಕೆ ರಕ್ಷಣೆ ನೀಡುವ ಕೆಲಸ ಮಾಡಿ, ತಮ್ಮ ಮನೆ ಮಠ, ವೈಯಕ್ತಿಕ ಜೀವನದಿಂದ ದೂರವಿದ್ದು, ಜನರ ಸೇವೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಅಧ್ಯಕ್ಷತೆ ವಹಿಸಿದ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸುರೇಶ್ ಎಸ್.ಕಾನೇಕರ, ಚಿಂಚೋಳಿ ಸರ್ಕಲ್ ಇನ್‌ಸ್ಪೆಕ್ಟರ್‌ ಕಪಿಲದೇವ ಗಢದ, ಆಳಂದ ಪೊಲೀಸ್ ಇನ್‌ಸ್ಪೆಕ್ಟರ್‌ ಶರಣಬಸಪ್ಪ ಕೊಡ್ಲಾ ಮಾತನಾಡಿದರು.

ಕಪಿಲದೇವ ಗಢದ, ಜೈಶ್ರೀ ಹೊಡಲ್, ಶರಣಬಸಪ್ಪ ಕೊಡ್ಲಾ, ಜೈಭೀಮ ಝಳಕಿ, ಅಮರ ತೇಲ್ಕರ್ ಅವರಿಗೆ ಸನ್ಮಾನಿಸಿ ಗೌರವ ಪತ್ರ ನೀಡಲಾಯಿತು. ತಾಲೂಕಾಧ್ಯಕ್ಷ ಡಾ.ಸಿದ್ಧಲಿಂಗ ದಬ್ಬಾ ಸ್ವಾಗತಿಸಿದರು, ಡಾ.ಸಿದ್ದಪ್ಪ ಹೊಸ ಮನಿ ಪ್ರಧಾನ ಕಾರ್ಯದರ್ಶಿ ಪ್ರಾಸ್ತಾವಿಕ ನುಡಿ ಆಡಿದರು.

ಡಾ.ಶ್ರೀಮಂತ ಹೊಳ್ಕರ್ ಮತ್ತು ಡಾ.ರಾಜಕುಮಾರ ಮಾಳಗೆ ನಿರೂಪಿಸಿದರು. ವೇದಿಕೆ ಕಾರ್ಯದರ್ಶಿ ಡಾ.ಶೀಲಾದೇವಿ ಎಸ್.ಬಿರಾದಾರ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X