Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಮೀಸಲಾತಿ ಎಂಬುದು ತಾಯಿಯ...

ಕಲಬುರಗಿ | ಮೀಸಲಾತಿ ಎಂಬುದು ತಾಯಿಯ ಅಂತಃಕರಣದಂತೆ : ಪ್ರೊ.ಎಸ್.ಜಿ.ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ6 April 2025 4:19 PM IST
share
ಕಲಬುರಗಿ | ಮೀಸಲಾತಿ ಎಂಬುದು ತಾಯಿಯ ಅಂತಃಕರಣದಂತೆ : ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಒದಗಿಸಿರುವ ಮೀಸಲಾತಿಯು ಒಬ್ಬ ತಾಯಿಯ ಅಂತಃಕರಣದ ಆಶಯವನ್ನು ಹೊಂದಿದೆ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಉಪಾಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಅವರು ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಮತ್ತು ರೇಶ್ಮಿ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ರವಿವಾರ ನಗರ್ಡ್ ರೇಶ್ಮಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 'ಮಾನವೀಯ ಮೌಲ್ಯಗಳ ಕುರಿತು ಗಾಂಧೀಜಿಯವರ ವಿಚಾರಗಳು' ಎಂಬ ಶಿಬಿರದ ಉದ್ಘಾಟಿಸಿ, ಆಶಯ ನುಡಿಗಳನ್ನು ಆಡಿದರು.

ತಾಯಿಯಾದವಳು ಹೇಗೆ ತನ್ನೆಲ್ಲ ಮಕ್ಕಳಿಗೆ ಸಮಾನ ಪ್ರೀತಿಯನ್ನು ಹಂಚವುದರ ಜೊತೆಗೆ ತನ್ನ ಹೊಟ್ಟೆಯಲ್ಲಿ ಹುಟ್ಟಿದ ಅಂಗವಿಕಲ ಮಗುವಿಗೆ ವಿಶೇಷ ಪ್ರೇಮವನ್ನು ಉಣಿಸುತ್ತಾಳೋ ಹಾಗೆಯೇ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ನಮಗೆ ಮೀಸಲಾತಿಯನ್ನು ನೀಡಿದ್ದಾರೆ. ಈ ಹೊತ್ತಿನ ನಮ್ಮ ಸರ್ಕಾರಗಳು ಅದರ ಮೂಲ ಆಶಯಕ್ಕೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದು, ಬಾಬಾಸಾಹೇಬರ ಸಂವಿಧಾನದ ಒಟ್ಟಾರೆಯ ಆಶಯಕ್ಕೆ ಹಾಗೂ ಮೀಸಲಾತಿಗೆ ಧಕ್ಕೆ ತರುವ ರೀತಿಯಲ್ಲಿ ಕೆಲಸ ಮಾಡುತ್ತಿವೆ ಎಂದು ತಮ್ಮ ಬೇಸರವನ್ನು ವ್ಯಕ್ತಪಡಿಸಿದರು.

ದೆಹಲಿಯ ನಿರ್ಭಯ - ಕರ್ನಾಟಕದ ಸೌಜನ್ಯಳಂತೆ ನಮ್ಮ ಹೆಣ್ಣು ಮಕ್ಕಳು ಬೀದಿ ಕಾಮುಕರ ಬಲೆಗೆ ಬೀಳದಂತೆ ನಾವು ತಡೆಯಬೇಕಿದೆ. ಅವರಿಗೆ ನ್ಯಾಯ ಕೊಡದ - ಕೊಡಿಸದ ಈ ಸಮಾಜದ ಬಗ್ಗೆ ನನಗೆ ಅಸಮಾಧಾನವಿದೆ ಎಂದ ಅವರು, ಶಿಬಿರಾರ್ಥಿಗಳಿಗೆ ಈ ಬಗ್ಗೆ ಚಿಂತಿಸುವಂತೆ ಕರೆ ನೀಡಿದರು.

ಇಂತಹ ವಿಷಯಗಳಲ್ಲದೆ, ಪ್ರತಿದಿನವೂ ನಮ್ಮ ಸುತ್ತಲಿನ ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ ಅತ್ಯಾಚಾರಗಳಿಗೆ ನೀವು ಕಿವಿಯಾಗಬೇಕು, ತೆರೆದ ಮನಸ್ಸಾಗಬೇಕು, ಹೃದಯವಾಗಬೇಕು. ಆ ಮೂಲಕವೇ ಮಾತ್ರ ನಾವು ಗಾಂಧೀಜಿಯವರಿಗೆ ಗೌರವ ಸಲ್ಲಿಸಲು ಸಾಧ್ಯವಿದೆ ಎಂದು ಹೇಳಿದರು.

ದಕ್ಷಿಣ ಆಫ್ರಿಕಾದಲ್ಲಿ ಗಾಂಧೀಜಿಯವರಿಗಾದ ಅನ್ಯಾಯವನ್ನು ಅವರು ವ್ಯಕ್ತಿಗತವಾಗಿ ಸ್ವೀಕರಿಸದೇ, ಅದನ್ನು ಸಮಾಜದ ಪಿಡುಗಾಗಿ ಕಂಡರು. ಆ ಕಾರಣಕ್ಕಾಗಿಯೇ ಭಾರತದಿಂದ ಆಫ್ರಿಕಾಗೆ ಹೋಗಿದ್ದ 'ಬ್ಯಾರಿಸ್ಟರ್' ಗಾಂಧಿ, ಮರಳಿ ಭಾರತಕ್ಕೆ ಬರುವಾಗ 'ಸತ್ಯಾಗ್ರಹಿ' ಆಗಿ ಬಂದರು. ಗಾಂಧೀಜಿಯವರ ಸಂಘಟನಾತ್ಮಕ ಹೋರಾಟಗಳ ಫಲವಾಗಿ ಭಾರತದಿಂದ ವಸಾಹತುಶಾಹಿಗಳು ಸಂಪೂರ್ಣವಾಗಿ ಹೊರಟುಹೋದರು. ಆದರೆ ಸಾಂಸ್ಕೃತಿಕ ದಾಸ್ಯತ್ವ ಉಳಿಯಿತು. ಆದರೆ ಆಫ್ರಿಕಾವನ್ನು ಈ ಸಂದರ್ಭಕ್ಕೂ ವಸಾಹತುಶಾಹಿಗಳು ಸಂಪೂರ್ಣವಾಗಿ ತಮ್ಮ ಹತೋಟಿಯಲ್ಲಿ ಇಟ್ಟುಕೊಂಡಂತೆ ಆ ದೇಶವನ್ನು ಸುಲಿಯುತ್ತಿವೆ ಎಂದರು.

ಈ ಎಲ್ಲಾ ಅನಾಹುತಗಳನ್ನು ಇಲ್ಲವಾಗಿಸುವ ಪ್ರಯತ್ನದ ನಡೆಗೆ ಗಾಂಧೀಜಿಯವರ 'ಅಹಿಂಸೆ' ಮಾತ್ರ ನಮಗೆ ಅಸ್ತ್ರವಾಗಬಲ್ಲದು ಎಂದ ಅವರು, ಇದನ್ನು ಮಹಿಳೆಯರು ಮಾತ್ರ ಅತ್ಯಂತ ಪರಿಣಾಮಕಾರಿಯಾಗಿ ಬಳಸಬಲ್ಲರು ಎಂಬುದು ನನ್ನ ಬಲವಾದ ನಂಬಿಕೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಉಪಕುಲಪತಿ ಡಾ.ಶಾಂತಾದೇವಿ, ಡಾ.ಭಾರತಿ ರೆಷ್ಮಿ, ಸರ್ವೋದಯ ವರ್ಕರ್ ಅಬ್ದುಲ್ ಭಾಯ್, ಡಾ.ಅಬೆದಾ ಬೇಗಂ, ಡಾ. ಅಶೋಕ್ ಕುಮಾರ್ ಸುರಪುರ, ಡಾ. ಗೀತಾ ಆರ್.ಎಂ. ಸೇರಿದಂತೆ ಇತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X